Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸುಸ್ಥಿರ ಇಳುವರಿಗೆ ಸಮಗ್ರ ಕೃಷಿ ಪದ್ದತಿ ಸೂಕ್ತ- ಆರ್.ರಜನೀಕಾಂತ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರೈತರು ನಿರಂತರವಾಗಿ ಸುಸ್ಥಿರ ಇಳುವರಿ ಪಡೆಯಲು ಸಮಗ್ರ ಕೃಷಿ ಪದ್ದತಿ ಅಳವಡಿಕೆಯಿಂದ ಸಾಧ್ಯವಿದೆ. ರೈತರು ಏಕಬೆಳೆ ಪದ್ದತಿ ಅಳವಡಿಸದೆ ಸ್ಥಳೀಯ ಮಣ್ಣು ಮತ್ತು ಹವಾಮಾನದನುಸಾರವಾಗಿ ಬಹು ಬೆಳೆ
, ಅಂತರ ಬೆಳೆ ಮತ್ತು ಮಿಶ್ರ ಬೆಳೆ ಪದ್ದತಿಯಲ್ಲಿ ಉತ್ತಮ ಇಳುವರಿ ಪಡೆಯಬಹುವುದು ಎಂದು ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನಲ್ಲಿ ರಾಜ್ಯ ವಲಯ ಯೋಜನೆಯಡಿ ಲಾಭದಾಯಕ ಸುಸ್ಥಿರ ಸಮಗ್ರ ಕೃಷಿ ಪದ್ದತಿ ಕುರಿತು ರೈತರಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರು ಲಾಭದಾಯಕ ಸುಸ್ಥಿರ ಸಮಗ್ರ ಕೃಷಿ ಪದ್ದತಿಯಲ್ಲಿ ಹೈನುಗಾರಿಕೆಯಿಂದ ಪ್ರತಿ ದಿನ ಆದಾಯ, ಸೊಪ್ಪುಗಳನ್ನು ಬೆಳೆಯುವುದರಿಂದ ತಿಂಗಳಿಗೊಮ್ಮೆ ಆದಾಯ, ಹೆಸರು, ಉದ್ದು, ಅಲಸಂದಿ, ಸೌತೆಕಾಯಿ, ಕಲ್ಲಂಗಡಿ, ಟಮೊಟೊ ಮತ್ತು ಇತರೆ ತರಕಾರಿಗಳಿಂದ, ರೇಷ್ಮೆ ಮತ್ತು ಕೋಳಿ ಸಾಕಾಣಿಕೆಯಿಂದ 3 ತಿಂಗಳಿಗೊಮ್ಮೆ ಆದಾಯ, ಕುರಿ ಮೇಕೆ ಸಾಕಣಿಯಿಂದ 6 ತಿಂಗಳಿಗೊಮ್ಮೆ ಆದಾಯ, ಪಪ್ಪಾಯ, ಬಾಳೆ ಬೆಳೆಯಿಂದ 9 ತಿಂಗಳಿಗೊಮ್ಮೆ ಆದಾಯ, ಅಡಿಕೆ, ತೆಂಗು, ಮಾವುಗಳಿಂದ ವರ್ಷಕ್ಕೊಮ್ಮೆ ಆದಾಯ, ಸಾಗವಾನಿ, ಶ್ರೀಗಂಧ, ಹೆಬ್ಬೇವು, ಸಿಲ್ವರ್ ಓಕ್ ಮತ್ತು ಇತರೆ ಮರಗಳಿಂದ 15 ರಿಂದ 20 ವರ್ಷಕ್ಕೊಮ್ಮೆ ಆದಾಯವನ್ನು ಪಡೆಯಬಹುದಾಗಿದೆಂದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ರೈತರಿಗೆ ಪತ್ರಿಕೆ ಮಾಧ್ಯಮ, ವ್ಯಾಟ್ಸಆಪ್ ಮತ್ತು ಫೇಸ್ಬುಕ್ ಮೂಲಕ ವ್ಯಾಪಕ ಪ್ರಚಾರ ನೀಡಿ ತರಬೇತಿಗೆ ಹಾಜರಾಗಲು ಆಸಕ್ತಿ ಇರುವ ರೈತರನ್ನು ನೋಂದಾಯಿಸಿಕೊಂಡು ಹಂಗಾಮು ಆಧಾರಿತ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳ ಕುರಿತು ಸಾಂಸ್ಥಿಕ, ಗ್ರಾಮ ಮಟ್ಟದ ತರಬೇತಿ ಮತ್ತು ಗೂಗಲ್ ಮೀಟ್ ಮೂಲಕ ಆನ್‍ಲೈನ್ ತರಬೇತಿಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ತರಬೇತಿಗಳ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

ಬ್ಯಾಡರಹಳ್ಳಿ ಗ್ರಾಮದ ಇಂಧೂದರ ರವರು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಮಣ್ಣಿನ ತೇವಾಂಶ, ಫಲವತ್ತತೆ ಮತ್ತು ಸೂಕ್ಷ್ಮ ಜೀವಾಣುಗಳ ವೃದ್ದಿ ಹಾಗೂ ಸುಸ್ಥಿರ ಇಳುವರಿಗೆ ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ದತಿಗಳನ್ನು ಅಳವಡಿಕೊಳ್ಳಲು ರೈತರಿಗೆ ತಮ್ಮ ಅನುಭವ ತಿಳಿಸಿದರು.

ಗುಳಗೊಂಡನಹಳ್ಳಿ ನಾಗರಾಜಪ್ಪ ಕಳೆದ 10-12 ವರ್ಷಗಳಿಂದ ಕೃಷಿ ತ್ಯಾಜ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಎರೆಹುಳು ಸಾಕಾಣಿಕೆಯಿಂದ ಸಾವಯವ ಪದ್ದತಿಯಲ್ಲಿ ಕೃಷಿಯನ್ನು ಮಾಡುತ್ತಿದ್ದು, ಎರೆಹುಳು ಸಾಕಾಣಿಕೆಯೊಂದರಲ್ಲೇ ವರ್ಷಕ್ಕೆ 6-7 ಲಕ್ಷ ಆದಾಯಗೊಳಿಸುತ್ತಿರುವ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು. ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೆಂದ್ರದ ಹನುಮಂತನಾಯ್ಕ ರವರು ರೈತರಿಗೆ ಜೇನು ಕೃಷಿ ಪ್ರಾಮುಖ್ಯತೆ ಮತ್ತು ಉಪ ಉತ್ಪನ್ನಗಳ ಕುರಿತು ಮಾಹಿತಿ ನೀಡಿದರು.

 ತರಬೇತಿಯ ಎರಡನೇ ದಿನ ಹಿರಿಯೂರು ಪಶು ವೈದ್ಯಾಧಿಕಾರಿ ಡಾ.ನಾಗರಾಜ್ ಅವರು ರೈತರಿಗೆ ವೈಜ್ಞಾನಿಕ ಹೈನುಗಾರಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ಆಸಕ್ತ ರೈತಬಾಂಧವರು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ