Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ್ವಲಂತ ಸಮಸ್ಯೆಗಳಿಗೆ ಉತ್ತರ ಹುಡುಕುವವರು ಪತ್ರಕರ್ತರು-ಡಾ. ಜಿ ಪರಮೇಶ್ವರ್

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಪ್ರತಿನಿತ್ಯ ನಮ್ಮ ನಡುವೆ ನಡೆಯುವ ಸುದ್ದಿ ಘಟನೆಗಳನ್ನ ಕ್ಷಣಮಾತ್ರದಲ್ಲಿ   ಪ್ರಚುರಪಡಿಸುವಂತಹ ವ್ಯವಸ್ಥೆಗಳನ್ನು ಇಂದಿನ ಮಾಧ್ಯಮಗಳು ಹೊಂದಿದ್ದು   ಸಮಾಜದ ದೊರೆಂತ ಸಮಸ್ಯೆಗಳಿಗೆ ಉತ್ತರವನ್ನು ಕಂಡುಕೊಳ್ಳುವರು  ಪತ್ರಕರ್ತರೇ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಅವರು ತಿಳಿಸಿದರು.

 ತುಮಕೂರು ನಗರದ ಕುಣಿಗಲ್ ರಸ್ತೆಯ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ ಆವರಣದಲ್ಲಿ  ಜನವರಿ ೧೮ ಮತ್ತು ೧೯ರಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಮಟ್ಟದ ೩೯ನೇ ಪತ್ರಕರ್ತರ ಸಮ್ಮೇಳನ ನಡೆಯುವ ಕುರಿತಾಗಿ ವೇದಿಕೆ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಸಚಿವರು, ಮಾಧ್ಯಮ ಕ್ಷೇತ್ರ  ಅನೇಕ ಸರ್ಕಾರಗಳ ಕಣ್ಣು ತೆರೆಸಿದಂತಹ ಶಕ್ತಿಯನ್ನು ಹೊಂದಿದ್ದು  ಅದೇ ರೀತಿಯಾಗಿ ಈ ಕಾಲಮಾನದ ಪತ್ರಕರ್ತರು ಅನೇಕ ಜ್ವಲಂತ ಸಮಸ್ಯೆಗಳನ್ನು ಕೂಡಾ ಎದುರಿಸುತ್ತಿದ್ದಾರೆ ಈ ನಡುವೆ ಎಲ್ಲ ವಿಚಾರಗಳನ್ನ ಒಂದೆಡೆ ಸೇರಿ ಚರ್ಚೆ ನಡೆಸಲು ಪತ್ರಕರ್ತರು ತಮ್ಮ ಸಂಘದ ವತಿಯಿಂದ ರಾಜ್ಯಮಟ್ಟದ ವಿಶೇ? ಸಮ್ಮೇಳನವನ್ನ  ನಮ್ಮ ಕಲ್ಪತರು ನಾಡಿನಲ್ಲಿ ನಡೆಸುತ್ತಿರುವುದು ಹೆಮ್ಮೆಯ ವಿಚಾರವೆಂದು ತಿಳಿಸಿದರು.

 ಜನವರಿ ೧೮ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದು ಈ ಸಮ್ಮೇಳನಕ್ಕೆ ದೇಶ ಹಾಗೂ ರಾಜ್ಯದ  ಸುಮಾರು ನಾಲಕ್ಕು ಸಾವಿರಕ್ಕೂ ಹೆಚ್ಚು ಪತ್ರಕರ್ತರ ಸ್ನೇಹಿತರು ಆಗಮಿಸಲಿದ್ದು  ತುಮಕೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಆಗಮಿಸುವ ಎಲ್ಲಾ ಪತ್ರಕರ್ತರಿಗೂ ಆತ್ಮೀಯವಾಗಿ ಸ್ವಾಗತವನ್ನು  ಕೋರಲಿದ್ದೇನೆ ಎಂದು ತಿಳಿಸಿದರು.

 ಪತ್ರಕರ್ತರ ಸಮ್ಮೇಳನ ಕೇವಲ ಸಮ್ಮೇಳನ ವಾಗಿ ಉಳಿಯದೆ ತುಮಕೂರಿಗೆ  ರಾಜ್ಯದಿಂದ ಮೊದಲ ಬಾರಿಗೆ ಆಗಮಿಸುವ ವಿವಿಧ ಜಿಲ್ಲೆಗಳ ಪತ್ರಕರ್ತರುಗಳನ್ನು ಸ್ಥಳೀಯವಾಗಿ ಇರುವ  ಸ್ಥಳಗಳನ್ನ ಪರಿಚಯಿಸುವ ಕೆಲಸ ಮಾಡಬೇಕು  ಸಮ್ಮೇಳನದಲ್ಲಿ ನಡೆಯುವ ವಿಚಾರಗೋಷ್ಠಿಗಳು ಸಮಾಜದ ಕಣ್ಣು ತೆರೆಸುವಂತಹ ದೋಸ್ತಿಗಳಾಗಬೇಕು ಪತ್ರಕರ್ತರಿಗೆ ಸುದ್ದಿಗಳನ್ನು ಬರೆಯಲು  ಉತ್ತೇಜನ ನೀಡುವಂತಹ ಸಮ್ಮೇಳನ ಇದು ಆಗಬೇಕು ಎಂದು ಆಶಿಸಿದರು.

 ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಘಟಕ ತುಮಕೂರು ಜಿಲ್ಲಾಧ್ಯಕ್ಷ  ಚಿ.ನಿ. ಪುರುಷೋತ್ತಮ್ ಅವರು ಮಾತನಾಡಿ  ಸಂಘದ ವತಿಯಿಂದ ಕಳೆದ ವರ್ಷ ಗೃಹ ಸಚಿವರಿಗೆ  ಪ್ರಶಸ್ತಿ ನೀಡಿ ಸತ್ಕರಿಸುವ ಸಂದರ್ಭದಲ್ಲಿ ಪತ್ರಕರ್ತರು ರಾಜ್ಯಮಟ್ಟದ ಸಮ್ಮೇಳನವನ್ನು ತುಮಕೂರಿನಲ್ಲಿ ನಡೆಸುವಂತೆ  ಕೋರಿಕೊಂಡಿದ್ದರು ಇದರ ಸಲುವಾಗಿ ರಾಜ್ಯ ಸಂಘಟನೆಯೂ ಸಹ ನಮಗೆ ಸಹಕಾರ ನೀಡಿದ್ದು ಜಿಲ್ಲೆಯಲ್ಲಿ ಈ ಬಾರಿ ನಡೆಯುವ ರಾಜ್ಯಮಟ್ಟದ ಸಮ್ಮೇಳನವನ್ನು ಯಶಸ್ವಿಗೊಳಿಸಲು ಅವಿರತವಾಗಿ ಸಚಿವರು ಕೂಡ ಶ್ರಮಿಸುತ್ತಿದ್ದು ಸಮ್ಮೇಳನಕ್ಕೆ ಅನುಕೂಲವಾಗುವ ಎಲ್ಲಾ ರೀತಿಯ ಸಹಕಾರ, ಸಲಹೆ ಮಾರ್ಗದರ್ಶನಗಳನ್ನ ನೀಡುತ್ತಿದ್ದಾರೆ  ಪತ್ರಕರ್ತರ ಸ್ನೇಹಿಯಾಗಿರುವ ಗೃಹ ಸಚಿವರ  ಮಾರ್ಗದರ್ಶನಕ್ಕೆ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಭಾರಿಯಾಗಿರುತ್ತದೆ ಎಂದು ತಿಳಿಸಿದರು

 ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ವೇದಿಕೆ ನಿರ್ಮಾಣ ಸ್ಥಳ, ಮುಖ್ಯ ಅತಿಥಿಗಳ ವಾಸ್ತವ್ಯ ಸ್ಥಳ, ವಸ್ತು ಪ್ರದರ್ಶನದ ಜಾಗವನ್ನ ಸಚಿವರು ಪರಿವೀಕ್ಷಣೆ ನಡೆಸಿದರು ಈ ಸಂದರ್ಭದಲ್ಲಿ ಜಿಲ್ಲಾ ಕಾ.ನಿ.ಪ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ್, ಉಪಾಧ್ಯಕ್ಷ ಚಿಕ್ಕೀರಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸಂಚಾಲಕರಾದ ಅನು ಶಾಂತಕುಮಾರ್, ಸದಸ್ಯರಾದ ಟಿ.ಎನ್. ಮಧುಕರ್ಸಂಘದ ನಿರ್ದೇಶಕರುಗಳಾದ ಪರಮೇಶ್, ಜಯನುಡಿ ಜಯಣ್ಣ, ಕಾಗ್ಗೆರೆ ಸುರೇಶ್, ರೇಣುಕ ಪ್ರಸಾದ್, ಹರೀಶ್ ಆಚಾರ್ಯ, ರವಿಕುಮಾರ್   ಪೊಲೀಸ್ ವರಿ?ಧಿಕಾರಿಗಳಾದ ಅಶೋಕ್, ಶ್ರೀ ಸಿದ್ದಾರ್ಥ  ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ್, ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಬಿ.ಟಿ ಮುದ್ದೇಶ್, ಇಂಜಿನಿಯರಿಂಗ್ ವಿಭಾಗದ ಎಸ್ಟೇಟ್ ಅಧಿಕಾರಿ ಶಿವರಾಜ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ