Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸುವುದು ಅವೈಜ್ಞಾನಿಕ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ಸಿಗರು ಸದಾ "ಸಿದ್ದ"ಹಸ್ತರು!! ಎಂದು ಬಿಜೆಪಿ ಟೀಕಿಸಿದೆ.

ಬ್ರ್ಯಾಂಡ್ ಬೆಂಗಳೂರಿನ ದಯನೀಯ ವೈಫಲ್ಯವನ್ನು ಜನರ ಗಮನದಿಂದ ಬೇರೆಡೆ ಸೆಳೆಯಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೃಷ್ಟಿಸಿದ ಹೊಸ ನಾಟಕವೇ ರಾಮನಗರ ಜಿಲ್ಲೆಯ ಹೆಸರನ್ನು ಬದಲಿಸಲು ಹೊರಟಿದ್ದು!! ಅಸಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ ತಾಲೂಕುಗಳನ್ನು ಸೇರಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿಸಿ ರಾಮನಗರ ಜಿಲ್ಲೆಯನ್ನು ರಚಿಸಲಾಗಿತ್ತು.

 ಆ ಭಾಗದ ಜನತೆಗೆ ಇದೊಂದು ವರದಾನವಾಗಿತ್ತು. ರಾಮನಗರ ಜಿಲ್ಲಾ ಕೇಂದ್ರವಾದ ಕಾರಣ ಆ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳಿಗೂ ಹೆಚ್ಚಿನ ವೇಗ ದೊರೆತಿತ್ತು ಎಂದು ಬಿಜೆಪಿ ತಿಳಿಸಿದೆ.

ಆದರೆ ರಾಮನಗರ ಜಿಲ್ಲೆಯನ್ನು ಈಗ ಏಕಾಏಕಿ ಬೆಂಗಳೂರು ದಕ್ಷಿಣ ಎಂದು ಬದಲಿಸಲು ಹೊರಟಿರುವುದು ಮಾತ್ರ ಸಂಪೂರ್ಣ ಅವೈಜ್ಞಾನಿಕ. ಈಗಾಗಲೇ ಬೆಂಗಳೂರು ದಕ್ಷಿಣ ಎಂಬ ಲೋಕಸಭಾ ಕ್ಷೇತ್ರ ಹಾಗೂ ವಿಧಾನಸಭಾ ಕ್ಷೇತ್ರಗಳಿವೆ.

ಅದಲ್ಲದೆ ಬೆಂಗಳೂರು ದಕ್ಷಿಣ ಎಂಬ ತಾಲೂಕು ಮತ್ತು ಜಿಲ್ಲೆ ಬೆಂಗಳೂರು ನಗರ ವ್ಯಾಪ್ತಿಯನ್ನೊಳಗೊಂಡ ಪ್ರದೇಶಗಳಿಂದ ರಚನೆಯಾಗಿದೆ. ಈಗ ಏಕಾಏಕಿ ಮತ್ತೊಂದು ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಿದರೆ,ಅದು ಆಡಳಿತಾತ್ಮಕವಾಗಿ ಒಂದು ದೊಡ್ಡ ಸಮಸ್ಯೆಯನ್ನು ಸೃಷ್ಟಿಸುವುದು ನಿಶ್ಚಿತ ಎಂದು ಬಿಜೆಪಿ ಎಚ್ಚರಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವೈಯುಕ್ತಿಕ ಪ್ರತಿಷ್ಠೆ ರಾಮನಗರ ಜಿಲ್ಲೆಯ ಜನತೆಗೆ ಮತ್ತೊಂದು ಸಮಸ್ಯೆಯನ್ನು ತಂದಿಡುವುದು ಖಂಡಿತ. ಡಿ.ಕೆ.ಶಿವಕುಮಾರ್ ಅವರಿಗೆ ನಿಜಕ್ಕೂ ರಾಮನಗರ ಜಿಲ್ಲೆಯ ಜನತೆಗೆ ಒಳಿತನ್ನು ಮಾಡಬೇಕೆಂಬ ಇರಾದೆ ಇದ್ದರೆರಾಮನಗರ ಜಿಲ್ಲೆಯಾದ್ಯಂತ ಪಸರಿಸಿರುವ ರಿಪಬ್ಲಿಕ್ ಆಫ್ ಕನಕಪುರ ಮಾಡೆಲ್ ಗೆ ಅಂತ್ಯ ಹಾಡಲಿ.

ರಾಮನಗರ ಜಿಲ್ಲೆಯ ಆಧ್ಯಾತ್ಮಿಕ ಹಾಗೂ ಗ್ರಾಮೀಣ ರೇಷ್ಮೆಯ ಸೊಗಡನ್ನು ಉಳಿಸಿಕೊಂಡು ಹೋಗಲು ರಾಜಕೀಯವನ್ನು ಬದಿಗಿರಿಸಿ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಲಿ ಎಂದು ಬಿಜೆಪಿ ತಾಕೀತು ಮಾಡಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ