LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ತಡೆಗೆ ಜೆಡಿಎಸ್ ವಿನೂತನ ಹೆಜ್ಜೆ: ವಾಟ್ಸಾಪ್ ಹೆಲ್ಪ್‌ಲೈನ್ ಬಿಡುಗಡೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಡಳಿತ ಪಕ್ಷದ ಪ್ರಭಾವ ಹಾಗೂ ಅಧಿಕಾರಿಗಳ ಕರ್ತವ್ಯಲೋಪದಿಂದ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಈ ಅಕ್ರಮಗಳನ್ನು ತಡೆಯಲು ವಿನೂತನ ಹೆಜ್ಜೆ ಇಟ್ಟಿದ್ದಾರೆ.

​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಂಡುಬರುವ ಯಾವುದೇ ರೀತಿಯ ಅಕ್ರಮಗಳನ್ನು ನೇರವಾಗಿ ಪಕ್ಷದ ಗಮನಕ್ಕೆ ತರಲು ಅವರು ವಿಶೇಷ ವಾಟ್ಸಾಪ್ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಕುರಿತು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ನಾಡಿನ ಸಮಸ್ತ ನಾಗರಿಕರಿಗೆ ಮುಕ್ತ ಮನವಿ ಮಾಡಿದ್ದಾರೆ.

​ಅಕ್ರಮ ಕಂಡರೆ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ: 6362886303​"ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಿಮ್ಮ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಕ್ರಮಗಳು, ನಿಯಮ ಉಲ್ಲಂಘನೆ ಅಥವಾ ರಾಜಕೀಯ ಪ್ರೇರಿತ ಸೇರ್ಪಡೆ/ಕೈಬಿಡುವಿಕೆಗಳು ಕಂಡುಬಂದರೆ ತಕ್ಷಣವೇ ಈ ವಾಟ್ಸಾಪ್ ಸಂಖ್ಯೆಗೆ ಮಾಹಿತಿಯನ್ನು ಕಳುಹಿಸಿಕೊಡಿ," ಎಂದು ನಿಖಿಲ್ ಕುಮಾರಸ್ವಾಮಿ ಕೋರಿದ್ದಾರೆ.

​ಚುನಾವಣಾ ಆಯೋಗಕ್ಕೆ ದೂರು:
​ಸಾರ್ವಜನಿಕರು ಹಾಗೂ ಕಾರ್ಯಕರ್ತರು ನೀಡುವ ದೂರುಗಳು ಮತ್ತು ಸಾಕ್ಷ್ಯಗಳನ್ನು ಕ್ರೋಢೀಕರಿಸಿ, ಅವುಗಳನ್ನು ನೇರವಾಗಿ ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು. ಆ ಮೂಲಕ ಕಾನೂನು ಹೋರಾಟ ನಡೆಸಿ ನ್ಯಾಯ ಒದಗಿಸುವ ಕೆಲಸವನ್ನು ಪಕ್ಷ ಮಾಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

​"ಬನ್ನಿ, ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಮತ್ತು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಲು ನಾವೆಲ್ಲರೂ ಕೈಜೋಡಿಸೋಣ," ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಕರೆ ನೀಡಿದ್ದಾರೆ.

ಇತ್ತೀಚೆಗಷ್ಟೇ ರಾಮನಗರ ಮತ್ತು ಕುಣಿಗಲ್‌ನಲ್ಲಿ ಬಿಎಲ್‌ಒ ಅಧಿಕಾರಿಗಳು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್