Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಜಿ.ದಿನೇಶ್ ನಾಮಪತ್ರ ಸಲ್ಲಿಕೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಡಿ. 21ರಂದು ನಡೆಯಲಿರುವ ನಗರಸಭೆಯ ಹೇಮಾವತಿ ಪೇಟೆ 21ನೇ ವಾರ್ಡಿನ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಿ. ದಿನೇಶ್ ಸೋಮವಾರ ನಾಮಪತ್ರ ಸಲ್ಲಿಸಿದರು.


ಹೇಮಾವತಿ ಪೇಟೆ ನಾಗರಕಲ್ಲು ದೇವಾಲಯದಲ್ಲಿ ಪೂಜೆ ಸಲ್ಲಿಸಿದ ದಿನೇಶ್ ಅಲ್ಲಿಂದ ಕಾಂಗ್ರೆಸ್ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ನಗರಸಭೆಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು. ಈ ವೇಳೆ ಸುದ್ಧಿಗಾರ ರೊಂದಿಗೆ ಮಾತನಾಡಿ ಹೇಮಾವತಿ ಪೇಟೆ ವಾರ್ಡಿನಲ್ಲಿ ನಾನು ಚಿರಪರಿಚಿತನಾಗಿದ್ದು,

ಈ ಹಿಂದೆ ನಮ್ಮ ತಂದೆ ಕೆ. ಸಿ. ಗೋಪಾಲಕೃಷ್ಣರವರು ಹಾಗೂ ನನ್ನ ಸೋದರ ರಘುರಾಮ್ ಸದಸ್ಯರಾಗಿ ಜನಪರ ಕೆಲಸ ಮಾಡಿದ್ದಾರೆ. ಜೊತೆಗೆ ಕಳೆದ  ಚುನಾವಣೆಯಲ್ಲಿ ನಾನು ಸ್ಪರ್ದಿಸಿ ಕೆಲವೇ ಮತಗಳ ಅಂತರದಿಂದ ಪರಾಭವ ಗೊಂಡಿದ್ದೆ.

ಅಂದಿನಿಂದ ಇಂದಿನವರೆಗೂ ವಾರ್ಡಿನ ಮತದಾರರ ಜೊತೆ ನಿಕಟ ಸಂಪರ್ಕ ಹೊಂದಿದ್ದೇನೆ. ಈ ಕಾರಣಗಳಿಂದಾಗಿ ವಾರ್ಡಿನ ನಾಗರಿಕರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಆದ್ದರಿಂದ ಈ ಬಾರಿ ನಾನು ಗೆಲ್ಲುವ ವಿಶ್ವಾಸವಿದೆ ಎಂದು ದಿನೇಶ್ ಹೇಳಿದರು.

ನಾಮಪತ್ರ ಸಲ್ಲಿಕೆ ವೇಳೆ ನಗರ ಕಾಂಗ್ರೆಸ್ ಅಧ್ಯಕ್ಷ ಕೆ. ಪಿ. ಜಗನ್ನಾಥ್, ನೇಕಾರ ಮುಖಂಡ, ಕೆ. ಪಿ. ಸಿ. ಸಿ. ಸದಸ್ಯ ಬಿ. ಜಿ. ಹೇಮಂತರಾಜ್, ಡಿ. ಪಿ. ಎ. ಸದಸ್ಯ ಅಂಜನ್ ಮೂರ್ತಿ, ನಗರಸಭಾ ಸದಸ್ಯರಾದ ಶಿವಶಂಕರ್ (ಶಂಕ್ರಿ ), ಕಾಂತರಾಜ್ ಮುಖಂಡ ಮುನಿರಾಜು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ