Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ

Advertisement
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಕರ್ನಾಟಕದ ಪ್ರವಾಸೋದ್ಯಮ ಮಾಹಿತಿಯನ್ನು ವಿಶ್ವ ಮಟ್ಟಕ್ಕೆ ಪರಿಚಯಿಸುವ ಉದ್ದೇಶದಿಂದ ಫೆಬ್ರವರಿ
26ರಿಂದ ಫೆಬ್ರವರಿ 28ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್‌ಪೋ- 2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಅವರು ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಂ ಸೊಸೈಟಿಯ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಫೆ.26 ರಂದು ಉದ್ಘಾಟಿಸಲಿದ್ದಾರೆ. ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವೂ ಪಾಲ್ಗೊಳ್ಳಲಿದೆ ಎಂದು ಅವರು ತಿಳಿಸಿದರು.

ತುಮಕೂರು ರಸ್ತೆಯ ಮಾದಾವರದಲ್ಲಿನ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್​ನಲ್ಲಿ ಫೆಬ್ರವರಿ 27 ಮತ್ತು 28ರಂದು ಸಮಾವೇಶ ನಡೆಯಲಿದ್ದು ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಾಜ್ಯಕ್ಕೆ ಪ್ರಸ್ತುತ ಒಂದು ವರ್ಷದಲ್ಲಿ 1 ಕೋಟಿ 25 ಲಕ್ಷಕ್ಕೂ ಅಧಿಕ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಕರ್ನಾಟಕದಾದ್ಯಂತ ಅಸಂಖ್ಯಾತ ಪ್ರವಾಸಿ ತಾಣಗಳು, 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿವೆ. ಇದರಲ್ಲಿ 800ಕ್ಕೂ ಹೆಚ್ಚು ಸ್ಮಾರಕಗಳ ರಕ್ಷಣೆ ಮಾಡಲಾಗಿದೆ. ಇವುಗಳನ್ನು ಬೆಳಕಿಗೆ ತರುವ ಕೆಲಸ ಮಾಡಲಾಗುವುದು ಎಂದು ಸಚಿವ ಪಾಟೀಲ್ ತಿಳಿಸಿದರು.

ಪ್ರವಾಸೋದ್ಯಮದ ಸಮಗ್ರ ಬೆಳವಣಿಗೆಯ ಮುಖ್ಯ ಉದ್ದೇಶದಿಂದ ಕಲೆ, ಸಂಸ್ಕೃತಿ, ಪರಂಪರೆ, ಇತಿಹಾಸ, ಕರಕುಶಲ ಉತ್ಪನ್ನಗಳು, ಪಾಕ ಪದ್ದತಿ, ನೃತ್ಯ ಪ್ರಕಾರಗಳು, ಜೀವನ ಶೈಲಿ, ಅತಿಥಿ ಸತ್ಕಾರಗಳು ಸಮಾವೇಶದಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ಹೆಚ್.ಕೆ.ಪಾಟೀಲ್ ತಿಳಿಸಿದರು.

ಬೆಳಗಾವಿ ಘಟನೆ: ರಾಜ್ಯ ಸರ್ಕಾರ ಬೆಳಗಾವಿ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಮುಂದೆ ಈ ರೀತಿ ಆಗದಂತೆ ಜಾಗೃತಿ ವಹಿಸಲಾಗುವುದು. ಕೆಲವೊಂದು ವಿಕೃತ ಮನಸ್ಥಿತಿಯಿಂದ ನಿರ್ವಾಹಕನ ಮೇಲೆ ಪೋಕ್ಸೋ ಕೇಸ್ ಆಗಿದೆ. ಕಾನೂನಾತ್ಮಕವಾಗಿ ಸಮಸ್ಯೆ ಬಗೆಹರಿಸಲಾಗುವುದು. ಕನ್ನಡ-ಮರಾಠಿ ಸಾಮರಸ್ಯ ಕೆಡಿಸುವವರನ್ನು ಮಟ್ಟ ಹಾಕಲಾಗುವುದು. ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಕಾನೂನು ಸಚಿವರು ಎಚ್ಚರಿಸಿದರು.

ಐಎಸಿಸಿ ಮುಖ್ಯಸ್ಥರಾದ ಮಲ್ಲಿಕಾರ್ಜುನ ‌ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಬದಲಾವಣೆ, ಮುಂದಿನ ಚುನಾವಣೆ ಯಾರ ನೇತೃತ್ವದಲ್ಲಿ ಎಂಬ ಬಗ್ಗೆ ಯಾರೂ ಏನೂ ಮಾತನಾಡಬಾರದು ಎಂದು ಸೂಚನೆ ನೀಡಿದ್ದಾರೆ. ನಾವು ಕಾಂಗ್ರೆಸ್​ನ ಶಿಸ್ತಿನ ಸಿಪಾಯಿಗಳು, ಹಾಗಾಗಿ ಆ ವಿಷಯಗಳ ಕುರಿತು ಮಾತನಾಡುವುದಿಲ್ಲ  ಎಂದು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ