Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜವಾಹರ್ ಲಾಲ್ ನೆಹರೂ ಆಧುನಿಕ ಭಾರತದ ಶಿಲ್ಪಿ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ನೆಹರೂರವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು. ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು.

ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್  ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು.

ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು ಎಂದು ಸಿಎಂ ಹೇಳಿದರು.

ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ. ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಮ್, ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅದಕ್ಕೆ ನೆಹರೂರವರು ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ