Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈವಾರ ತಾತಯ್ಯನವರು ಪ್ರಭಾವಶಾಲಿ ಗುರುಗಳು

Advertisement
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾಲಜ್ಞಾನಿ ಶ್ರೀ ಯೋಗಿ ನಾರಾಯಣ ಯತೀಂದ್ರ (ಕೈವಾರ ತಾತಯ್ಯ)ನವರ ಜನ್ಮದಿನ ಹಾಗೂ ತತ್ವಗಳ ಬಗ್ಗೆ ಕಾರ್ಯಕ್ರಮ  ನಡೆಯಿತು.


ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಪದ್ಮ ಪುರುಷೋತ್ತಮ್ ರವರು ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ ಕೈವಾರ ತಾತಯ್ಯನವರು ಪ್ರಭಾವಶಾಲಿ ಗುರುಗಳು. ತಮ್ಮ ದಿವ್ಯ ಜ್ಞಾನದಿಂದ ಮಾನವನ ಉದ್ಧಾರಕ್ಕೆ ಹಲವಾರು ಮಾರ್ಗದರ್ಶನವನ್ನು ನೀಡಿ ತತ್ವಗಳನ್ನು ಬೋಧಿಸಿದ್ದಾರೆ. ಪ್ರತಿ ಜನಾಂಗಕ್ಕೂ ಗುರುಗಳು ಇದ್ದು ಗುರುಗಳ ಮಾರ್ಗದರ್ಶನದಂತೆ ಬದುಕಿದಾಗ ಸಮಾಜಕ್ಕೆ ಒಳ್ಳೆಯ ಸೇವೆಯನ್ನು ಸಲ್ಲಿಸಬಹುದು. ಕೈವಾರ ತಾತಯ್ಯನವರ ಲಕ್ಷಾಂತರ ಭಕ್ತರು ಇಂದಿಗೂ ಆಂಧ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಇದ್ದಾರೆ ಎಂದರು.

ಹಿನ್ನಲೆ ಗಾಯಕ ರವಿಕುಮಾರ್ ಮಹದೇಶ್ವರರ ಗೀತೆ ಹಾಡಿದರು.
ಪರಿಸರ ಪ್ರೇಮಿ ಸಿಎಂ ವೆಂಕಟೇಶ್ ರವರು ಕೈವಾರ ತಾತಯ್ಯನವರ ಜನ್ಮದಿನ ಹಾಗೂ ಅವರ ಕೊಡುಗೆಗಳ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮವನ್ನು ರೂಪಿಸಿರುವುದು ಹೆಮ್ಮೆಯಾಗಿದೆ. ಪ್ರತಿಯೊಬ್ಬ ಕವಿಗಳು
, ಸಾಹಿತಿಗಳು ಗುರುಗಳ ಬಗ್ಗೆ ಮಾಹಿತಿಯನ್ನು ತಿಳಿದಾಗ ಜ್ಞಾನ ವೃದ್ಧಿಯಾಗುತ್ತದೆ. ಕೈವಾರ ತಾತಯ್ಯನವರ ಜೀವನ ಕುರಿತು ಡಾ. ರಾಜಕುಮಾರ್  ನಟಿಸಿರುವ ಚಲನಚಿತ್ರ ಅದ್ಭುತವಾಗಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂತ ,ವರ್ತಮಾನ ಭವಿಷ್ಯದ ಸಮಗ್ರ ಮಾಹಿತಿಯನ್ನು ತಮ್ಮ ದಿವ್ಯ ಜ್ಞಾನದ ಮೂಲಕ ಸಮಾಜಕ್ಕೆ ತಿಳಿಸಿ ,ಎಚ್ಚರಿಕೆಯನ್ನು ಕಾಲಜ್ಞಾನಿಗಳು ಮಾಡುತ್ತಾರೆ. ಸಾಮಾಜಿಕ ,ಧಾರ್ಮಿಕ, ರಾಜಕೀಯ ಹಾಗೂ ಮಾನವನ ಜೀವನ ತತ್ವಗಳ ಬಗ್ಗೆ ಕಾಲಜ್ಞಾನಿಗಳು ಹಾಗೂ ಗುರು ಪರಂಪರೆ ಅಪಾರವಾಗಿ ತಿಳುವಳಿಕೆಯನ್ನು ನೀಡಿದ್ದಾರೆ.

ಕೈವಾರ ತಾತಯ್ಯನವರು ಪವಾಡ ಪುರುಷರು ಹಾಗೂ ಜ್ಞಾನ ಮತ್ತು ಭಕ್ತಿ ಮಾರ್ಗದ ಮೂಲಕ ಮಾನವನನ್ನು ಬದಲಾವಣೆಗೆ ತರುವ ಪ್ರಯತ್ನವನ್ನು ಮಾಡಿದರು. ಭವಿಷ್ಯದ ಸಮಾಜವನ್ನು ಕುರಿತು ಎಚ್ಚರಿಕೆಯ ತಿಳುವಳಿಕೆಯ ಮಾತುಗಳನ್ನು ಹೇಳಿದ್ದಾರೆ. ತಾತಯ್ಯ  ರವರ ದಿವ್ಯ ಸಂದೇಶಗಳು ನಮ್ಮೆಲ್ಲರಿಗೂ ಆದರ್ಶ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದಾಸ ಬಣಜಿಗ ಸಂಘದ ಸತೀಶ್, ರಂಗರಾಜು, ಸುಬ್ರಹ್ಮಣ್ಯ, ನಿವೃತ್ತ ಶಿಕ್ಷಕರಾದ ಗೀತಾ, ಸರಸ್ವತಿ, ಕನ್ನಡ ಸಾಹಿತ್ಯ ಪರಿಷತ್ತಿನ ರವಿಚಂದ್ರ ಪ್ರಸಾದ್, ಶಿವಲಿಂಗಮೂರ್ತಿ, ಬಿ.ಕೆ ಆರಾಧ್ಯ, ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ