ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮದಲ್ಲಿ ಶ್ರೀ ಕೆಂಪೇಗೌಡ ಸೇನೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅಚರಣೆ ಮಾಡಲಾಯಿತು.
ಕೆಂಪೇಗೌಡ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಕೂರಿಸಿ ಊರಿನ ಪ್ರಮುಖ ಬೀದಿಗಳಲ್ಲಿ ವಿವಿದ ಕಲಾ ತಂಡಗಳೂಡನೆ ಮೆರವಣೆಗೆ ಮೂಲಕ ಗ್ರಾಮದ ಮದ್ಯದಲ್ಲಿರುವ ರಂಗ ಮಂದಿರಕ್ಕೆ ಕರೆತರಲಾಯಿತು.
ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ, ಕೃಷಿ ಕ್ಷೇತ್ರಕ್ಕೆ ಶ್ರಮಿಸುತ್ತಿರುವ ರೈತರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.



