Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಮಲಾಪುರ ಪ್ರಾದೇಶಿಕ ಕೇಂದ್ರದಿಂದ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಸ್ಥಳದಲ್ಲಿಯೇ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿಜಯನಗರ ಜಿಲ್ಲೆಯ ಪ್ರಾದೇಶಿಕ ನಿರ್ದೇಶಕ ಪ್ರಶಾಂತ್.ಎಂ ತಿಳಿಸಿದ್ದಾರೆ.

ಸಾಂಪ್ರದಾಯಿಕವಾಗಿ ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತು, ಸರಕಾರಿ, ಅರೆಸರಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ದೂರಶಿಕ್ಷಣ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ಈ ಭಾಗದ ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನದೇ ಆದ ಪ್ರಾದೇಶಿಕ ಕೇಂದ್ರವನ್ನು ನೂತನವಾಗಿ ಹೊಸಪೇಟೆಯ ಕಮಲಾಪುರದಲ್ಲಿ ಪ್ರಾರಂಭಿಸಿರುತ್ತದೆ.

ಪ್ರಥಮ ಬಿಎ, ಬಿಕಾಂ, ಬಿಎಸ್ಸಿ, ಬಿಲಿಬ್,ಐಎಸ್ಸಿ, ಬಿಸಿಎ, ಬಿಬಿಎ ಮತ್ತು ಬಿಎಸ್‌ಡಬ್ಲೂ ಹಾಗೂ ಎಂಎ ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ತೆಲುಗು, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಸಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಶಿಕ್ಷಣಶಾಸ್ತ್ರ, ಎಂಎ-ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂಕಾಂ, ವಿವಿಧ ಎಂ.ಎಸ್ಸಿ ರಸಾಯನಶಾಸ್ತ್ರ, ಜೀವಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೋಷಣೆ ಮತ್ತು ಆಹಾರ ಪದ್ಧತಿ, ಆಹಾರ ಮತ್ತು ಪೋಷಣೆ, ಜೀವರಸಾಯನಶಾಸ್ತ್ರ, ಭೂಗೋಳಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಪದವಿ ಶಿಕ್ಷಣ ಕ್ರಮಗಳಿಗೆ ವಿವಿಯ ನಿಯಮಗಳಿಗನುಗುಣವಾಗಿ ಸ್ಥಳದಲ್ಲಿಯೇ ದಾಖಲಾತಿ ಪಡೆದು ಪ್ರವೇಶ ನೀಡಲಾಗುವುದು.

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಹಾಕಿಕೊಂಡು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಹೊಸಪೇಟೆಯಲ್ಲಿ ಕಮಲಾಪುರದ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಿ, ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ, ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ಸಲ್ಲಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರವೇಶಕ್ಕೆ ಮಾ.31 ರಂದು ಕೊನೆ ದಿನ, ವಿದ್ಯಾರ್ಥಿಗಳು ಮತ್ತು ಪೋಷಕರು ಸದುಪಯೋಗ ಪಡೆದುಕೊಳ್ಳಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9945171920, 8310786885, 7353482254, 8088681698 ಕರೆ ಮಾಡಬಹುದು. ವಿವಿ ಅಂತರ್ಜಾಲ ವಿಳಾಸ : www.ksoumysuru.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ