Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸಾಮಾಜಿಕ ಜಾಲತಾಣಗಳ ಮೇಲೆ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡಿ, ನಿಯಂತ್ರಣ ಮಾಡುವುದು ಅತ್ಯಗತ್ಯ

ಚಂದ್ರವಳ್ಳಿ ನ್ಯೂಸ್, ತಿಪಟೂರು : ಸುಳ್ಳು ಸುದ್ದಿ, ಕೆಟ್ಟ ಮಾಹಿತಿಗಳ ಪೋಸ್ಟರ್ ಅಪ್ ಲೋಡ್ ಮಾಡುತ್ತಿರುವ ಸಾಮಾಜಿಕ ಜಾಲತಾಣಗಳ ಮೇಲೆ ಮೇಲ್ವಿಚಾರಣೆ ನಡೆಸಿ ನಿಯಂತ್ರಣ ಮಾಡಲು, ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವುದಲ್ಲದೆ ಅಂತಹ ಮಾಧ್ಯಮಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಸರಿಯಾದ ಕಾನೂನುಗಳು ಇಲ್ಲದ ಕಾರಣ ಮನಃಬಂದಂತಹ ವಿಚಾರಗಳನ್ನು ಹರಿಬಿಡಲಾಗುತ್ತಿದೆ. ಇಂತಹ ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಏರುವ ಅಗತ್ಯವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ನಗರದ ಎಸ್.ಎನ್.ಎಸ್. ಕನ್ವೆನ್ಷನ್ ಹಾಲ್‌ನಲ್ಲಿ ಭಾರತೀಯ ಕಾರ್ಯನಿರತ ಪರ್ತಕರ್ತರ ಒಕ್ಕೂಟದ ವತಿಯಿಂದ ೭೮ನೇ ರಾಷ್ಟ್ರೀಯ ಮಂಡಳಿ ಸಮಾವೇಶ ಅಂಗವಾಗಿ ಕಾರ್ಯನಿರತ ಪರ್ತಕರ್ತರ ಒಂದು ದಿನದ ವಿಚಾರ ಸಂಕಿರಣ ಹಾಗೂ ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಉತ್ಪನ್ನಗಳ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 ಸಂವಿಧಾನದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯ ನಾಲ್ಕನೇಯ ಅಂಗವಾಗಿ ಮಾಧ್ಯಮ ಕ್ಷೇತ್ರವನ್ನು ಗುರುತಿಸಲಾಗಿದೆ. ಎಂದಿಗೂ ಮಾಧ್ಯಮ ಕ್ಷೇತ್ರಕ್ಕೆ ಇರುವ ಅತಿ ದೊಡ್ಡ ಜವಾಬ್ದಾರಿ ಸಂವಿಧಾನದ ಆಶಯಗಳನ್ನು ಯಾವ ರೀತಿಯಲ್ಲಿ ಅನುಷ್ಠಾನ ಮಾಡುತ್ತೇನೆ ಅದರ ಜೊತೆಗೆ ಜನರ ಪರವಾಗಿ ಆಡಳಿತಕ್ಕೆ ಚುರುಕು ಮುಟ್ಟಿಸುವ, ತಪ್ಪುಗಳಾದರೆ ತಿದ್ದು ಸರಿದಾರಿಗೆ ತರುವ ಕಾರ್ಯವನ್ನು ಮಾಧ್ಯಮ ಕ್ಷೇತ್ರ ಮಾಡಬೇಕು ಎಂದು ನಮೂದಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣ ಪ್ರಮಾಣ ಹೆಚ್ಚಿದಾಗಿನಿಂದ ಪತಿಕೋದ್ಯಮ ಕ್ಷೇತ್ರಕ್ಕೆ ಹಲವು ಸವಾಲುಗಳು ಎದುರಾಗಿವೆ. ಸಾಮಾಜಿಕ ಜಾಲತಾಣದಿಂದ ವ್ಯಕ್ತಿಯ ವೈಯಕ್ತಿಕ ವಿಚಾರಗಳಿಗೆ ಧಕ್ಕೆ ತರುವ ರೀತಿಯಲ್ಲಿ ವಿಚಾರಗಳನ್ನು ಹರಿಬಿಡಲಾಗುತ್ತಿದೆ. ಇದರಿಂದಾಗಿ ಹಲವರಿಗೆ ತೊಂದರೆಗಳು ಹೆಚ್ಚಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಒಬ್ಬ ವ್ಯಕ್ತಿಯಿಂದ ಬಿತ್ತರವಾಗುವ ಒಂದು ವಿಚಾರದಿಂದ ದೇಶ, ಸಮಾಜ, ವ್ಯಕ್ತಿಯ ಮೇಲೆ ಪರಿಣಾಮಕಾರಿಯಾಗಿ ಪ್ರಭಾವ ಬೀರುವಂತಹ ಸನ್ನಿವೇಶಗಳು ನಿರ್ಮಾಣವಾಗುತ್ತಿವೆ.

 ಕರ್ನಾಟಕದಲ್ಲಿ ಬಹಳ ಒಳ್ಳೆಯ ಕಾರ್ಯಗಳನ್ನು ಮಾಧ್ಯಮದವರು ಮಾಡುತ್ತಿದ್ದಾರೆ. ಇಂದಿನ ಮಾಧ್ಯಮ ಕ್ಷೇತ್ರ ಕೇಲವು ಸತ್ಯಕ್ಕೆ ದೂರವಾದ ವಿಚಾರಗಳನ್ನು ಪ್ರಕಟಣೆ ಮಾಡುತ್ತಿದ್ದು, ರಾಜಕೀಯವಾಗಿ ತಮ್ಮ ತೀರ್ಪು ನೀಡುವ ರೀತಿಯಲ್ಲಿ ಕೂತು ಚರ್ಚಿಸುತ್ತಾರೆ. ಟಿ.ವಿ.ಮಾಧ್ಯಮಗಳಲ್ಲಿ ವಿಶೇಷ ಸಂವಾದವನ್ನು ಏರ್ಪಡಿಸಿ ವೈಯಕ್ತಿಕವಾಗಿ ತೀರ್ಪು ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಮಾಧ್ಯಮಗಳು ಸತ್ಯ ಏನು ಎಂಬುದನ್ನು ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕಿದೆಯೇ ಹೊರೆತು ಜನರ ಮುಂದೆ ತೀರ್ಪು ನೀಡಲು ಮುಂದಾಗಬಾರದು ಎಂದರು.

 ಕಲಾಕೃತಿಯ ಅಧ್ಯಕ್ಷ ಡಾ.ಶ್ರೀಧರ್ ಮಾತನಾಡಿ ವಿಶ್ವತೆಂಗು ದಿನದ ಅಂಗವಾಗಿ ವಿಶೇಷ ವಿಚಾರ ಸಂಕಿರಣವನ್ನು ಏರ್ಪಡಿಸಿದ್ದು, ಅನ್ನದಾತರ ಪ್ರಸ್ತುತ ಸಂಕಷ್ಟವನ್ನು ಪರ್ತಕರ್ತರಿಗೆ ಮನವರಿಕೆ ಮಾಡುವ ದೃಷ್ಟಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಾಧ್ಯಮಗಳು ರೈತರ ಧನಿಯಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂದರು.

 ಕಾರ್ಯನಿರತ ಪರ್ತಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಪರ್ತಕರ್ತರು ದಿನನಿತ್ಯ ಜೀವನದಲ್ಲಿ ಹಲವು ಹೊಸ ವಿಚಾರಗಳ ಬಗ್ಗೆ ಕಲಿಯುವ ಅವಕಾಶ ದೊರಯುತ್ತದೆ. ಅದರಂತೆ ಮಾಧ್ಯಮಗಳು ಮೌಲ್ಯಗಳನ್ನು ಎತ್ತಿಹಿಡಿಯುವ ಕಾರ್ಯಮಾಡಬೇಕು. ನಾವು ಮಾಡುವ ಸುದ್ದಿಗಳು ಸಮಾಜದ ಮೇಲೆ, ಯುವ ಮನಸ್ಸುಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆಂಬ ಸೂಕ್ಷ್ಮತೆ ಪತ್ರಕರ್ತರಾದವರಿಗೆ ಇರಬೇಕು ಎಂದರು. 



ಈ ಸಂದರ್ಭದಲ್ಲಿ ತೆಂಗು ಉತ್ಪನ್ನಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಶಾಸಕ ಕೆ.ಷಡಕ್ಷರಿ, ನಗರಸಭೆಯ ಅಧ್ಯಕ್ಷೆ ಯಮುನಾ ಧರಣೀಶ್, ಭಾರತೀಯ ಕಾರ್ಯನಿರತ ಪರ್ತಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ಪರಮಾನಂದ ಪಾಂಡೆ, ಹೆಚ್ಚುವರಿ ಪ್ರ.ಕಾ ಮದನಗೌಡ, ಎಂ.ವಾಸುದೇವ ಹೊಳ್ಳ, ಶಿವರಾಜು ಆಲ್ಬೂರು, ತಿಪಟೂರು ಕೃಷ್ಣ ಹಲವರು ಇದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ