Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಪ್ರಭಾತ..........
ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ ಮಾರ್ಗದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕವಾಗಿ ಒಂದಷ್ಟು ಸಣ್ಣಪುಟ್ಟ ವ್ಯತ್ಯಾಸಗಳಿರಬಹುದು.

ಕೆಲವೊಮ್ಮೆ ಶ್ರೀಮಂತಿಕೆ ಹೆಚ್ಚಾಗಬಹುದು, ಕೆಲವೊಮ್ಮೆ ಬಡತನವೂ ಹೆಚ್ಚಾಗಬಹುದು. ಮತ್ತೆ ಕೆಲವೊಮ್ಮೆ ಸಾಲಗಾರರು ಆಗಬಹುದು. ಆದರೆ ಅವರ ಮನಸ್ಥಿತಿಗಳಲ್ಲಿ ಮಾತ್ರ ಬಹುತೇಕ ಸಾಮ್ಯತೆ ಇರುತ್ತದೆ.

ಎಲ್ಲರೂ ಸಾಮಾನ್ಯವಾಗಿ ಒಂದೇ ರೀತಿಯಲ್ಲಿ ಯೋಚಿಸುತ್ತಾರೆ. ಅತ್ಯಂತ ಶ್ರೀಮಂತರು, ತೀರಾ ಕಡು ಬಡವರು ಮಾತ್ರ ತಮ್ಮ ಆಲೋಚನೆಯಲ್ಲಿ ಭಿನ್ನತೆಯನ್ನು ಹೊಂದಿರುತ್ತಾರೆ. ವಠಾರ ಸಂಸ್ಕೃತಿಯೇ ಇರಲಿ ಅಥವಾ ಅಪಾರ್ಟ್ಮೆಂಟ್ ಸಂಸ್ಕೃತಿಯೇ ಇರಲಿ  ಮನಸ್ಥಿತಿ ಮಾತ್ರ ಅದೇ ಸಂಸ್ಕೃತಿಯಾಗಿರುತ್ತದೆ. ವಿದ್ಯಾಭ್ಯಾಸ ಅಥವಾ ಅಕ್ಷರಸ್ಥರ ಸಂಖ್ಯೆ ಹೆಣ್ಣು ಗಂಡು ಇಬ್ಬರಲ್ಲಿಯು ಹೆಚ್ಚಾದರೂ ಸಹ ಮನೋಭಾವ ಮಾತ್ರ ಅದೇ ಇರುತ್ತದೆ. ಆ ರೀತಿಯ ಒಂದು ವಠಾರದ ಸುಪ್ರಭಾತ.......

ಭಕ್ತಿಯ ಸುಪ್ರಭಾತವಲ್ಲ, ಬದುಕಿನ ಸುಪ್ರಭಾತ ಕೇಳಿ.......ಬಹುತೇಕ ನಗರದ ವಠಾರಗಳಲ್ಲಿ ಬೆಳಗಿನ ಸುಪ್ರಭಾತ ಸುಮಾರು 5 ಗಂಟೆಗೆ ಪ್ರಾರಂಭವಾಗುತ್ತದೆ. ಅಲೆಅಲೆಯಾಗಿ, ವಿವಿಧ ಶಭ್ದ ತರಂಗಗಳು ಕಿವಿಗಪ್ಪಳಿಸುವುದು ಒಂದು ರೋಚಕ ಅನುಭವ.........


ಒಂದು ಮನೆಯಿಂದ ಹೆಣ್ಣಿನ ಧ್ವನಿ ತನ್ನ ಗಂಡನಿಗೆ...‌‌
"
ನೋಡಿ ಸ್ಕೂಲ್ ಗೆ ಮಗೂನ ಸೇರಿಸ್ಲಿಕ್ಕೆ ನಾಳೇನೇ Last date. ಏನ್ ಮಾಡ್ತೀರೊ ಗೊತ್ತಿಲ್ಲ. 50000 ರೂಪಾಯಿ ಇವತ್ತು ರಾತ್ರಿ ಒಳಗೆ adjust ಮಾಡಲಿಲ್ಲ ಅಂದ್ರೆ, ನಾಳೆ ನೀವು ನಂದು, ನನ್ ಮಗೂದು ಹೆಣ ನೋಡ್ಬೇಕು ಅಷ್ಟೆ. "

ಇನ್ನೊಂದು ಮನೆಯಿಂದ ಗಂಡು ಧ್ವನಿ, ( ಸ್ವಗತ ) "ಅಮ್ಮ ಒಂದು ವಾರದಿಂದ ಒಂದೇ ಸಮನೆ ಕೆಮ್ತಾ ಇದಾರೆ. ಆಸ್ಪತ್ರೆಗೆ ಸೇರಿಸಬೇಕು ಅಂದ್ರೆ, ಮಿನಿಮಮ್ 5000 ರೂಪಾಯಿ ಬೇಕು. ಅಷ್ಟು ದುಡ್ಡು ನನ್ನಿಂದ ಹೊಂದಿಸಲಿಕ್ಕೆ ಆಗ್ತಾ ಇಲ್ಲ. ಛೆ, ಈ ನನ್ನ ಜನ್ಮಕ್ಕೆ ಬೆಂಕಿ ಹಾಕ. ಯಾಕಾದ್ರೂ ಬದುಕಿರಬೇಕು. "

ಮತ್ತೊಂದು ಮನೆಯೊಳಗಿನ ಗಂಡು ಧ್ವನಿ, ಕೋಪದಿಂದ,."ಲೇ, ನಾಳೆ ಒಳಗೆ ನಿಮ್ಮಪ್ಪನ ಮನೆಯಿಂದ 1 ಲಕ್ಷ ದುಡ್ಡು ತರಲಿಲ್ಲ ಅಂದ್ರೆ, ನಿನ್ನ-ಮಗೂನ, ಇಬ್ಬರನ್ನು ಸಾಯಿಸಿ ಜ್ಯೆಲಿಗೆ ಹೋಗ್ ಬಿಡ್ತೀನಿ. ಹುಷಾರ್. ಇದೇ Last chance."

ಮಗದೊಂದು ಮನೆಯಲ್ಲಿನ ಹೆಣ್ಣು ಧ್ವನಿ,‌ ಅಳುತ್ತಾ ತನ್ನ ಗಂಡನಿಗೆ, "ಅಯ್ಯೋ ಮುಂಡೆ ಮಗನೇ, ತಿನ್ನೋಕೆ ಗತಿಯಿಲ್ಲ, ರಾತ್ರಿ ಕಂಠ ಪೂರ್ತಿ ಕುಡಿದು ದನಕ್ಕೆ ಹೊಡೆದಂಗೆ ಹೊಡಿತೀಯ, ನಿನಗೆ ಬರಬಾರದು ಬರ. ದಾರಿಯಲ್ಲಿ ಓಡಾಡೋ ಯಾವುದಾದರೂ ಬಸ್ಸಿಗೆ ಸಿಕ್ಕಿ ಸಾವಾದ್ರೂ ಬರಬಾರದಾ ನಿನಗೆ. ನನ್ನ ಶಾಪ ತಟ್ಟಲಿ ನಿನಗೆ. "

ಇನ್ನೊಂದು ಮನೆಯ ಹೆಣ್ಣು ಧ್ವನಿ, ತನ್ನ ಮಗಳಿಗೆ,.." ಲೇ, ಕಾಲೇಜಿನಲ್ಲಿ ಅದ್ಯಾವನೋ ಹಿಂದೆ ಬೈಕಿನಲ್ಲಿ ಓಡಾಡ್ತಾ ಇದೀಯಂತೆ. ಇದೇ ಲಾಸ್ಟು. ಇನ್ನೊಂದ್ಸಾರಿ ಈ ವಿಷ್ಯಾ ನನ್ ಕಿವಿಗೆ ಬಿದ್ರೆ, ನಾನೇ ನೇಣಾಕಿ ಸಾಯಿಸಿ ಬಿಡ್ತೀನಿ ಹುಷಾರ್.

" Digital India, Smart city, Global leader, E-Governence, Brand Bangalore, ಹೀಗೆ ಅನೇಕ ಕನಸುಗಳನ್ನು ಜನರಲ್ಲಿ ಬಿತ್ತುತ್ತಿರುವ ಸರಕಾರಗಳು, ಕೆಳ ಮಧ್ಯಮ ವರ್ಗದ ಜನರ ಬದುಕು ಬವಣೆಗಳನ್ನು ಮೇಲಿನಿಂದ ನೋಡುತ್ತಿರುವಂತಿದೆ,

ಅಯ್ಯಾ, ಶಾಸಕರೇ, ಸಂಸದರೇ, ಮಂತ್ರಿಗಳೇ, ಅಧಿಕಾರಿಗಳೇ, ಸ್ವಲ್ಪ ಕೆಳಗಿಳಿದು ಬನ್ನಿ.ಗಮನಿಸಿ ನಮ್ಮನ್ನು, ನಿಮ್ಮ ಮುಂದಿನ ಯೋಜನೆಗಳನ್ನು ರೂಪಿಸುವ ಮೊದಲು.

ಏಕೆಂದರೆ ನಿಜವಾದ ಕೆಳ ಮಧ್ಯಮ ವರ್ಗದ ಬದುಕು ಈಗಲೂ ಇದೇ ರೀತಿಯ ಆದರೆ ಬೇರೆ ಬೇರೆ ರೂಪದಲ್ಲಿ ಬೆಳಗಿನ ನೋವಿನ ಸುಪ್ರಭಾತಗಳೊಂದಿಗೆ ಪ್ರಾರಂಭವಾಗುತ್ತದೆ.

ಇನ್ನು ರಾತ್ರಿಯ ಕರಾಳ ಬದುಕು ನರಕವನ್ನೇ ದರ್ಶನ ಮಾಡಿಸುತ್ತದೆ. ಹೊಟ್ಟೆ ತುಂಬಿದವರಿಗೆ ಇದು ಅಷ್ಟಾಗಿ ಅರ್ಥವಾಗುವುದಿಲ್ಲ. ಈ ಸುಪ್ರಭಾತ ಹಸಿದವರಿಗೆ, ನೋವು ಅನುಭವಿಸಿದವರಿಗೆ, ಕಷ್ಟಕ್ಕೆ ಸ್ಪಂದಿಸುವವರಿಗೆ ಮಾತ್ರ... ನೊಂದವರ ನೋವಾ ನೋಯದವರೆತ್ತ ಬಲ್ಲರೋ...........
ಲೇಖನ
: ವಿವೇಕಾನಂದ. ಎಚ್. ಕೆ. 9663750451.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ