Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರೇಕಲ್‌ಕೆರೆ ಭರ್ತಿ ಶಾಸಕ ರಘುಮೂರ್ತಿ ಬಾಗಿನ ಅರ್ಪಣೆ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸುಮಾರು ೫೬ ವರ್ಷಗಳ ನಂತರ ತುಂಬಿ ಕೋಡಿಬಿದ್ದ  ಕರೇಕಲ್ ಕೆರೆಗೆ ಗಂಗಾಪೂಜೆ ಮತ್ತು ಬಾಗಿನವನ್ನು ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಅರ್ಪಿಸಿದರು. 

ಈ ವೇಳೆ ಮಾತನಾಡಿದ ಅವರು, ಈಗಾಗಲೇ ಈ ಕ್ಷೇತ್ರದ ೧೦ಕ್ಕೂ ಹೆಚ್ಚು ಕೆರೆಗಳು ಕೋಡಿಬಿದ್ದಿವೆ. ಕೆರೆ ನೀರಿನಿಂದ ಕೃಷಿ, ಕುಡಿಯುವ ನೀರಿನ ಸಮಸ್ಯೆ ದೂರವಾದಂತಾಗಿದೆ. ಮಳೆಯಿಂದ ಈ ನಾಡು ಸಮೃದ್ದವಾಗಿ ಬೆಳೆಯಲಿ ಎಂದು ಪ್ರಾರ್ಥಿಸುವೆ. ಕಳೆದ ಹಲವಾರು ವರ್ಷಗಳಿಂದ ಈ ಭಾಗದ ಜನರು ಬರಗಾಲವನ್ನು ಎದುರಿಸಿ ಬಸವಳಿದಿದ್ದರು. ಆದರೆ, ದೇವರು ಬಯಲುಸೀಮೆಯ ಮೇಲೆ ಕರುಣೆ ತೋರಿ ಕಳೆದ ಎರಡ್ಮೂರು ವರ್ಷಗಳಿಂದ ಸಮೃದ್ದ ಮಳೆಯನ್ನು ಸುರಿಸುತ್ತಿರುವುದು ನಮ್ಮ ಪುಣ್ಯ.

ಶಾಸಕನಾಗಿ ೧೨ ವರ್ಷದಲ್ಲಿ ಕಾಲಿಟ್ಟಿದ್ದು, ಇದೇ ಮೊದಲ ಬಾರಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನನ್ನಪಾಲಿಗೆ ಬಂದಿದೆ.  ಕ್ಷೇತ್ರದ ಎರಡು ಐತಿಹಾಸಿಕ ಕೆರೆಗಳಾದ ಕರೇಕಲ್ ಕೆರೆ, ಅಜ್ಜಯ್ಯನಗುಡಿ ಕೆರೆಗಳು ಕೋಡಿಬಿದ್ದಿವೆ. ಅಲ್ಲದೆ, ದೊಡ್ಡೇರಿ, ನಗರಂಗೆರೆ, ನನ್ನಿವಾಳ, ಚಿಕ್ಕಮಧುರೆಯೂ ಸೇರಿದಂತೆ ೧೦ಕ್ಕೂ ಹೆಚ್ಚು ಕೆರೆಗಳು ಕೋಡಿಬಿದ್ದು ಜನರ ಸಂಕಷ್ಟ ನೀಗಿಸುವ ಭರವಸೆ ಇದೆ ಎಂದರು.

ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ನಗರಸಭಾ ಸದಸ್ಯ ಟಿ.ಮಲ್ಲಿಕಾರ್ಜುನ ಮಾತನಾಡಿ, ಈ ಭಾಗದ ನಗರಸಭಾ ಸದಸ್ಯನಾಗಿ ಆರು ವರ್ಷ ಕಳೆದಿದ್ದು, ಇದೇ ಮೊದಲಬಾರಿಗೆ ಕರೇಕಲ್ ಕೆರೆ ಕೋಡಿಬಿದ್ದಿದೆ. ತುಂಬಿದ ಗಂಗಾಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಎಲ್ಲರ ಸಹಕಾರದಿಂದ ಹಮ್ಮಿಕೊಂಡಿದ್ದು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಗಿನ ಅರ್ಪಿಸಿರುವುದು ಸಂತಸ ತಂದಿದೆ ಎಂದರು.

ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಕವಿತಾ, ಸುಮಾ, ರಾಘವೇಂದ್ರ, ರಮೇಶ್‌ಗೌಡ, ನಾಮನಿರ್ದೇಶನ ಸದಸ್ಯ ಬಡಗಿಪಾಪಣ್ಣ, ಮುಖಂಡರಾದ ವೀರೇಶ್, ಕೃಷ್ಣಮೂರ್ತಿ, ಪ್ರಹ್ಲಾದ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ