Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಣೆಬೆನ್ನೂರು ರೈಲು ನಿಲ್ದಾಣ ಪರಿಶೀಲನೆ ಮತ್ತು ವಸತಿ ಗೃಹಗಳ ಉದ್ಘಾಟನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೈರುತ್ಯ ರೈಲ್ವೆಯ ಪ್ರಧಾನ ನಿರ್ವಾಹಕರಾದ ಶ್ರೀ ಮುಕುಲ್ ಸರನ್ ಮಥುರ್ ಅವರು ದಿನಾಂಕ ನವಂಬರ್ 05
, 2025 ರಂದು ಅಮೃತ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ರಾಣೆಬೆನ್ನೂರು ರೈಲು ನಿಲ್ದಾಣವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರಶಾಂತ್ ಕುಮಾರ್
, ಮುಖ್ಯ ಕಾರ್ಯಾಚರಣೆ ನಿರ್ವಾಹಕ ಸಿ. ಎಂ. ಗುಪ್ತ, ಮುಖ್ಯ ಎಂಜಿನಿಯರ್ ಮುದಿತ್ ಮಿತ್ತಲ್, ವಿಭಾಗೀಯ ರೈಲು ನಿರ್ವಾಹಕ ಮೈಸೂರು ವಿಭಾಗ ಮತ್ತು ಇತರ ಹಿರಿಯ ವಿಭಾಗೀಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು. 

ಪರಿಶೀಲನೆಯ ವೇಳೆ ಪ್ರಧಾನ ನಿರ್ವಾಹಕರು ಪ್ರಯಾಣಿಕರ ಸೌಕರ್ಯಗಳನ್ನು ಹೆಚ್ಚಿಸುವುದು ಮತ್ತು ನಿಲ್ದಾಣದ ಮೂಲಸೌಕರ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಅಮೃತ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವಿಮರ್ಶಿಸಿದರು.

ಜೊತೆಗೆ ರಾಣೆಬೆನ್ನೂರುಚಿಕ್ಕಜಾಜೂರು ಮತ್ತು ಚಿಕ್ಕಜಾಜೂರುಮೊಳಕಾಲ್ಮೂರು ವಿಭಾಗಗಳ ನಡುವೆ ವಿಂಡೋ ಟ್ರೈಲಿಂಗ್ ಇನ್ಸ್ಪೆಕ್ಷನ್ ನಡೆಸಲಾಯಿತು. ಈ ಸಂದರ್ಭದಲ್ಲಿ ಹಳಿ ಸ್ಥಿತಿ, ಸುರಕ್ಷತಾ ಅಂಶಗಳು ಮತ್ತು ವಿಭಾಗದ ಕಾರ್ಯಗಳನ್ನು ಪರಿಶೀಲಿಸಲಾಯಿತು.

ಭೇಟಿಯ ಅಂಗವಾಗಿ, ಪ್ರಧಾನ ನಿರ್ವಾಹಕರು ಸಾಸಲು ನಿಲ್ದಾಣದಿಂದ ಐರನ್ ಓರ್ ಸರಕು ರೈಲಿಗೆ ಹಸಿರು ನಿಶಾನೆ ತೋರಿಸಿದರು, ಇದು ವಿಭಾಗದ ಕಾರ್ಯ ವಿಧಾನ ಮತ್ತು ಸರಕು ಸಾರಿಗೆ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಈ ಪ್ರಯತ್ನವು ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡುವಲ್ಲಿ ಹಾಗೂ ರೈಲ್ವೆಯ ಆದಾಯವನ್ನು ವೃದ್ಧಿಸುವಲ್ಲಿ ಸರಕು ಸಂಚಾರದ ಮಹತ್ವವನ್ನು ಒತ್ತಿ ಹೇಳುತ್ತದೆ.

ಇದಲ್ಲದೆ, ಪ್ರಧಾನ ನಿರ್ವಾಹಕರು ರಾಣೆಬೆನ್ನೂರು ಮತ್ತು ಚಿಕ್ಕಜಾಜೂರಿನಲ್ಲಿ ಹೊಸದಾಗಿ ನಿರ್ಮಿಸಲಾದ ರೈಲು ವಸತಿ ಗೃಹಗಳನ್ನು ಉದ್ಘಾಟಿಸಿದರು, ಇದು ಸಿಬ್ಬಂದಿ ಕಲ್ಯಾಣ ಹಾಗೂ ರೈಲು ನೌಕರರ ವಸತಿ ಸೌಲಭ್ಯಗಳ ಸುಧಾರಣೆಯ ಮತ್ತೊಂದು ಮೈಲಿಗಲ್ಲಾಗಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ