ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದಲ್ಲಿ ಕೃಷಿ ಸಂಬಂಧಿತ ಬರವಣಿಗೆ ಹಾಗೂ ಸಾಹಿತ್ಯವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯವು ‘ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ-2025 ಕ್ಕಾಗಿ ಅರ್ಹ ಲೇಖಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.
2025ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಕೃಷಿ ಸಂಬಂಧಿತ ಕನ್ನಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಆಯ್ಕೆಯಾಗುವ ಅತ್ಯುತ್ತಮ ಕೃತಿಗೆ ರೂ. 10,000/- (ಹತ್ತು ಸಾವಿರ ರೂಪಾಯಿ) ನಗದು ಬಹುಮಾನ ಹಾಗೂ ಗೌರವ ಪ್ರಶಸ್ತಿ ಫಲಕ ನೀಡಿ ಪುರಸ್ಕರಿಸಲಾಗುವುದು.
2025ರಲ್ಲಿ ಪ್ರಥಮ ಮುದ್ರಣವಾಗಿ ಹೊರಬಂದ ಕೃಷಿ ವಿಷಯಾಧಾರಿತ ಕನ್ನಡ ಪುಸ್ತಕಗಳುಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಆಸಕ್ತ ಲೇಖಕರು ನಿಗದಿತ ನಮೂನೆಯಲ್ಲಿ ತಮ್ಮ ಸ್ವ-ವಿವರಗಳೊಂದಿಗೆ ಪುಸ್ತಕದ ಮೂರು (3) ಪ್ರತಿಗಳನ್ನು 2026ನೇ ಆಗಸ್ಟ್ 20 ರ ಒಳಗಾಗಿ ಮುಖ್ಯಸ್ಥರು, ಕನ್ನಡ ಅಧ್ಯಯನ ವಿಭಾಗ, ಕೃಷಿ ವಿಶ್ವವಿದ್ಯಾನಿಲಯ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ), ಬೆಂಗಳೂರು – 560065
ಇಲ್ಲಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ http://uasbangalore.edu.in ಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 080-23330153 (ವಿಸ್ತರಣೆ: 373) ಹಾಗೂ ಇ-ಮೇಲ್: [email protected] ಮೂಲಕ ಸಂಪರ್ಕಿಸಬಹುದು ಎಂದು ಕೃಷಿ ಮಾಹಿತಿ ಘಟಕದ ಹಿರಿಯ ವಾರ್ತಾತಜ್ಞರು ಹಾಗೂ ಮುಖ್ಯಸ್ಥರಾದ ಡಾ. ಕೆ. ಪಿ. ರಘುಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



