LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡರು ದೂರ ದೃಷ್ಟಿಯ ಆಡಳಿತಗಾರ-ಚಿಕ್ಕಣ್ಣ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೆಂಪೇಗೌಡರು ಕೇವಲ ಒಬ್ಬ ರಾಜನಷ್ಟೇ ಅಲ್ಲ
, ಉತ್ತಮ ಆಡಳಿತಗಾರ, ಸಮಾಜಮುಖಿ ನಾಯಕ ಮತ್ತು ದೂರದೃಷ್ಟಿಯ ನಗರ ನಿರ್ಮಾಣಕಾರರಾಗಿದ್ದರು, ಕರ್ನಾಟಕದ ಹೆಮ್ಮೆಯ ನಾಯಕ, ದೂರದೃಷ್ಟಿಯ ಆಡಳಿತಗಾರ ಎಂದು ಎನ್. ಎಸ್. ಎಸ್ ಅಧಿಕಾರಿ ಡಾ.ಎಂ ಚಿಕ್ಕಣ್ಣ ಹೇಳಿದರು. 

ನಗರದ ಹೊರವಲಯದ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ದೇವರಾಜ್ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಂಪೇಗೌಡ ಅವರು ಬೆಳೆಸಿದ ಬೆಂಗಳೂರು ಇಂದು ವಿಶ್ವದ ಪ್ರಮುಖ ತಂತ್ರಜ್ಞಾನ ನಗರಗಳಲ್ಲಿ ಒಂದಾಗಿ ಬೆಳೆದಿದೆ, ಕೆರೆಗಳು, ಉದ್ಯಾನಗಳು, ದೇವಾಲಯಗಳು ಹಾಗೂ ಜನಸ್ನೇಹಿ ಆಡಳಿತಕ್ಕೆ ಅವರು ನೀಡಿದ ಮಹತ್ವ ಇಂದಿಗೂ ನಮಗೆ ಆದರ್ಶವಾಗಿದೆ,ಕೆಂಪೇಗೌಡರ ಜೀವನವು ನಮಗೆ ಶಿಸ್ತು, ಪ್ರಾಮಾಣಿಕತೆ, ಜನಸೇವೆ ಮತ್ತು ದೇಶಪ್ರೇಮದ ಮೌಲ್ಯಗಳನ್ನು ಕಲಿಸುತ್ತದೆ. ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣಕ್ಕೂ ಅವರು ಸಮಾನ ಆದ್ಯತೆ ನೀಡಿದರು. ಅವರ ದೂರದೃಷ್ಟಿಯ ಫಲವನ್ನು ನಾವು ಇಂದಿಗೂ ಅನುಭವಿಸುತ್ತಿದ್ದೇವೆ ಎಂದರು. ‌ಉಪಪ್ರಾಂಶುಪಾಲ ಕೆ. ದಕ್ಷಿಣ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಸಿ.ಪಿ ಪ್ರಕಾಶ್,  ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಮಧುಶ್ರೀ ಸಂಶೋಧನಾ ವಿಭಾಗದ ಸಂಚಾಲಕ ನೀರಜ್, ಸಹಾಯಕ ಎನ್.ಎಸ್.ಎಸ್ ಅಧಿಕಾರಿಗಳಾದ ರಮ್ಯಶ್ರೀ, ವೆಂಕಟೇಶ್ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತಿತರರು ಹಾಜರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಕೋಗಿಲೆ ಎಸ್.ಜಾನಕಿಗೆ ನುಡಿ-ನಮನ, ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಬಿ.ಕಾಂತರಾಜ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಟಿ.ರಘುಮೂರ್ತಿಗೆ ಮನವಿ  ಚಿತ್ರದುರ್ಗ ಮೆಡಿಕಲ್ ಕಾಲೇಜ್ ಡೀನ್ ಡಾ.ಯುವರಾಜ್‌ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಲು ಧರಣಿ  ನಿವೇಶನಕ್ಕಾಗಿ ಭೂಮಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಸಾರ್ವಜನಿಕ ಶೌಚಾಲಯ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ  STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಜೈಲ್ ಭರೋ ಚಳುವಳಿಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಸಚಿವ ಟಿ. ರಘುಮೂರ್ತಿಅಂಬೇಡ್ಕರ್ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪ- ಉಪನ್ಯಾಸಕ ಡಾ.ಎಸ್.ಮಾರುತಿ