Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಕಾಣೆ ಪತ್ತೆಗೆ ಗಡವು ನೀಡಿ ವರದಿ ಪಡೆದುಕೊಳ್ಳಿ- ನ್ಯಾಯಾಧೀಶ ಎಂ.ವಿಜಯ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಣೆ ಪ್ರಕರಣಗಳಲ್ಲಿ ನಿಗದಿತ ಅವಧಿಯೊಳಗೆ ಮಕ್ಕಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಅಧಿಕಾರಿಗಳಿಗೆ ಗಡುವು ನೀಡಿ ಪ್ರಕರಣದ ಸ್ಥಿತಿಗತಿ ಕುರಿತು ವರದಿ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ನಿರ್ದೇಶನ ನೀಡಿದರು.

ನಗರದ ಬಾಲ ಭವನ ಕಚೇರಿಯಲ್ಲಿ ಶುಕ್ರವಾರ ಕಾಣೆಯಾದ ಮಕ್ಕಳ ಪತ್ತೆ ಕುರಿತು ಪೋಷಕರು ಹಾಗೂ ತನಿಖಾ ಪೊಲೀಸ್ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು.

ಕಾಣೆಯಾದ ಮಕ್ಕಳ ಪತ್ತೆ ಕಾರ್ಯವನ್ನು ಚುರುಕುಗೊಳಿಸಬೇಕು. ಪತ್ತೆ ಕಾರ್ಯದ ತನಿಖೆ ಪ್ರಗತಿ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು. ಮಕ್ಕಳು ಪತ್ತೆಯಾದ ಪ್ರಕರಣಗಳಲ್ಲಿ ಮಾಹಿತಿ ಪಡೆದು ಪ್ರಕರಣಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದರು.

2021 ರಿಂದ 2024 ವರೆಗೆ ಜಿಲ್ಲೆಯಲ್ಲಿ 365 ಮಕ್ಕಳ ಕಾಣೆ ಪ್ರಕರಣಗಳು ಐ.ಪಿ.ಸಿ ಕಲಂ 363ರ ಅಡಿಯಲ್ಲಿ ದಾಖಲಾಗಿವೆ. ಇವುಗಳ ಪೈಕಿ 359 ಪಕ್ರರಣಗಳಲ್ಲಿ ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಇದೇ ಅವಧಿಯಲ್ಲಿ ಪೋಷಕರೊಂದಿಗೆ ಕಾಣೆಯದ 131 ಮಕ್ಕಳ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 129 ರ ಪಕ್ರಣಗಳನ್ನು ಪತ್ತೆ ಹಚ್ಚಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ರಾಂಪುರ ಹಾಗೂ ಚಿಕ್ಕಜಾಜೂರು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಮಕ್ಕಳ ಕಾಣೆ ಪ್ರಕರಣಗಳಲ್ಲಿ ಪೊಲೀಸರು ಮಕ್ಕಳನ್ನು ಪತ್ತೆ ಹಚ್ಚಿ ಪೊಷಕರಿಗೆ ಒಪ್ಪಿಸಿಲಾಗಿದೆ ಎಂದು ಪೊಲೀಸರು ನ್ಯಾಯಾಧೀಶರಿಗೆ ವರದಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಸವಿತಾ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಬಸವರಾಜ್, ಗುರುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ