ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದ ವಿದ್ವಾನ್ ಸಿ.ಆರ್.ಶಿವಪ್ರಕಾಶ್ರವರ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸಂಗಿತ ನೃತ್ಯ ಅಕಾಡೆಮಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕರ್ನಾಟಕ ಕಲಾಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭರತನಾಟ್ಯ ಕ್ಷೇತ್ರದಲ್ಲಿ ಕಳೆದ ೪೨ ವರ್ಷಗಳಿಂದಲೂ ಅಪ್ರತಿಮೆ ಸಾಧನೆಗೈಯುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ನೀಡಿ ಜಾಗತಿಕ ಮಟ್ಟಕ್ಕೆ ನೃತ್ಯ ಕಲೆಯನ್ನು ಕೊಂಡೊಯ್ದಿರುವ ಸಿ.ಆರ್.ಶಿವಪ್ರಕಾಶ್ರವರಲ್ಲಿರುವ ಅಮೋಘ ಪ್ರತಿಭೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಂಗೀತ ನೃತ್ಯ
ಅಕಾಡೆಮಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರುಗಳನ್ನು ಸನ್ಮಾನಿಸಲಾಯಿತು.
ಎನ್.ನರೇಂದ್ರಬಾಬು, ಕೆ.ವಿ.ನಾಗರಾಜಮೂರ್ತಿ, ಮಾನಸ ಬಿ.ಎಸ್. ಮಂಜುನಾಥಸ್ವಾಮಿ, ಬಲವಂತರಾವ್ಪಾಟೀಲ್, ಕಿರಣ್ಸಿಂಗ್ ಹಾಗೂ ಕರ್ನಾಟಕ ಸಂಗೀತ ನೃತ್ಯ
ಅಕಾಡೆಮಿ ಅಧ್ಯಕ್ಷೆ ಶುಭ ಧನಂಜಯ್ ಇವರುಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.


