Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 3 ರಂದು ಇಎಸ್ಐ ಆಸ್ಪತ್ರೆ ಉದ್ಘಾಟನೆ-ಧೀರಜ್ ಮುನಿರಾಜ್

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಳೆದ ಕೆಲವು ವರ್ಷಗಳಿಂದ ಲೋಕಾರ್ಪಣೆಯಾಗದೆ ನೆನೆಗುದಿಗೆ ಬಿದ್ದಿದ್ದ ಇ ಎಸ್ ಐ  ಆಸ್ಪತ್ರೆ ಮೇ 3 ರಂದು ಉದ್ಘಾಟನೆಯಾಗಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಕಳೆದ ಎರಡು ವರ್ಷಗಳಿಂದ ಆಸ್ಪತ್ರೆ ಉದ್ಘಾಟನೆ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗ ಜಗ್ಗಾಟ ನಡೆಯುತ್ತಿತ್ತು, ಆದರೀಗ ಅಂತಿಮ ಹಂತಕ್ಕೆ ತಲುಪಿದ್ದು ಮೇ.3 ರಂದು ಆಸ್ಪತ್ರೆ ಉದ್ಘಾಟನೆಯಾಗಲಿದೆ ಎಂದರು.

ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶವಾಗಿದ್ದು  ದಿನ ನಿತ್ಯ ಲಕ್ಷಾಂತರ ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದು ಇವರ ಉಪಯೋಗಕ್ಕಾಗಿ ಹಾಗು ಬೆಂಗಳೂರಿನ ರಾಜಾಜಿ ನಗರದಲ್ಲಿರುವ ಇಎಸ್ಐ ಅಸ್ಪತ್ರೆಗೆ ಹೋಗಿ ಬರಲು ಒಂದು ದಿನ ಕಾಲ ಹರಣವಾಗುತ್ತಿತ್ತು. ಈ ವ್ಯವಸ್ಥೆಗಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟ ಹಳ್ಳಿ ಪಂಚಾಯಿತಿ ವ್ಯಾಪ್ತಿಯ ಅರಹಳ್ಳಿ ಗುಡದ್ದಹಳ್ಳಿಯಲ್ಲಿ ಕಾರ್ಮಿಕರ ಉಪಯೋಗಕ್ಕಾಗಿ ಇಎಸ್ಐ ಅಸ್ಪತ್ರೆ  2016ರಲ್ಲಿ ಶಂಕುಸ್ಥಾಪನೆ ಮಾಡಲಾಗಿತ್ತು ಅದರೆ ಮೇ. 3 ರಂದು ಉದ್ಘಾಟನೆ ಮಾಡಲಿದ್ದು ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಮನ್ಸೂಕ್ ಮಾಂಡವೀಯ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಈ ಆಸ್ಪತ್ರೆ ಉದ್ಘಾಟನೆಯಾಗಲಿದೆ, ಈ ಕಾರ್ಯಕ್ರಮಕ್ಕೆ ರಾಜ್ಯದ ಸಚಿವರುಗಳು ಆಗಮಿಸುವ ಸಾಧ್ಯತೆ ಇದೆ ಎಂದರು.

ಕೇಂದ್ರ   ಇ ಎಸ್ ಐ  ಕಾರ್ಪೋರೇಷನ್ ವತಿಯಿಂದ ವೈದ್ಯಾಧಿಕಾರಿಗಳು ಆಸ್ಪತ್ರೆಯ ಉಸ್ತುವಾರಿ ವಹಿಸಿಕೊಂಡು ಕಾರ್ಯೋನ್ಮುಖರಾಗಿದ್ದಾರೆ. ಇನ್ನು ಈ ಆಸ್ಪತ್ರೆಗೆ ವೈದ್ಯರನ್ನು ಮತ್ತು ಸಿಬ್ಬಂದಿಗಳನ್ನು ಕಾಂಟ್ರಾಕ್ಟ್ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ.

ಮೇ. 3 ರ ನಂತರ ಮೊದಲಿಗೆ 40 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ಕಾರ್ಯ ನಡೆಯಲಿದ್ದು ಮುಂದಿನ ಒಂದು ತಿಂಗಳಲ್ಲಿ ಸಂಪೂರ್ಣ ಓ ಪಿ ಡಿ ವಿಭಾಗದಲ್ಲಿ ಸರ್ಜನ್ ಗಳು ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಂದ್ರಮ್ಮನ ಆಚರಣೆ ಅಥವಾ ಬೆಳ್ದಿಂಗ್ಳಪ್ಪನ ಪೂಜೆಗೆ ಬನ್ನಿ...ಅಡ್ಡಿ ಆತಂಕಗಳಿಗೆ ಸರ್ಕಾರ ಸೊಪ್ಪು ಹಾಕದೆ ಒಳ ಮೀಸಲಾತಿ ಜಾರಿ ಮಾಡಿರುವುದು ಸ್ವಾಗತಾರ್ಹ-ಮಾದಾರಶ್ರೀಲಿಂಗರಾಜು ಎಸ್.ಎಂ. ರವರಿಗೆ ಪಿಎಚ್.ಡಿ. ಪದವಿ ಪ್ರದಾನಗ್ರಾಮೀಣ ಪ್ರತಿಭೆ ನಮಿತಾ, ವೇದಾ ಸೇರಿದಂತೆ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಗಣ್ಯರುಕೆಎಸ್&ಡಿಎಲ್ ಚಾರಿತ್ರಿಕ ಮೈಲಿಗಲ್ಲು: 2,016 ಕೋಟಿ ವಹಿವಾಟು, 507 ಕೋಟಿ ಲಾಭಕೆಎಸ್&ಡಿಎಲ್ ಚಾರಿತ್ರಿಕ ಮೈಲಿಗಲ್ಲು: 2,016 ಕೋಟಿ ವಹಿವಾಟು, 507 ಕೋಟಿ ಲಾಭದೀನದಲಿತರ ಮತ್ತು ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿದ್ದರಾಮಯ್ಯಎಸ್‌ಸಿ/ಎಸ್‌ಟಿ ಉಪಯೋಜನೆಗೆ 44,632 ಕೋಟಿ ಭಾರಿ ಅನುದಾನಜಲಜೀವನ್ ಮಿಷನ್ 2.0: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ; ಬಾಕಿ ಹಣ ಬಿಡುಗಡೆಗೆ ಆಗ್ರಹಬೆಂಗಳೂರು 'ಅರ್ಬನ್ ನಕ್ಸಲರ' ತಾಣವಾಗುತ್ತಿದೆ: ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ