Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಅನುದಾನಿತ ಶಾಲೆಗೆ ಬೀಗ-ಕರುನಾಡ ರಾಷ್ಟ್ರೀಯ ಸೇನೆ ಆಗ್ರಹ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಗರದ ಕರೇನಳ್ಳಿಯಲ್ಲಿರುವ ಮಂಗಳ ವಿದ್ಯಾ ಮಂದಿರ ಶಾಲೆಯನ್ನು ಮುಚ್ಚಿ ಅಲ್ಲಿನ ಆಡಳಿತ ಸಮಿತಿಯವರು ಆಂಗ್ಲಮಾಧ್ಯಮ ಶಾಲೆ ತೆರೆಯಲು ಮುಂದಾಗಿದ್ದಾರೆ ಎಂಬ ವಿಷಯ ತಿಳಿದುಬಂದಿದೆ
, 273 ಮಕ್ಕಳಿರುವ ಸರ್ಕಾರಿ ಅನುದಾನಿತ ಶಾಲೆಯ ಹೆಸರಿನಲ್ಲಿ ದಾನಿಗಳಿಂದ ಸರ್ಕಾರದಿಂದ ಹಲವು ಸವಲತ್ತುಗಳನ್ನು ಪಡೆದು ಈಗ ಏಕಾಏಕಿ ಶಾಲೆ ಮೆಚ್ಚಲು ಮುಂದಾಗಿರುವುದು ಸರಿಯಲ್ಲ ಈ ವರ್ತನೆಯನ್ನು ಕರುನಾಡ ರಾಷ್ಟ್ರೀಯ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಬಿ ಶಿವಶಂಕರ್  ತಿಳಿಸಿದರು.

ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ನಂತರ ಮಾತನಾಡಿದ ಅವರು ಅನುದಾನಿತ ಸರ್ಕಾರಿ ಶಾಲೆ ಹೆಸರಿನಲ್ಲಿ ಪಡೆದಿರುವ ಭೂಮಿ, ಸರ್ಕಾರ ಮತ್ತು ವಿವಿಧ ಸಂಸ್ಥೆಗಳಿಂದ ಪಡೆದಿರುವ ಎಲ್ಲಾ ಅನುದಾನಗಳನ್ನು ಹಿಂದಿರುಗಿಸಿ ತಮ್ಮ ಸ್ವಂತ ಬಂಡವಾಳ ಹೂಡಿಕೆ ಮಾಡಿ ಭೂಮಿಯನ್ನು ಖರೀದಿಸಿ ಕಟ್ಟಡ ನಿರ್ಮಿಸಿಕೊಂಡು ಶಾಲೆ ನಡೆಸಲಿ  ಅದನ್ನು ಬಿಟ್ಟು ಚೆನ್ನಾಗಿ ನಡೆಯುತ್ತಿರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆ ಮುಚ್ಚುವ ಹುನ್ನಾರ ಮಾಡಿದರೆ ನಾವು ಕಾನೂನು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕರೇನಳ್ಳಿಯ ಶ್ರೀ ಮಂಗಳ ವಿದ್ಯಾ ಮಂದಿರದಲ್ಲಿ ಸುಮಾರು 273 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ, ಈ ವಿಧ್ಯಾರ್ಥಿ ಗಳೆಲ್ಲರೂ ಕರೇನಳ್ಳಿ, ದರ್ಗಾಜೋಗಿಹಳ್ಳಿ , ಇಸ್ಲಾಂಪುರ ಭಾಗದವರಾಗಿದ್ದಾರೆ ಈ ಪ್ರದೇಶಗಳು ಅತ್ಯಂತ ಬಡವರು, ಹಿಂದುಳಿದವರು, ದಲಿತರು, ಅಲ್ಪ ಸಂಖ್ಯಾತರು, ಶ್ರಮಿಕ ವರ್ಗದವರು ವಾಸಮಾಡುವ ಪ್ರದೇಶಗಳಾಗಿರುತ್ತವೆ ಈ ಶಾಲೆಯಲ್ಲಿ ಸರ್ಕಾರದಿಂದ ನೇಮಕಗೊಂಡ 5 ಜನ ಶಿಕ್ಷಕರು 3 ಜನ ಬಿಸಿ ಊಟ ತಯಾರಕರು ಆಡಳಿತ ಮಂಡಳಿಯವರು ನೇಮಿಸಿ ಕೊಂಡಿರುವ 4 ಜನ ಶಿಕ್ಷಕರು ಸೇರಿದಂತೆ ಒಟ್ಟು 9 ಜನ ಶಿಕ್ಷಕರಿದ್ದು  ಈ ಶಾಲೆಯನ್ನು ಮುಚ್ಚಲು ಇಲ್ಲಿನ ಆಡಳಿತ ಮಂಡಳಿಯವರು ಹುನ್ನಾರ ನಡೆಸಿದ್ದು ಈ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು ಎಂದರು.

 ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ನಮ್ಮ ಮನವಿಗೆ ಸಕಾರಾತ್ಮಕವಾಗಿ ಅಧಿಕಾರಿಗಳು ಸ್ಪಂದಿಸಿದ್ದು  ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿ ಕೊರತೆಯಾಗುವುದಿಲ್ಲ, ಶಾಲೆ ಮುಚ್ಚಲು ಬಿಡುವುದಿಲ್ಲ ಎಂಬ ಭರವಸೆ ಕೊಟ್ಟಿದ್ದಾರೆ ಎಂದರು.

ಈ ವೇಳೆ ಕರುನಾಡ ರಾಷ್ಟ್ರೀಯ ಸೇನೆಯ ರಾಜ್ಯ ಪ್ರಧಾನಕಾರ್ಯದರ್ಶಿ ನರಸಿಂಹಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಂಜಿತಾ, ರಾಜ್ಯ ಖಜಾಂಚಿ ಕುಮಾರ್, ರಾಜ್ಯ ಸಮಿತಿ ನಿರ್ದೇಶಕರಾದ ಚಂದ್ರಿಕಾ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲಮಸ್ಸೇರಿ ಹೆಚ್‌ಎಂಟಿ ಘಟಕಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ಪರಿಶೀಲನೆತುಷ್ಟೀಕರಣದ ಮಿತಿ ಮೀರಿದ ಕಾಂಗ್ರೆಸ್: ಗಲಭೆ ಪ್ರಕರಣಗಳ ವಾಪಸಾತಿ ವಿರುದ್ಧ ವಿಜಯೇಂದ್ರಲೆಕ್ಕ ಕೊಡಿ ಸಿದ್ದರಾಮಣ್ಣ!: ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ಹಣ ಎಲ್ಲಿದೆ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆವೈಮಾನಿಕ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆಗೆ ಕರ್ನಾಟಕವೇ ನೆಚ್ಚಿನ ತಾಣ: ಸಚಿವ ಎಂ.ಬಿ. ಪಾಟೀಲ್ಸರಕಾರಿ ಜಾಗಕ್ಕೆ 12 ಕೋಟಿ, ರೈತರ ಜಮೀನಿಗೆ ಕೇವಲ 2 ಕೋಟಿ!: ​ಗೃಹಲಕ್ಷ್ಮಿಯರ 2 ತಿಂಗಳ ಕಂತಿನ 5,000 ಕೋಟಿ ಹಣ ಏನಾಯ್ತು?: ನಿಖಿಲ್ ಆಕ್ರೋಶರೈತರ ಒಕ್ಕಲೆಬ್ಬಿಸುವಿಕೆ ನಿಲ್ಲಿಸಿ, ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ 50% ಉದ್ಯೋಗ ಕಡ್ಡಾಯಗೊಳಿಸಿ: ನಿಖಿಲ್ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್, ಉಗ್ರ ಹಮ್ಜಾ ಬುರ್ಹಾನ್ ಹತ್ಯೆ: ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆರೌಡಿಶೀಟರ್, ಮುಸ್ಲಿಂ ಗೂಂಡಾಗಳ ಕೇಸ್ ವಾಪಸ್; ಸರ್ಕಾರದ ವಿರುದ್ಧ ಸಿ.ಟಿ. ರವಿ ಆಕ್ರೋಶಗರ್ಭಿಣಿಯರು, ಬಾಣಂತಿಯರಿಗೆ ನಿತ್ಯ ಪೌಷ್ಠಿಕ ಬಿಸಿಯೂಟ!​- ಡಾ. ಪ್ರಭಾ