Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಿಗರ ಅನ್ನ ಕಸಿಯುತ್ತಿರುವ ನಾರ್ತಿಗಳೇ ರಾಜ್ಯ ಬಿಟ್ಟು ತೊಲಗಿ-ಪುರುಷೋತ್ತಮ ಗೌಡ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕರ್ನಾಟಕದಲ್ಲಿ ಉತ್ತರ ಭಾರತೀಯರ ದಬ್ಬಾಳಿಕೆ ಹೆಚ್ಚಾಗಿದೆ
, ಉತ್ತರ ಭಾರತೀಯರ ವಲಸೆ ಪರಿಣಾಯ ಕನ್ನಡಿಗರ ಅನ್ನವನ್ನ ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸುತ್ತಿರುವ ಕರವೇ ನಾರಾಯಣಗೌಡ ಬಣ ಫೆಬ್ರವರಿ 1 ರಂದು ಫ್ರೀಡಂ ಪಾರ್ಕ್ ಮಹಾ ಸಂಘರ್ಷ ಯಾತ್ರೆಗೆ ಚಾಲನೆ ನೀಡಲಿದೆ ಎಂದು ಬೆಂಗಳೂರು ಗ್ರಾಮಾಂತರ ಕರವೇ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟದ ರಾಜ್ಯದಲ್ಲಿ ಮಾರಾಟವಾಗುವ ಉತ್ಪನ್ನಗಳ ಎಜೆನ್ಸಿಗಳು ಕನ್ನಡಿಗರಿಗೆ ಸಿಗಬೇಕು, ಎಲ್ಲ ಉತ್ಪನ್ನಗಳ ಮೇಲೆ ಶೇಕಡಾ 60 ರಷ್ಟು ಕನ್ನಡ ಬರಹ ಇರಬೇಕು, ರಾಜ್ಯದಲ್ಲಿರುವ ಹಣಕಾಸು ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆ ಹುದ್ದೆಗಳು ಕನ್ನಡಿಗರಿಗೆ ಮಾತ್ರ ಸಿಗಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನ ಸರ್ಕಾರದ ಮುಂದಿಡುತ್ತಿದ್ದೇವೇ, ನಾರಾಯಣಗೌಡರವರ ನೇತೃತ್ವದಲ್ಲಿ ಫೆಬ್ರವರಿ 1 ರಂದು ಫ್ರೀಡಂ ಪಾರ್ಕ್ ಮಹಾ ಸಂಘರ್ಷ ಯಾತ್ರೆ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯನ್ನ ನೀಡಲಾಗುವುದು ಎಂದರು.

ತಾಲೂಕು ಅಧ್ಯಕ್ಷ ಮಂಜುನಾಥ್ ನಾಯ್ಕ್ ಮಾತನಾಡಿ, ರಾಜ್ಯದಲ್ಲಿ ಉತ್ತರ ಭಾರತೀಯರ ವಲಸೆ ಹೆಚ್ಚಾಗಿದೆ, ರಾಜ್ಯದಲ್ಲಿನ ಉದ್ಯೋಗಗಳು ಪರಭಾಷಿಕರ ಪಾಲಾಗುತ್ತಿವೆ, ಬ್ಯಾಂಕ್ ಗಳಲ್ಲಿ ಕನ್ನಡ ಮಾತನಾಡುವ ಸಿಬ್ಬಂದಿಗಳೇ ಇಲ್ಲದಂತ ಪರಿಸ್ಥಿತಿ ಇದೆ, ಇದರಿಂದ ಹಳ್ಳಿಯ ರೈತಾಪಿ ಜನರಿಗೆ ತೊಂದರೆಯಾಗುತ್ತಿದೆ,

ಚಿನ್ನಾಭರಣ ಅಂಗಡಿಗಳಿಂದ ಹಿಡಿದು ಕ್ಷೌರದ ಅಂಗಡಿಗಳು ಉತ್ತರ ಭಾರತೀಯರ ಪಾಲಾಗುತ್ತಿವೆ. ಜಿಲ್ಲಾ ಕೇಂದ್ರಗಳಿಂದ ಹೋಬಳಿ ಕೇಂದ್ರಗಳಿಗೆ ಲಗ್ಗೆ ಇಡುತ್ತಿದ್ದು ಕನ್ನಡಿಗರ ಅನ್ನ ಕಸಿಯುತ್ತಿದ್ದಾರೆ. ನಾರ್ತಿ ದುರಹಂಕಾರಿಗಳೇ ರಾಜ್ಯ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ಫೆಬ್ರವರಿ 1 ರಂದು ಮಹಾ ಸಂಘರ್ಷ ಯಾತ್ರೆ ಮಾಡಲಾಗುತ್ತಿದೆ ಎಂದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶ್ರೀನಾಥ್, ನಗರ ಅಧ್ಯಕ್ಷ ಮುನಿರಾಜು ಸೇರಿದಂತೆ ಬುಲೆಟ್ ಬಾಬು(ಪೋಟೋಗ್ರಾಫಿ),ಮಧು, ಮನು ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ