Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಮಂಡಳಿ ಕೇಂದ್ರ ಕಚೇರಿ ಉದ್ಘಾಟನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭಾರತದ ಭ್ರಷ್ಟಾಚಾರ ವಿರೋಧಿ ಮಂಡಳಿ
, ರಾಷ್ಟ್ರೀಯ ಕೇಂದ್ರ ಕಚೇರಿ ಉದ್ಘಾಟನೆ ಹಾಗು ಪದಾಧಿಕಾರಿಗಳಿಗೆ ಗುರುತಿನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೂಳ್ಳಲಾಗಿತ್ತು.

ನಗರದ ಹೊರವಲಯದ ಶ್ರೀ ದೇವರಾಜು ಅರಸು ವಿದ್ಯಾಲಯದ ಪಕ್ಕದಲ್ಲಿ ಇರುವ ನೂತನ ಕೇಂದ್ರ ಕಛೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ, ರಾಜಗೋಪಾಲ ರವರ ನೇತೃತ್ವದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಣೆ ಮಾತನಾಡಿದ ಅವರು ದೇಶದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹರಡಿದೆ ಮತ್ತು ರಾಜಕೀಯ ಮತ್ತು ಅಧಿಕಾರಶಾಹಿ ಭ್ರಷ್ಟಾಚಾರ, ಸಾರ್ವಜನಿಕ ನಿಧಿಗಳ ದುರುಪಯೋಗ, ಮೋಸದ ಖರೀದಿ ಪದ್ಧತಿಗಳು ಮತ್ತು ಉನ್ನತ ಶ್ರೇಣಿಯ ಅಧಿಕಾರಿಗಳು ಸಹ ಪ್ರಮುಖ ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿದ್ದಾರೆ.

ಭ್ರಷ್ಟಾಚಾರದಿಂದ ಹೆಚ್ಚು ಪರಿಣಾಮ ಬೀರುವ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಂಗ್ರಹಣೆ, ತೆರಿಗೆ ದುರುಪಯೋಗ ಪಡಿಸುತ್ತಿದ್ದು ನಮ್ಮ ಸಂಸ್ಥೆ ಅಧರ ವಿರುದ್ದ ಹೋರಾಡಲು ಸದ್ದತೆಗಳನ್ನು ನಡೆಸುತ್ತಿದ್ದೇವೆ ಎಂದರು.

ನಂತರ   ರಾಜ್ಯ ಗೌರವ ಅಧ್ಯಕ್ಷರು ವೇಣು ಗೋಪಾಲ್   ಮಾತನಾಡಿದ ಸರ್ಕಾರದ  ಆಡಳಿತದಲ್ಲಿ ಮೂಲಸೌಕರ್ಯ, ಸಾರ್ವಜನಿಕ ಉಪಯುಕ್ತತೆಗಳು ಮತ್ತು ಪೊಲೀಸ್ ವಿವಿಧ ಸಮೀಕ್ಷೆಗಳಿಂದ ಇದು ಅತ್ಯಂತ ಭ್ರಷ್ಟ ಸಂಸ್ಥೆಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ. ಕೇಂದ್ರ ತನಿಖಾ ದಳ, ನಿಯಂತ್ರಕರು ಮತ್ತು ಲೆಕ್ಕಪರಿಶೋಧಕರ ಕಚೇರಿ ಮತ್ತು ಕೇಂದ್ರ ವಿಜಿಲೆನ್ಸ್ ಆಯೋಗ ಸೇರಿದಂತೆ ಸಂಸ್ಥೆಗಳೊಂದಿಗೆ ಸರ್ಕಾರವು ಉತ್ತಮವಾಗಿ ಅಭಿವೃದ್ಧಿ ಹೊಂದಿದ ಕಾನೂನು ಮತ್ತು ಸಾಂಸ್ಥಿಕ ಚೌಕಟ್ಟನ್ನು ಜಾರಿಗೆ ತಂದಿದೆ. ನಿರ್ದಿಷ್ಟವಾಗಿ ಸುಪ್ರೀಂ ಕೋರ್ಟ್ ಇತ್ತೀಚಿನ ವರ್ಷಗಳಲ್ಲಿ ಭ್ರಷ್ಟಾಚಾರದ ವಿರುದ್ಧ ದೃಢವಾದ ನಿಲುವನ್ನು ತೆಗೆದುಕೊಂಡಿದೆ ಮತ್ತು ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದೆ.

ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಸಾಧನೆಯೆಂದರೆ 2005 ರಲ್ಲಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಜಾರಿಗೆ ತರಲಾಗಿದೆ, ಇದು ನಾಗರಿಕರಿಗೆ ಸರ್ಕಾರಿ ಮಾಹಿತಿ ಮತ್ತು ಸಾರ್ವಜನಿಕ ವೆಚ್ಚವನ್ನು ನಿಯಂತ್ರಿಸುವ ಕಾರ್ಯವಿಧಾನವನ್ನು ನೀಡುತ್ತದೆ. ಅದರು ಕೆಲವು ಭ್ರಷ್ಟರು ದಿಕ್ಕು ತಪ್ಪಿಸುತ್ತಿದ್ದಾರೆ ಅದನ್ನ ನಿಯಂತ್ರಿಸಲು ನಮ್ಮ ಸಂಸ್ಥೆ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು. 

ಈ ಕಾರ್ಯಕ್ರಮದ್ದಲ್ಲಿ ರಾಜ್ಯ ಕಾರ್ಯದರ್ಶಿ ಎಂ ದಿಲೀಪ್ ಕುಮಾರ್ಎನ್ ಜಿ ಅರುಣ, ಬೆಂಗಳೂರು ನಗರ ಉಪಾಧ್ಯಕ್ಷರು, ಪೂರ್ವ ವಲಯ ಅಧ್ಯಕ್ಷರು ಎನ್ ಡಿ ವಿಠಲ್, ರಾಮಚಂದ್ರಯ್ಯ ಪೂರ್ವ ವಲಯ ಅಧ್ಯಕ್ಷರು, ಅನಂತಪ್ಪ ಬೆಂಗಳೂರು ಪೂರ್ವ ವಲಯ ಪ್ರಧಾನ ಕಾರ್ಯದರ್ಶಿ, ಮೋಹನ್ ಕುಮಾರ್ ಬೆಂಗಳೂರು ಪೂರ್ವ ವಲಯ ಕಾರ್ಯದರ್ಶಿನಾರಾಯಣಸ್ವಾಮಿ, ಈಶ್ವರ್ ರೆಡ್ಡಿ ವೆಂಕಟರಾಮನ್ ಹಾಗೂ ಗಜೇಂದ್ರ ಪದಾಧಿಕಾರಿಗಳು. ಹಾಜರಿದ್ದರು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ