ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸುಣ್ಣಘಟ್ಟ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಟ್ರಸ್ಟ್ ವತಿಯಿಂದ ನೂತನ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಹಾಗು ಶ್ರೀ ಗಣಪತಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಹಾಗು ನವಗ್ರಹ ದೇವರುಗಳ ಪ್ರಾಣ ಪ್ರತಿಷ್ಠಾಪನೆ ಪೂಜಾ ಕೈಂಕರ್ಯಗಳು ಸಂಭ್ರಮದಿಂದ ನಡೆಯಲಿವೆ.
ಜು 14ರಂದಬೆಳಿಗ್ಗೆ 8-00 ಗಂಟೆಗೆ ನೇತ್ರೋನ್ ಮಿಲನ, ದೇವತಾ ಪ್ರಾಣ ಪ್ರತಿಷ್ಠೆ, ನಾಡಿ ಸಂಧಾನ, ಕಳಾಹೋಮ, ಪ್ರತಿಷ್ಠಾ ಹೋಮ, ನಿರೀಕ್ಷಣೆ, ಬಿಂಬ ದರ್ಶನ, ಪೂರ್ಣಾಹುತಿ, ಕುಂಭಾಭಿಷೇಕ, ಅಲಂಕಾರ, ವಿಮಾನ ಗೋಪುರ ಅನಾವರಣ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ.
ಮಧ್ಯಾಹ್ನ 11-00 ಗಂಟೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ದಿ ಟ್ರಸ್ಟ್ ನ ಮುಖ್ಯಸ್ಥರಾದ ಎನ್.ನಾರಾಯಣಸ್ವಾಮಿ (ಪುಟ್ಟ ಸ್ವಾಮಿ)ತಿಳಿಸಿದ್ದಾರೆ.


