ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಜ್ಞಾನ, ತಂತ್ರಜ್ಞಾನ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಕರ್ನಾಟಕವನ್ನು ದೇಶದಲ್ಲೇ ತಲಾದಾಯದಲ್ಲಿ ನಂಬರ್ ಒನ್ ಸ್ಥಾನಕ್ಕೆ ಮುನ್ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಕೈಗಾರಿಕಾ ಪ್ರಗತಿಯ ಕುರಿತು ಮುಖ್ಯಮಂತ್ರಿಗಳು ಪ್ರಮುಖಾಂಶಗಳನ್ನು ಹಂಚಿಕೊಂಡಿದ್ದಾರೆ.
ಉದ್ಯೋಗ ಸೃಷ್ಟಿ ಮತ್ತು ಕೌಶಲ್ಯಾಭಿವೃದ್ಧಿ
ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಮಾನವಾಗಿ ಉದ್ಯೋಗ ಸೃಷ್ಟಿಸಲು ಸರ್ಕಾರ ವಿಶೇಷ ಗಮನ ಹರಿಸಿದೆ ಎಂದು ಸಿಎಂ ಹೇಳಿದ್ದಾರೆ. ನಾಡಿನ ಯುವ ಸಮುದಾಯಕ್ಕೆ ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೆ, ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಇದರಿಂದ ಯುವಕರು ತಮ್ಮ ಅರ್ಹತೆಗೆ ತಕ್ಕ ಉದ್ಯೋಗಾವಕಾಶಗಳನ್ನು ಪಡೆಯುತ್ತಿದ್ದಾರೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
ತಲಾದಾಯದಲ್ಲಿ ಕರ್ನಾಟಕ ನಂಬರ್ ಒನ್
"ಕರ್ನಾಟಕ ಇಂದು ದೇಶದ ತಲಾದಾಯದಲ್ಲಿ ನಂಬರ್ ಒನ್ ಸ್ಥಾನಕ್ಕೇರಿರುವುದರ ಹಿಂದೆ ನಮ್ಮ ಸರ್ಕಾರದ ಸಂಕಲ್ಪ ಮತ್ತು ರಾಜ್ಯದ ಜನರ ಪರಿಶ್ರಮವಿದೆ."
ಸಿದ್ದರಾಮಯ್ಯ, ಮುಖ್ಯಮಂತ್ರಿ
ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಕೈಗಾರಿಕಾ ವಲಯಗಳಿಗೆ ಸರ್ಕಾರ ನೀಡಿದ ಹೆಚ್ಚಿನ ಪ್ರಾಶಸ್ತ್ಯವೇ ಈ ಆರ್ಥಿಕ ಬೆಳವಣಿಗೆಗೆ ಮುಖ್ಯ ಕಾರಣ ಎಂದು ಅವರು ವಿಶ್ಲೇಷಿಸಿದ್ದಾರೆ.
ಹೂಡಿಕೆಗೆ ಪ್ರಶಸ್ತ ತಾಣ
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಅತ್ಯಂತ ಆಕರ್ಷಕ ಬಂಡವಾಳ ಹೂಡಿಕೆಯ ತಾಣವನ್ನಾಗಿ ಪರಿವರ್ತಿಸಲಾಗಿದೆ. ಸರ್ಕಾರದ ಉದ್ಯಮಸ್ನೇಹಿ ನೀತಿಗಳು ಹಾಗೂ ದೂರದೃಷ್ಟಿಯ ಫಲವಾಗಿ ರಾಜ್ಯಕ್ಕೆ ಭಾರಿ ಪ್ರಮಾಣದ ಬಂಡವಾಳ ಹರಿದುಬಂದಿದೆ ಎಂದು ಮುಖ್ಯಮಂತ್ರಿಗಳು ವಿನಮ್ರವಾಗಿ ಹೆಳಿದ್ದಾರೆ. ಸರ್ಕಾರದ ಈ ಎಲ್ಲಾ ಪ್ರಯತ್ನಗಳ ಫಲ ಇಂದು ಪ್ರತಿಯೊಬ್ಬ ಕನ್ನಡಿಗನ ಬದುಕಿನಲ್ಲೂ ಸಕಾರಾತ್ಮಕ ಬದಲಾವಣೆ ತರುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


