Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ಕಾಂಗ್ರೆಸ್ಸಿನ ಭ್ರಷ್ಟಾಚಾರದ ಪ್ರಯೋಗ ಶಾಲೆಯೇ?:

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
"ಬೆಂಗಳೂರು ಮಹಾನಗರವು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಪ್ರಯೋಗ ಶಾಲೆಯಾಗಿದೆಯೇ?" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ/ಅಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಪ್ರಶ್ನಿಸಿದ್ದಾರೆ.

ಬಿಡಿಎ ವತಿಯಿಂದ ಭಾರಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪ್ರಮುಖ ಸಂಪರ್ಕ ರಸ್ತೆಯೊಂದು ಉದ್ಘಾಟನೆಗೂ ಮುನ್ನವೇ ಗುಂಡಿ ಬಿದ್ದು, ಕುಸಿದಿರುವ ಹಿನ್ನೆಲೆಯಲ್ಲಿ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

​​585 ಕೋಟಿ ವೆಚ್ಚದ ರಸ್ತೆ ಉದ್ಘಾಟನೆಗೂ ಮುನ್ನವೇ ಧರಶಾಹಿ!:
​ಮಾಗಡಿ ರಸ್ತೆಯ ಕಡಬಗೆರೆ ಕ್ರಾಸ್ ಮತ್ತು ಮೈಸೂರು ರಸ್ತೆಯನ್ನು ಸಂಪರ್ಕಿಸುವ 10.7 ಕಿ.ಮೀ ಉದ್ದದ ಪ್ರಮುಖ ಸಂಪರ್ಕ (ಆರ್ಟೀರಿಯಲ್) ರಸ್ತೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 585 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ. ಆದರೆ, ಈ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ಮುನ್ನವೇ ಕಳಪೆ ಕಾಮಗಾರಿಯಿಂದಾಗಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ.

​"ಇದು ಕೇವಲ ಒಂದು ರಸ್ತೆ ಬಾಯ್ತೆರೆದಿರುವುದಲ್ಲ; ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಲೂಟಿ, ಆಡಳಿತ ವೈಫಲ್ಯ, ನೈತಿಕ ದಿವಾಳಿತನ ಮತ್ತು ಸಾರ್ವಜನಿಕ ಹಣದ ದುರ್ಬಳಕೆಯ ಪರಾಕಾಷ್ಠೆಯನ್ನು ಭೂಮಿಯೇ ಬಾಯ್ತೆರೆದು ಕೂಗುತ್ತಿದೆ. ಬೆಂಗಳೂರಿನ ಪ್ರಾಮಾಣಿಕ ತೆರಿಗೆದಾರರ ಹಣಕ್ಕೆ ಸಿಕ್ಕ ಬೆಲೆ ಇದೇನಾ?" ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

​ಬೆಂಗಳೂರು ನಗರಾಭಿವೃದ್ಧಿ ಸಚಿವರಿಗೆ ನೇರ ಪ್ರಶ್ನೆಗಳು:
​ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಜನತೆಗೆ ಈ ಕೆಳಗಿನ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ:

585 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ಹೇಗೆ ಖರ್ಚು ಮಾಡಲಾಯಿತು?. ​ಈ ಕಾಮಗಾರಿಯ ಗುತ್ತಿಗೆಯನ್ನು ಯಾರಿಗೆ ಮತ್ತು ಯಾಕೆ ಕೊಡಲಾಯಿತು? ಕಾಮಗಾರಿಯ ಗುಣಮಟ್ಟ ಪರಿಶೀಲಿಸಬೇಕಾದ ಬಿಡಿಎ ಅಧಿಕಾರಿಗಳು ಏನು ಮಾಡುತ್ತಿದ್ದರು?. ​ಜನರ ಸುರಕ್ಷತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದೆ, ಕೇವಲ ಲೂಟಿ ಹೊಡೆಯುವುದರಲ್ಲೇ ಮಗ್ನರಾಗಿರುವ ಅಧಿಕಾರಿಗಳಿಗೆ ಉತ್ತರದಾಯಿತ್ವ ಇಲ್ಲವೇ?.

​ನ್ಯಾಯಾಂಗ ತನಿಖೆ ಹಾಗೂ ಶ್ವೇತಪತ್ರಕ್ಕೆ ಆಗ್ರಹ:
​ಕೋಟಿಗಟ್ಟಲೆ ಸಾರ್ವಜನಿಕ ಹಣವನ್ನು ನುಂಗಿ ನೀರು ಕುಡಿದಿರುವ ಈ ಕಳಪೆ ಕಾಮಗಾರಿಯ ಹೊಣೆಯನ್ನು ಸರ್ಕಾರದಲ್ಲಿ ಯಾರು ಹೊರುತ್ತಾರೆ ಎಂದು ಪ್ರಶ್ನಿಸಿರುವ ಬಿ.ವೈ. ವಿಜಯೇಂದ್ರ, "ಭೂಮಿಯೇ ಬಾಯ್ತೆರೆದರೂ ತುಂಬದ ಈ ಭ್ರಷ್ಟಾಚಾರದ ವಿರುದ್ಧ ತಕ್ಷಣವೇ ನ್ಯಾಯಾಂಗ ತನಿಖೆ ಆಗಬೇಕು ಮತ್ತು ಈ ಇಡೀ ಯೋಜನೆಯ ವೆಚ್ಚ ಹಾಗೂ ಗುಣಮಟ್ಟದ ಕುರಿತು ಸರ್ಕಾರ ತಕ್ಷಣವೇ ಶ್ವೇತಪತ್ರ ಹೊರಡಿಸಬೇಕು" ಎಂದು ಪ್ರಬಲವಾಗಿ ಒತ್ತಾಯಿಸಿದ್ದಾರೆ.

​ಬೆಂಗಳೂರಿನ ರಸ್ತೆ ಗುಂಡಿಗಳ ಹಾಗೂ ಮೂಲಸೌಕರ್ಯಗಳ ಕುರಿತು ಈಗಾಗಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನವಿರುವ ಬೆನ್ನಲ್ಲೇ, ವಿಜಯೇಂದ್ರ ಅವರ ಈ ನೇರ ವಾಗ್ದಾಳಿ ಹಾಗೂ ಶ್ವೇತಪತ್ರದ ಆಗ್ರಹವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ದೊಡ್ಡ ಮುಜುಗರ ತಂದಿಟ್ಟಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಹೆಚ್ಚಿದರೂ ಸಂಸ್ಕಾರ ಕಡಿಮೆಯಾದರೆ ಜ್ಞಾನ ನಿಷ್ಫಲ:ಜ್ಞಾನದ ಅರಿವು ಇಂದಿನ ಸಮಾಜಕ್ಕೆ ಅನಿವಾರ್ಯ: ಸಾಹಿತಿ ಮಣ್ಣೆ ಮೋಹನ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಸ್ನಾತಕ ಸಾರ್ಥಕತೆ ಸಮಾರಂಭಟ್ವಿಟರ್‌ನಲ್ಲಿ ಉಪದೇಶ ನಿಲ್ಲಿಸಿ ಸರ್ಕಾರದ ‘ರಿಯಾಲಿಟಿ ಚೆಕ್’ ಮಾಡಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಕಿಡಿಕುಮಾರಸ್ವಾಮಿ ವಿರುದ್ಧ ನಿಂದಿಸಿದವರಿಗೆ ಮಂತ್ರಿಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ ಪಿ.ಜಿ.ಆರ್. ಸಿಂಧ್ಯಾರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ಕರ್ನಾಟಕದ ಹೆಗಲಿಗೆ ದೇಶದ ನೀತಿ-ನಿರೂಪಣೆಯ ಜವಾಬ್ದಾರಿ;ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆ:ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಶಿವಕುಮಾರ್ ಮಹತ್ವದ ಸಭೆಉಕ್ಕಿನ ವಲಯದಲ್ಲಿ ಡಿಜಿಟಲೀಕರಣ ಭವಿಷ್ಯದ ಬೆಳವಣಿಗೆಗೆ ಅನಿವಾರ್ಯ: ಸಚಿವ ಹೆಚ್.ಡಿ. ಕುಮಾರಸ್ವಾಮಿ