Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 27ರಂದು ಕೆಂಪೇಗೌಡ ಜಯಂತಿ ಆಚರಣೆ, 15 ಲಕ್ಷ ಗಿಡ ನಾಟಿ: ಸಿಎಂ ಡಿ.ಕೆ. ಶಿವಕುಮಾರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ರಾಜ್ಯಾದ್ಯಂತ ಆಚರಿಸಲು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

​"ಕೆಂಪೇಗೌಡರು ಬೆಂಗಳೂರು ನಗರ ಹಾಗೂ ಇಡೀ ರಾಜ್ಯದ ಆಸ್ತಿ. ಯಾವುದೇ ಒಂದು ವರ್ಗಕ್ಕೆ ಸೀಮಿತ ಮಾಡದೆ, ಎಲ್ಲಾ ಧರ್ಮ, ಜಾತಿ ಹಾಗೂ ಸಂಘಟನೆಗಳನ್ನು ಒಟ್ಟಿಗೆ ಸೇರಿಸಿಕೊಂಡು ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುವುದು," ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

​ಕೆಂಪೇಗೌಡ ಬಡಾವಣೆಯಲ್ಲಿ ಮುಖ್ಯ ಕಾರ್ಯಕ್ರಮ ಹಾಗೂ ರಸ್ತೆ ಉದ್ಘಾಟನೆ

​ನೂತನವಾಗಿ ನಿರ್ಮಾಣವಾಗುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿಯೇ ಮುಂಬರುವ ಜೂನ್ 27ರಂದು ಕೆಂಪೇಗೌಡರ ಜಯಂತಿ ಆಚರಣೆಯ ಪ್ರಮುಖ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದೇ ಸಂದರ್ಭದಲ್ಲಿ ಬಡಾವಣೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ನೂತನ ರಸ್ತೆ ಕಾಮಗಾರಿಗಳ ಉದ್ಘಾಟನೆಯನ್ನೂ ನೆರವೇರಿಸಲಾಗುವುದು.

ಬಿಡಿಎ ವತಿಯಿಂದ 15 ಲಕ್ಷ ಗಿಡ ನೆಡುವ ಬೃಹತ್ ಅಭಿಯಾನ
​ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ
, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಬಿಡಿಎ ಅಧ್ಯಕ್ಷರಾದ ಎನ್‌.ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಭರ್ಜರಿ 15 ಲಕ್ಷ ಗಿಡಗಳನ್ನು ನೆಡುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ.

ಜಯಂತಿ ಆಚರಣೆಗೆ ಬಂಪರ್ ಅನುದಾನ
​ರಾಜ್ಯದ ಮೂಲೆ ಮೂಲೆಗೂ ಕೆಂಪೇಗೌಡರ ಸಂದೇಶ ತಲುಪಿಸಲು ಸರ್ಕಾರ ಅನುದಾನ ಘೋಷಿಸಿದೆ.

​224 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಣೆ ಮಾಡಲು ತಲಾ 1 ಲಕ್ಷ ಅನುದಾನ ಒದಗಿಸಲಾಗುವುದು.
​ಬೆಂಗಳೂರಿನ
369 ವಾರ್ಡ್‌ಗಳಲ್ಲಿ ಜಯಂತಿ ಆಚರಣೆಗಾಗಿ ತಲಾ 1 ಲಕ್ಷ ಅನುದಾನವನ್ನು ನೀಡಲು ತೀರ್ಮಾನಿಸಲಾಗಿದೆ.

ದೇವನಹಳ್ಳಿ ಥೀಮ್ ಪಾರ್ಕ್ ಉದ್ಘಾಟನೆಗೆ ಸಿದ್ಧತೆ
​ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ಭವ್ಯ
'ಕೆಂಪೇಗೌಡ ಥೀಮ್ ಪಾರ್ಕ್' ಕಾಮಗಾರಿ ಈಗ ಸಂಪೂರ್ಣವಾಗಿ ಪೂರ್ಣಗೊಂಡಿದೆ. ಇದರ ಅದ್ಧೂರಿ ಉದ್ಘಾಟನೆಗೆ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ.

ಕೆಂಪೇಗೌಡ ಟೌನ್ ಪ್ಲಾನಿಂಗ್ ಕಾಲೇಜು ಸ್ಥಾಪನೆ
​ಬೆಂಗಳೂರನ್ನು ಅಂದು ವೈಜ್ಞಾನಿಕವಾಗಿ ಯೋಜಿಸಿದ್ದ ಕೆಂಪೇಗೌಡರ ಸ್ಮರಣಾರ್ಥ
, ನಗರ ಯೋಜನೆಗೆ ಸಂಬಂಧಿಸಿದಂತೆ 'ಕೆಂಪೇಗೌಡ ಟೌನ್ ಪ್ಲಾನಿಂಗ್ ಕಾಲೇಜು' ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಬೇಕಾದ ಪ್ರಾಥಮಿಕ ಸಿದ್ಧತೆಗಳನ್ನು ತಕ್ಷಣವೇ ಕೈಗೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.