LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ, ಭದ್ರಾ, ಗ್ಯಾರಂಟಿ ಪರಿಶೀಲನೆ ಮಾಹಿತಿ ಸಿದ್ದವಾಗಿಟ್ಟುಕೊಳ್ಳಿ- ಜಿಲ್ಲಾಧಿಕಾರಿ ಟಿ.ವೆಂಕಟೇಶ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಯಲಿದೆ.  ಬರ ನಿರ್ವಹಣೆ, ಕುಡಿಯುವ ನೀರು, ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಪಂಚ ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳ ಪರಿಶೀಲನೆ ಮಾಹಿತಿಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸಿದ್ದವಾಗಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. 

ಪ್ರಗತಿ ಪರಿಶೀಲನಾ ಸಭೆಯ ಅಂತಿಮ ಸಿದ್ದತೆಗಳ ಕುರಿತು ಶುಕ್ರವಾರ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಈಗಾಗಲೇ ಬೆಂಗಳೂರು ವಿಭಾಗ ಮಟ್ಟದ 9 ಜಿಲ್ಲೆಗಳ ವಿಪತ್ತು ನಿರ್ವಹಣೆ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಜಲಜೀವನ್ ಮಿಷನ್, ನಗರಾಭಿವೃದ್ಧಿ, ಸಣ್ಣ ನೀರಾವರಿ, ಶಾಲಾ ಶಿಕ್ಷಣ, ಅರಣ್ಯ ಹಾಗೂ ಪೊಲೀಸ್ ಇಲಾಖೆಗಳ ಮಾಹಿತಿಗಳನ್ನು ಈಗಾಗಲೇ ಸರ್ಕಾರದಿಂದ ಸಂಗ್ರಹಿಸಿಲಾಗಿದೆ. ಇದರ ಹೊರತಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ  ಭದ್ರಾ ಮೇಲ್ದಂಡೆ ಯೋಜನೆಯಡಿ ನೀರಾವರಿ ವಿಸ್ತರಣೆ ಕುರಿತಂತೆ ಸ್ಥಳೀಯ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳ ಗಮನ ಸೆಳೆಯಬಹುದು. ಈ ಹಿನ್ನಲೆಯಲ್ಲಿ ಹೊಳಲ್ಕೆರೆ, ಹಿರಿಯೂರು ತಾಲ್ಲೂಕುಗಳ ಪ್ರದೇಶಗಳನ್ನು ನೀರಾವರಿ ಯೋಜನೆಗೆ ಒಳಪಡಿಸುವ ಕುರಿತು ಸಲ್ಲಿಸಲಾದ ಪ್ರಸ್ತಾವನೆಗಳ ವಿವರಗಳನ್ನು ನೀಡಿದರೆ, ಸಭೆಯಲ್ಲಿ ಉತ್ತರಿಸಲು ಅನುವಾಗುತ್ತದೆ.

ಜಿಲ್ಲೆಯಲ್ಲಿ ಜಾನುವಾರುಗಳ ಸಂಖ್ಯೆ ಅನುಗುಣವಾಗಿ  ಲಭ್ಯ ಇರುವ ಮೇವು ಸಂಗ್ರಹಣೆ ವಿವರಗಳನ್ನು ಅಧಿಕಾರಿಗಳು ನೀಡುವುದರ ಜೊತೆಗೆ, ಜಿಲ್ಲೆಯಲ್ಲಿ 88,740 ಹೆಕ್ಟೇರ್ ಗೋಮಾಳ ಹಾಗೂ 8552 ಹೆಕ್ಟೇರ್ ಅಮೃತ್ ಕಾವಲ್ ಪ್ರದೇಶಗಳು ಇರುವುದನ್ನು ತಮ್ಮ ಮಾಹಿತಿಯಲ್ಲಿ ನೀಡಬೇಕು. ಈಗಾಗಲೇ ಜಿಲ್ಲೆಯಲ್ಲಿ ವಿತರಿಸಿರುವ ಮೇವು ಕಿಟ್ ಹಾಗೂ ಸರ್ಕಾರಕ್ಕೆ ಸಲ್ಲಿಸಿರುವ ಮೇವು ಕಿಟ್ ವಿವರಗಳನ್ನು ಸಹ ನೀಡಿಸಬೇಕು.

ಕೃಷಿ ಇಲಾಖೆ ಸಂಬಂಧಿಸಿದಂತೆ ಮುಂಗಾರು ಕೊರತೆಯಿಂದ ಜಿಲ್ಲೆಯಲ್ಲಿ 13.73 ಲಕ್ಷ ಹೇಕ್ಟರ್ ಪೈಕಿ ಬಿತ್ತನೆ ಗುರಿ ಪೈಕಿ ಇದುವರೆಗೆ ಎಷ್ಟು ಬಿತ್ತನೆಯಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಹಾಗೂ ಹಂಚಿಕೆ ಕುರಿತು ಮಾಹಿತಿ ನೀಡಿ.

ಸದ್ಯ ಶುದ್ದ ಕುಡಿಯುವ ನೀರಿನ ಘಟಕ, ಕುಡಿಯುವ ನೀರು ಸರಬರಾಜು, ಜಲಜೀವನ್ ಮಿಷಿನ್ ಕಾಮಗಾರಿ ಪ್ರಗತಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕಾರ್ಯಾತ್ಮಕ ನಳ ಸಂಪರ್ಕ, ಕುಡಿಯುವ ನೀರಿನ ಸಂಕಷ್ಟ  ಎದುರಾಗಿರುವ ಹಳ್ಳಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವ ಹಳ್ಳಿಗಳ ಕುರಿತು ನೀಡುವ ವಿವರಗಳು ಸ್ಪಷ್ಟವಾಗಿರಬೇಕು. ಶಿಕ್ಷಣ ಇಲಾಖೆ ಸಂಬಂಧಿಸಿದಂತೆ ದಾಖಲಾತಿ ಪ್ರಮಾಣ, ವಿದ್ಯಾರ್ಥಿಗಳ ನಿರಂತರ ಹಾಜರಾತಿಯಲ್ಲಿ ಕುಂಠಿತವಾಗಿರುವುದಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಜಿಲ್ಲಾಧಿಕಾರಿ.ಟಿ.ವೆಂಕಟೇಶ್ ಹೇಳಿದರು.

ಇದರೊಂದಿಗೆ ಪ್ರಗತಿ ಪರಿಶೀಲನೆ ಸಭೆಯ ಆಯೋಜನೆಗೆ ರಚಿಸಿದ ಸಮಿತಿಗಳ ಅಧಿಕಾರಿಗಳು ಇಂದೇ ಅಗತ್ಯ ಸಿದ್ದತೆಗಳನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರು ಇದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರಿನ ನಿಸ್ವಾರ್ಥ ಸೇವಕ – ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ ಅವರ ದೂರದೃಷ್ಟಿಗೆ ಒಲಿದ ಜಲಭಾಗ್ಯಹಿರಿಯೂರು ಬರದ ನಾಡಿಗೆ ಜಲಸಂಜೀವಿನಿ: ಸಿಎಂ ಡಿ.ಕೆ ಶಿವಕುಮಾರ್ ಅವರ ಭರವಸೆಗೆ ಒಲಿದ 244 ಕೋಟಿಯ ಬೃಹತ್ ಜಲ ಯೋಜನೆ!ಕೋಟಿ ಕೋಟಿ ಅನುದಾನದ ಶಂಕುಸ್ಥಾಪನೆಗೆ 'ರಾಜಕಾಲುವೆ' ಕಂಟಕ: ಶೀಲೆಯಾಗದ ಚಿತ್ರದುರ್ಗದ ಹೈಟೆಕ್ ಬಸ್ ನಿಲ್ದಾಣದ ಕನಸು!ವರುಣನ ಕೃಪೆಗಾಗಿ ಇಪ್ಪೆಕಣಿವೆ ಭೂತರಾಯ ಸ್ವಾಮಿಗೆ ಕಾತ್ರಿಕೇನಹಳ್ಳಿ ರೈತರಿಂದ ಪೂಜೆಜಿಲ್ಲಾವಾರು ಜಿಡಿಪಿ ಪ್ರಗತಿಗೆ ವೇಗ: ನೀತಿ ಆಯೋಗದ ಸದಸ್ಯರೊಂದಿಗೆ ಸಿಎಂ ಸುದೀರ್ಘ ಚರ್ಚೆ– ಸಚಿವ ಪ್ರಿಯಾಂಕ್ ಖರ್ಗೆರಾಜ್ಯದ ಜಿಲ್ಲಾ ಜಿಡಿಪಿ ವೃದ್ಧಿಗೆ 'ಲೀಪ್' ಯೋಜನೆ: ಸಿಎಂ ಡಿ ಕೆ ಶಿವಕುಮಾರ್ ಜತೆ ನೀತಿ ಆಯೋಗದ ಸದಸ್ಯ ಕೆ.ವಿ. ರಾಜು ಚರ್ಚೆಕಾಂಗ್ರೆಸ್‌ನದ್ದು ಕೇವಲ 'ಕ್ಯಾಮೆರಾ ರಾಜಕಾರಣ', ಪ್ರಚಾರಕ್ಕಾಗಿ ಪ್ರತಿಭಟನೆ: ವಿಜಯೇಂದ್ರ ವಾಗ್ದಾಳಿಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಡಿ.ಕೆ. ಶಿವಕುಮಾರ್ಬೆಂಗ‌ಳೂರು ಟೆಕ್ ಸಮ್ಮಿಟ್ 2026: 'ಎಐ & ಬಿಯಾಂಡ್' ಥೀಮ್ ಅನಾವರಣಗೊಳಿಸಿದ ಡಿ.ಕೆ. ಶಿವಕುಮಾರ್ಕರಾರುಗಳಿಂದ ಶೇ. 75ರಷ್ಟು ಹೂಡಿಕೆ ಸಾಕಾರಗೊಳಿಸುವುದು ನಮ್ಮ ಗುರಿ – ಸಚಿವ ಎಂ.ಬಿ. ಪಾಟೀಲ್