Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ: ಒಂದು ಪರಂಪರೆ: ಕೆ.ವಿ.ಪ್ರಭಾಕರ್

Advertisement
ಚಂದ್ರವಳ್ಳಿ ನ್ಯೂಸ್, ಕೋಲಾರ:
ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಎಂದು ಕರೆ ನೀಡಿದರು.

ದಾಸಶ್ರೇಷ್ಠ ಕನಕರು ನಮ್ಮ ಪರಂಪರೆಯ ನೈತಿಕ ಮತ್ತು ಅಧ್ಮಾತ್ಮಿಕ ಶಕ್ತಿಯಾಗಿದ್ದಾರೆ. ಆದರೆ, ಬಹಳ ಮಂದಿ ಕನಕದಾಸರಿಂದ ನಮ್ಮ ಪರಂಪರೆ ಆರಂಭವಾಗಿದೆ ಎನ್ನುವ ತಪ್ಪು ಕಲ್ಪನೆಯಲ್ಲಿದ್ದಾರೆ. ಅಲೆಮಾರಿಯಾಗಿದ್ದ ಮನುಷ್ಯ ಜನಾಂಗ ಕೃಷಿಗಿಂತ ಮೊದಲೇ ಪಶುಪಾಲನೆ ಕಂಡುಕೊಂಡಿತ್ತು. ಹಸು, ಕುರಿ, ಮೇಕೆ, ಕುದುರೆ ಸಾಕುತ್ತಿದ್ದವರೆಲ್ಲಾ ಕುರುಬರೇ ಅನ್ನಿಸಿಕೊಂಡ ಚರಿತ್ರೆ ಇದೆ.

ನಾಣ್ಯ ಮತ್ತು ನೋಟುಗಳು ಬರುವ ಮೊದಲು ಕುರಿ ಮತ್ತು ಹಸುಗಳೇ ನಾಣ್ಯಗಳಾಗಿದ್ದವು. ಕುರಿ, ಹಸುಗಳನ್ನು ಕೊಟ್ಟು ಇತರೆ ವಸ್ತು, ಪದಾರ್ಥಗಳನ್ನು ಕೊಳ್ಳಲಾಗುತ್ತಿತ್ತು. ಅಂದರೆ, ಹೆಚ್ಚು ಕುರಿ, ಹಸು ಇರುವವನೇ ಹೆಚ್ಚು ಶ್ರೀಮಂತ, ಒಡೆಯನಾಗಿದ್ದ ಪರಂಪರೆ ನಮ್ಮದು. ಅಂದರೆ ಪ್ರಾಚೀನ ಭಾರತದ ಆರ್ಥಿಕತೆಯೇ ಕುರುಬರ, ಪಶುಪಾಲಕರ ಕೈಯಲ್ಲಿ ಇತ್ತು. ಇಡೀ ದೇಶದ ಆರ್ಥಿಕತೆಯನ್ನು ನಿಭಾಯಿಸುತ್ತಿದ್ದ ಪರಂಪರೆಯಿಂದ ಬಂದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪರಂಪರೆಯ ಮುಂದುವರಿಕೆಯಾಗಿ 16 ಬಜೆಟ್ ಗಳನ್ನು ಮಂಡಿಸಿ ದಾಖಲೆ ಮೆರೆದಿದ್ದಾರೆ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ಸೂಚಿಸಿದರು.

ನಮ್ಮ ಕುರುಬ ಪರಂಪರೆಗೆ ಧಾರ್ಮಿಕ‌ಸಹಿಷ್ಣುತೆ ಮತ್ತು ಜಾತ್ಯತೀತತೆಯ ಚರಿತ್ರೆಯೂ ಇದೆ. ಕನಕ ದಾಸರು "ತಲ್ಲಣಿಸದಿರು ತಾಳು ಮನವೇ" ಎಂದು ಹಾಡುವಾಗ ಬೌದ್ಧ, ಇಸ್ಲಾಂ, ಕ್ರೈಸ್ತ ಧರ್ಮಗಳ ಜೊತೆಗಿನ ಒಡನಾಟವನ್ನೂ ಹೇಳುತ್ತಾರೆ. ಏಸುಕ್ರಿಸ್ತರ ಮಡಿಲಲ್ಲೂ ಕುರಿ ಇದೆ. ಪೈಗಂಬರರೂ ಕುರಿಸಾಕಾಣಿಕೆಯ ಪರಂಪರೆ ಜೊತೆಗಿದ್ದವರು ಎನ್ನುವುದನ್ನು ಅಧ್ಯಯನಗಳು ಹೇಳುತ್ತವೆ.

ಕುರುಬರ ಕುಲದೈವಗಳು, ದೇವತೆಗಳು, ಸಾಂಸ್ಕೃತಿಕ ನಾಯಕರು, ನಾಯಕಿಯರನ್ನೆಲ್ಲಾ ನೋಡಿದರೆ ಅಂತರ್ಜಾತಿ ವಿವಾಹ ಮತ್ತು ಜಾತ್ಯತೀತ ಪರಂಪರೆಯೂ ನಮಗೆ ಗೊತ್ತಾಗುತ್ತದೆ. ಹೇಮರೆಡ್ಡಿ ಮಲ್ಲಮ್ಮ ಅಂದರೆ ರೆಡ್ಡಿ ಜನಾಂಗದ ಜೊತೆಗಿನ ನಮ್ಮ ಒಡನಾಟವನ್ನೂ ಹೇಳುತ್ತದೆ. ಹೀಗೆ ಬಲಿಜ, ಗೊಲ್ಲ, ನಾಯಕ, ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಜಾತಿಗಳ ಜೊತೆಗೆ ನಮ್ಮ ದೈವಗಳು,

ಸಾಂಸ್ಕೃತಿಕ‌ಪುರುಷರು ಬೆರೆತು ಸಂಬಂಧಗಳನ್ನು ಏರ್ಪಡಿಸಿಕೊಂಡ ಜಾತ್ಯತೀತ ಪರಂಪರೆಯೂ ನಮ್ಮ ರಕ್ತದಲ್ಲೇ ಬಂದಿದೆ. ಇದನ್ನೆಲ್ಲಾ ಮುಂದೆ ಯಾವತ್ತಾದರೂ ವಿವರವಾಗಿ ಮಾತನಾಡುತ್ತೇನೆ ಎಂದರು‌. ಹೀಗಾಗಿ ಕನಕದಾಸರ ಜಯಂತಿಯಂದು ನಾವು ನಮ್ಮ ಪರಂಪರೆಯ ಆಳ-ಅಗಲವನ್ನು ಅರಿಯುವ ಮೂಲಕ ನಮ್ಮ ಪರಂಪರೆಯ ಬೇರುಗಳನ್ನು ಗಟ್ಟಿಗೊಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು  ಕರೆ ನೀಡಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ