Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಕರೆ ನೀಡಿರುವ ಬೆನ್ನಲ್ಲೇ
, ಈ ಮುಷ್ಕರವನ್ನು ನಿರ್ಬಂಧಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಒಂದೆಡೆ ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಹೋರಾಟ ಆರಂಭವಾಗಿದ್ದರೆ, ಮತ್ತೊಂದೆಡೆ ಮುಷ್ಕರವನ್ನು ತಪ್ಪಿಸಲು ಸರ್ಕಾರದ ಮಟ್ಟದಲ್ಲಿ ಸಂಧಾನ ಸಭೆಗಳು ಕಡೆಯ ಹಂತ ತಲುಪಿವೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಹೈಕೋರ್ಟ್ ಮೆಟ್ಟಿಲೇರಿದ ಮುಷ್ಕರದ ವಿವಾದ-
ಸಾರಿಗೆ ನೌಕರರ ಮುಷ್ಕರವನ್ನು ಪ್ರಶ್ನಿಸಿ ವೇದಾವತಿ, ಲಕ್ಕಸಂದ್ರ ನಿವಾಸಿ ಶ್ರೀಧರ ಎಂಬುವವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಮುಷ್ಕರದ ನಿರ್ಧಾರವು ಕಾನೂನುಬಾಹಿರ ಎಂದು ಉಲ್ಲೇಖಿಸಲಾಗಿದ್ದು
, ಈ ಕೆಳಗಿನ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಲಾಗಿದೆ.
ಕೆಸ್ಮಾ (
KESMA) ಉಲ್ಲಂಘನೆ: ರಾಜ್ಯದಲ್ಲಿ ಜನೆವರಿ 1ರಿಂದ ಜೂನ್ 30ರವರೆಗೆ 'ಕೆಸ್ಮಾ' ಕಾಯ್ದೆಯಡಿ ಯಾವುದೇ ಮುಷ್ಕರ ನಡೆಸದಂತೆ ಈಗಾಗಲೇ ನಿರ್ಬಂಧ ಹೇರಲಾಗಿದೆ.

ಮುಂದುವರಿದ ಸಂಧಾನ ಪ್ರಕ್ರಿಯೆ: ಕಾರ್ಮಿಕ ಆಯುಕ್ತರ ನೇತೃತ್ವದಲ್ಲಿ ರಾಜಿ ಸಂಧಾನದ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮುಂದಿನ ವಿಚಾರಣೆ ಮೇ 25ಕ್ಕೆ ನಿಗದಿಯಾಗಿದೆ. ಹೀಗಿರುವಾಗ ಮಧ್ಯದಲ್ಲೇ ಮುಷ್ಕರಕ್ಕೆ ಮುಂದಾಗುವುದು ಕಾನೂನು ಬಾಹಿರ.

ವಿದ್ಯಾರ್ಥಿಗಳಿಗೆ ಸಂಕಷ್ಟ: ಸದ್ಯ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯುತ್ತಿದ್ದು, ಬಸ್ ಸಂಚಾರ ಸ್ಥಗಿತಗೊಂಡರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕವಾಗಲಿದೆ. ಹೀಗಾಗಿ ಮುಷ್ಕರಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಮೇ 20ಕ್ಕೆ ಬಸ್ ಸಂಚಾರ ಬಂದ್ ಭೀತಿ?-
ತಮ್ಮ ಪ್ರಮುಖ ಬೇಡಿಕೆಗಳಿಗಾಗಿ ಪಟ್ಟು ಹಿಡಿದಿರುವ ಸಾರಿಗೆ ನೌಕರರ ಒಕ್ಕೂಟಗಳು ಮೇ 20ರಿಂದ ರಾಜ್ಯಾದ್ಯಂತ ಬಸ್ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಒಂದು ವೇಳೆ ಮುಷ್ಕರ ನಡೆದರೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ತಬ್ಧಗೊಳ್ಳುವ ಭೀತಿ ಎದುರಾಗಿದೆ.

ಅಸಲಿ 'ಕ್ಲೈಮ್ಯಾಕ್ಸ್': ಸಂಧಾನ ಸಭೆಯತ್ತ ಎಲ್ಲರ ಚಿತ್ತ
ಸಾರಿಗೆ ನೌಕರರ ಮುಷ್ಕರ ನಡೆಯುತ್ತದೋ ಇಲ್ಲವೋ ಎಂಬ ಗೊಂದಲಕ್ಕೆ ಇಂದು ಸಂಜೆಯೊಳಗೆ ತೆರೆ ಬೀಳುವ ಸಾಧ್ಯತೆಯಿದೆ. ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಮಹತ್ವದ ಸಂಧಾನ ಸಭೆ ಕರೆಯಲಾಗಿದೆ.

ಮುಂದೇನು?: ಇಂದಿನ ಸರ್ಕಾರ ಹಾಗೂ ನೌಕರರ ನಡುವಿನ ಸಂಧಾನ ಸಭೆ ಯಶಸ್ವಿಯಾದರೆ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆಯಲಿದ್ದಾರೆ. ಒಂದು ವೇಳೆ ಮಾತುಕತೆ ವಿಫಲವಾದರೆ ಮೇ 20ರಿಂದ ಬಸ್ ಸಂಚಾರ ಬಂದ್ ಆಗುವುದು ಬಹುತೇಕ ಖಚಿತವಾಗಲಿದ್ದು, ಪ್ರತಿಭಟನೆ ಮತ್ತಷ್ಟು ಉಗ್ರರೂಪ ತಾಳಲಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲೂಕು ಜೆಡಿಎಸ್ ವತಿಯಿಂದ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಹುಟ್ಟುಹಬ್ಬ ಆಚರಣೆನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪೆಟ್ರೋಲ್, ಡೀಸೆಲ್, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆನಗರಸಭೆ ವತಿಯಿಂದ ಕಸ ಹಾಕಬೇಡಿ ಸ್ವಚ್ಛತೆಯಿಂದ ಕಾಪಾಡಿ-ಜಾಗೃತಿ ಆಂದೋಲನಇತಿಹಾಸ ಓದುವುದರ ಜೊತೆಗೆ ಹೊರಗೆ ಬಂದು ಇತಿಹಾಸ ತಿಳಿದುಕೊಳ್ಳಬೇಕುಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ ಆಚರಣೆ  ಜೆಡಿಎಸ್‌ನಲ್ಲಿ ಸ್ಥಳೀಯ ಅಸ್ಮಿತೆಯ ಕೂಗು; ಟಿಕೆಟ್ ಆಕಾಂಕ್ಷಿ ಶ್ರವಣಗೆರೆ ಶಿವಪ್ರಸಾದ್ ಗೌಡ ಪ್ರತಿಪಾದನೆಕಾಡುಗೊಲ್ಲ ಜಾತಿಗೆ ಹಿರಿಯೂರು ಉಪ ಚುನಾವಣೆಗೆ ಟಿಕೆಟ್ ನೀಡಲು ಹಕ್ಕೊತ್ತಾಯಹಿರಿಯೂರು ಉಪ ಚುನಾವಣೆ; ಕುಂಚಿಟಿಗ ಜಾತಿಗೆ ರಾಜಕೀಯ ನ್ಯಾಯ ನೀಡಲು ಹಕ್ಕೊತ್ತಾಯಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರತಂದೆಯ ಸೆಲ್ಫಿ ಹುಚ್ಚಾಟಕ್ಕೆ 4 ವರ್ಷದ ಕಂದಮ್ಮ ಬಲಿ