LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಭೂಮಿ ಉಳಿವಿಗೆ ಜೆಡಿಎಸ್-ಬಿಜೆಪಿ ಜಂಟಿ ಸಮರ: ನಿಖಿಲ್ ಕುಮಾರಸ್ವಾಮಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​​ಬಿಡದಿ (ರಾಮನಗರ):
ರಾಜ್ಯ ಸರ್ಕಾರದ ಉದ್ದೇಶಿತ ಬಿಡದಿ ಟೌನ್‌ಶಿಪ್ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಹಾಗೂ ಸ್ಥಳೀಯ ರೈತರ ಕೃಷಿ ಭೂಮಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭವಾಗಿರುವ ಬೃಹತ್ ಪಾದಯಾತ್ರೆಗೆ ಭೈರಮಂಗಲದಲ್ಲಿ ಚಾಲನೆ ನೀಡಲಾಯಿತು. 

​ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಜಂಟಿಯಾಗಿ ಹಸಿರು ನಿಶಾನೆ ತೋರುವ ಮೂಲಕ ಈ ಐತಿಹಾಸಿಕ ಪಾದಯಾತ್ರೆಗೆ ಚಾಲನೆ ನೀಡಿದರು. 'ನಮ್ಮ ಭೂಮಿ, ನಮ್ಮ ಹಕ್ಕು' ಎಂಬ ಶೀರ್ಷಿಕೆಯಡಿ ಬಿಡದಿಯ ಬೈರಮಂಗಲ ವೃತ್ತದಿಂದ ಆರಂಭಗೊಂಡಿರುವ ಈ 38 ಕಿಲೋಮೀಟರ್ ಬೃಹತ್ ಪಾದಯಾತ್ರೆಯು ಮೂರು ದಿನಗಳ ಕಾಲ ಸಾಗಲಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಲಿದೆ.

​ನಾಯಕರ ಬೃಹತ್ ದಂಡು ಭಾಗಿ:
ಈ ಪಾದಯಾತ್ರೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ. ಸುರೇಶ್ ಬಾಬು
, ಮಾಗಡಿ ಕ್ಷೇತ್ರದ ಮಾಜಿ ಶಾಸಕರಾದ ಎ. ಮಂಜುನಾಥ್ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಾಲಿ ಹಾಗೂ ಮಾಜಿ ಶಾಸಕರು, ಪ್ರಮುಖ ಜನಪ್ರತಿನಿಧಿಗಳು, ಸಾವಿರಾರು ಕಾರ್ಯಕರ್ತರು ಮತ್ತು ಬಿಡದಿ ಭಾಗದ ನೂರಾರು ರೈತ ಬಾಂಧವರು ಕಾಲ್ನಡಿಗೆಯಲ್ಲಿ ಹೆಜ್ಜೆ ಹಾಕಿದರು.

​ರೈತರ ಪರ ಮಿತ್ರಪಕ್ಷಗಳ ಒಗ್ಗಟ್ಟು:
ಯಾವುದೇ ಕಾರಣಕ್ಕೂ ರೈತರ ಒಪ್ಪಿಗೆಯಿಲ್ಲದೆ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು ಎನ್‌ಡಿಎ ನಾಯಕರು ಒಮ್ಮತದ ಧ್ವನಿ ಎತ್ತಿದ್ದಾರೆ. ಸರ್ಕಾರದ ಯೋಜನೆ ವಿರುದ್ಧ ವಿಧಾನಮಂಡಲದ ಒಳಗೂ ಮತ್ತು ಹೊರಗೂ ನಿರಂತರ ಹೋರಾಟ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ನಾಯಕರು ಸ್ಪಷ್ಟಪಡಿಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು