Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. 

ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ  ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಲು 2001ರಲ್ಲಿ ರಾಜ್ಯ ಸರ್ಕಾರವು  ಆದೇಶ ಹೊರಡಿಸಿತು. ಅದರಂತೆ 2001ರಿಂದ 2016 ವರೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಹ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ.

2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅರ್ಹ ಪತ್ರಕರ್ತರಿಗೆ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

 ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು. 

 2017 ರಿಂದ 2023 ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.

ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ -ಮೇಲ್ ವಿಳಾಸ [email protected] ಗೆ ದಿನಾಂಕ:30-09-2024 ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ