Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡ ಜಯಂತಿ: ಮಹಿಳೆಯರನ್ನು ಸಂಪೂರ್ಣ ಕಡೆಗಣಿಸಿದ ತಾಲೂಕು ಆಡಳಿತ; ಮಾನಸ ಮಂಜುನಾಥ್ ಆಕ್ರೋಶ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಆಯೋಜಕರಾದ ತಾಲೂಕು ಆಡಳಿತವು ಮಹಿಳೆಯರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಮನವಿ ಟ್ರಸ್ಟ್ ಸಂಸ್ಥಾಪಕರಾದ ಮಾನಸ ಮಂಜುನಾಥ್ ತೀವ್ರ ಆರೋಪ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದ ವ್ಯವಸ್ಥೆ ಹಾಗೂ ತಾಲೂಕು ಆಡಳಿತದ ಧೋರಣೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೇದಿಕೆಯಲ್ಲಿ ಪುರುಷರದ್ದೇ ಕಾರುಬಾರು: ಕಾಟಾಚಾರದ ಆಹ್ವಾನ:
"
ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ತಮಗೆ ತೋಚಿದಂತೆ ಹೋಗಿ ಲಭ್ಯವಿದ್ದ ಕುರ್ಚಿಗಳಲ್ಲಿ ಆಸೀನರಾದರು. ಸ್ವಾಗತ ಭಾಷಣದ ವೇಳೆಯೂ ಸಭಾಂಗಣದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರೂ, ಕೇವಲ ಕಾಟಾಚಾರಕ್ಕೆ ಎಂಬಂತೆ ಒಂದಿಬ್ಬರನ್ನು ಮಾತ್ರ ಆಹ್ವಾನಿಸಲಾಯಿತು. ಒಕ್ಕಲಿಗ ಮಹಿಳಾ ಸಂಘದ ತಾಲೂಕು ಅಧ್ಯಕ್ಷರಾದ ಮಮತಾ ಅವರನ್ನು ಅತ್ಯಂತ ನಿರ್ಲಕ್ಷ್ಯದಿಂದ ಕೊನೆಯಲ್ಲಿ ಕರೆದು ಕೂರಿಸಲಾಯಿತು. ಇಡೀ ವೇದಿಕೆ ತುಂಬಾ ಪುರುಷರೇ ತುಂಬಿಕೊಳ್ಳುವುದಾದಾರೆ, ಮಹಿಳೆಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಅಗತ್ಯವಾದರೂ ಏನಿತ್ತು?" ಎಂದು ಅವರು ಪ್ರಶ್ನಿಸಿದ್ದಾರೆ.

ಸಾಧಕರಿಗೆ ಸಿಗದ ಮನ್ನಣೆ:
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಕಷ್ಟು ಮಹಿಳೆಯರು ಮತ್ತು ಪುರುಷರು ಕಾರ್ಯಕ್ರಮದಲ್ಲಿ ಹಾಜರಿದ್ದರೂ ಸಹ, ಅವರನ್ನು ಕನಿಷ್ಠ ಪಕ್ಷ ಸ್ವಾಗತಿಸುವ, ಆಹ್ವಾನಿಸುವ ಅಥವಾ ಗುರುತಿಸುವ ಸೌಜನ್ಯವನ್ನು ಆಯೋಜಕರು ತೋರಲಿಲ್ಲ ಎಂದು ಅವರು ದೂರಿದ್ದಾರೆ.

"ಮಹಾಪುರುಷರು ಎಲ್ಲರಿಗೂ ಮಾದರಿ":
"
ಮಹಾಪುರುಷರ ಜಯಂತಿ ಕಾರ್ಯಕ್ರಮಗಳನ್ನು ಕೇವಲ ಒಂದು ನಿರ್ದಿಷ್ಟ ಜನಾಂಗಕ್ಕೆ ಸೀಮಿತಗೊಳಿಸದೆ, ಎಲ್ಲಾ ವರ್ಗದ ಜನರನ್ನು ಆಹ್ವಾನಿಸಬೇಕು. ಆ ಮಹನೀಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂಬುದನ್ನು ಹಲವು ಬಾರಿ ಮನವಿ ಮಾಡಿದ್ದರೂ ಸಹ ತಾಲೂಕು ಆಡಳಿತವು ಪದೇ ಪದೇ ಅದೇ ತಪ್ಪುಗಳನ್ನು ಮರುಕಳಿಸುತ್ತಿದೆ."
ಮಾನಸ ಮಂಜುನಾಥ್, ಸಂಸ್ಥಾಪಕರು, ಮನವಿ ಟ್ರಸ್ಟ್.

ಸಮಿತಿಗೆ ಎಚ್ಚರಿಕೆ:
ಮುಂದಿನ ದಿನಗಳಲ್ಲಿ ಯಾವುದೇ ಜಯಂತಿ ಅಥವಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇಂತಹ ಮಹಿಳಾ ವಿರೋಧಿ ವರ್ತನೆಗಳು ಮರುಕಳಿಸಬಾರದು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಈ ಬಗ್ಗೆ ತೀವ್ರ ಜಾಗ್ರತೆ ವಹಿಸಬೇಕು ಮತ್ತು ಎಲ್ಲರಿಗೂ ಸಮಾನ ಗೌರವ ಸಿಗುವಂತೆ ನೋಡಿಕೊಳ್ಳಬೇಕು ಎಂದು ಮಾನಸ ಮಂಜುನಾಥ್ ಆಗ್ರಹಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗಕ್ಕೆ ಆಗಮಿಸಲಿರುವ ಅಂತರಾಷ್ಟ್ರೀಯ ಆಧ್ಯಾತ್ಮಿಕ ಗುರು ಸದ್ಗುರು ಶ್ರೀ  ಜಗ್ಗಿ ವಾಸುದೇವ್ಹಾಡೋನಹಳ್ಳಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆಕೆಂಪೇಗೌಡರ ಜಾತ್ಯತೀತ ಕಲ್ಪನೆ ಇಂದಿಗೂ ಆದರ್ಶ-ಡಾ.ಕೆ.ಸುಧಾಕರ್ಪಲ್ಸ್ ಪೋಲಿಯೋ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆಹಿರಿಯ ಪತ್ರಕರ್ತ, ನಿರ್ದೇಶಕ ಎನ್.ಎಸ್.ಶಂಕರ್ ನಿಧನ: ಕೆಯುಡಬ್ಲ್ಯೂಜೆ ತೀವ್ರ ಸಂತಾಪಯೋಗಭ್ಯಾಸವು ಮಾನವನಲ್ಲಿ ಅಳತೆ ಮತ್ತು ಪ್ರಮಾಣಗಳ ವಿವೇಕಜ್ಞಾನ ಮೂಡಿಸುತ್ತದೆ: ಯೋಗಾಚಾರ್ಯ ಚಿನ್ಮಯಾನಂದಜೆಡಿಎಸ್ ಬೂತ್ ಮಟ್ಟದ ಏಜೆಂಟರ ಕಾರ್ಯಾಗಾರ: ಮುಂಬರುವ ಚುನಾವಣಾ ಸಿದ್ಧತೆ ಕುರಿತು ತೀವ್ರ ಚರ್ಚೆಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯಿಂದ 'ಮತ ದ್ರೋಹ': ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪಹಸಿರು ಅಭಿಯಾನಕ್ಕೆ ಜಾಗತಿಕ ಗಿನ್ನಿಸ್ ರೆಕಾರ್ಡ್ ಮನ್ನಣೆ: ಮುಖ್ಯಮಂತ್ರಿ ಶಿವಕುಮಾರ್ ಹೆಮ್ಮೆಯ ಘೋಷಣೆಕಾರ್ಮಿಕರ ಘನತೆ, ಹಕ್ಕುಗಳ ರಕ್ಷಣೆಗೆ ಕರ್ನಾಟಕ ಬದ್ಧ: ಮುಖ್ಯಮಂತ್ರಿ ಶಿವಕುಮಾರ್