Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ಜೀವನವನ್ನು ಸಾರ್ವಜನಿಕರ ಸೇವೆಗೆ ಮೀಸಲಿಡುವೆ-ಕೆ.ಜಿ ಜಗದೀಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸರ್ಕಾರಿ ನೌಕರರು ಕಚೇರಿಗೆ ಕೆಲಸದ ನಿಮಿತ್ತ ಬರುವ ಸಾರ್ವಜನಿಕರ ಸೇವೆಗೆ ಮೀಸಲಿರಬೇಕೆಂದು ರಾಷ್ಟ್ರೀಯ ಹೆದ್ದಾರಿ ವಲಯದ ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಜಿ.ಜಗದೀಶ್ ಕರೆ ನೀಡಿದರು.


ಜಿಲ್ಲಾ ಗುತ್ತಿಗೆದಾರರ ಸಂಘ, ಲೋಕೋಪಯೋಗಿ, ಯೋಜನಾ, ಕುಡಿಯುವ ನೀರು ಪೂರೈಕೆ ಯೋಜನೆ, ಪಂಚಾಯತ್‌ರಾಜ್ ಇಂಜಿನಿಯರಿಂಗ್, ಸಣ್ಣ ನೀರಾವರಿ ರಾಷ್ಟ್ರೀಯ ಹೆದ್ದಾರಿ ವಿಭಾಗಗಳು, ನಿರ್ಮಿತಿ ಕೇಂದ್ರ ಇವುಗಳ ಸಹಯೋಗದೊಂದಿಗೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಅಧಿಕಾರವಿರುವುದು ದರ್ಪ ತೋರುವುದಕ್ಕಲ್ಲ ಎನ್ನುವುದನ್ನು ನಾನು ಸೇವೆಗೆ ಸೇರಿದಾಗಿನಿಂದಲೂ ಮನವರಿಕೆ ಮಾಡಿಕೊಂಡು ಕೈಲಾದಷ್ಟು ಜನಸೇವೆ ಸಲ್ಲಿಸಿದ್ದೇನೆ. ಶೇ.೧ ರಷ್ಟು ಮಂದಿಗೆ ಮಾತ್ರ ಸರ್ಕಾರಿ ನೌಕರಿ ಸಿಗುತ್ತದೆ. ಉಳಿದವರಿಗೆ ಈ ಅವಕಾಶವಿಲ್ಲ. ನನಗೆ ಜನಸಾಮಾನ್ಯರು ಕೊಟ್ಟ ನೌಕರಿಯನ್ನು ಅವರ ಸೇವೆಗಾಗಿಯೇ ಮುಡುಪಾಗಿಟ್ಟಿದ್ದೆ. ನನ್ನ ಅಧಿಕಾರವಧಿಯಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಕೆಲವು ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಕೆಲಸ ಮಾಡಿದ್ದೇನೆ. ನಿವೃತ್ತಿಯ ನಂತರವೂ ಈ ಜಿಲ್ಲೆಗೆ ನನ್ನ ಸೇವೆಯಿರುತ್ತದೆಂದು ಭರವಸೆ ನೀಡಿದರು.

ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ನಿವೃತ್ತ ಅಧೀಕ್ಷಕ ಇಂಜಿನಿಯರ್ ಎಂ.ರಮೇಶ್ ನಿವೃತ್ತಿ ನಂತರ ಜೀವನ ಕಷ್ಟಕರವಾಗಿರುತ್ತದೆ. ಸುಮ್ಮನೆ ಕುಳಿತು ಕಾಲ ಕಳೆಯುವುದು ಬಲು ಬೇಸರ. ಅಭಿವೃದ್ದಿ ಕೆಲಸಗಳಿಗೆ ಇವರ ಕೊಡುಗೆ ಸಾಕಷ್ಟಿದೆ. ಸರ್ಕಾರದಿಂದ ಅನುದಾನ ತಂದು ಅದನ್ನು ಯಾವ ಕಾಮಗಾರಿಗೆ ಹೇಗೆ ಎಷ್ಟು ಬಳಸಬೇಕೆಂಬ ಬುದ್ದಿವಂತಿಕೆಯಿಂದ ಕೆ.ಜಿ.ಜಗದೀಶ್ ಕೆಲಸ ಮಾಡುತ್ತಿದ್ದರು. ನಿವೃತ್ತಿಯ ನಂತರವೂ ಅವರ ಸಲಹೆ ಸಹಕಾರವನ್ನು ಇಂಜಿನಿಯರ್‌ಗಳು ಪಡೆದುಕೊಳ್ಳುವುದು ಉತ್ತಮ ಎಂದು ಹೇಳಿದರು.

ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಮಾತನಾಡುತ್ತ ಮುಂದಿನ ಯೋಜನೆಗಳ ಬಗ್ಗೆ ನಿಮ್ಮ ಕನಸು ಸಾಕಾರಗೊಳ್ಳಲಿ. ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳನ್ನು ಜೊತೆಯಲ್ಲಿಟ್ಟುಕೊಳ್ಳಿ. ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಅಭಿವೃದ್ದಿಗೆ ನಿಮ್ಮ ಸೇವೆ ಸಿಗಲೆಂದು ಕೆ.ಜಿ.ಜಗದೀಶ್‌ರವರಲ್ಲಿ ಮನವಿ ಮಾಡಿದರು.

ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ್ ಮಾತನಾಡಿ ಸದಾ ಸರ್ಕಾರಿ ನೌಕರರ ಪರವಾಗಿದ್ದ ಕೆ.ಜಿ.ಜಗದೀಶ್‌ರವರು ಕರ್ನಾಟಕದಲ್ಲಿ ಭೀಕರ ಬರಗಾಲ ಕಾಣಿಸಿಕೊಂಡಾಗ ನೌಕರರಿಂದ ಸಂಗ್ರಹಿಸಿದ ೭೪ ಲಕ್ಷ ರೂ.ಗಳನ್ನು ಸರ್ಕಾರಕ್ಕೆ ನೀಡಿ ಮಾನವೀಯತೆ ಮೆರೆದರು. ೨೦೧೩ ರಲ್ಲಿ ಚಿತ್ರದುರ್ಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ನಡೆದಾಗಲು ಇವರ ಪಾತ್ರವಿತ್ತು. ಅನೇಕರಿಗೆ ಸಹಾಯ ಮಾಡಿದ್ದಾರೆ.

ಸಹನೆ, ತೃಪ್ತಿ, ಮಾನವೀಯತೆಯನ್ನಿಟ್ಟುಕೊಂಡು ಅಧಿಕಾರವಧಿಯಲ್ಲಿ ಕೆಲಸ ಮಾಡಿರುವ ನಿಮ್ಮ ನಿವೃತ್ತಿ ಜೀವನ ಸುಖಮಯವಾಗಿರಲೆಂದು ಹಾರೈಸಿದರು.

ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲೇಶಪ್ಪ ಮಾತನಾಡಿದರು. ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಬಿ.ಎಸ್.ಹರೀಶ್‌ಕುಮಾರ್, ಕಾರ್ಯಪಾಲಕ ಇಂಜಿನಿಯರ್‌ಗಳಾದ ನಾಗರಾಜ್, ಎಲ್.ಹನುಮಂತಪ್ಪ, ಕೆ.ಮಲ್ಲಿಕಾರ್ಜುನ್ ಇವರುಗಳು ವೇದಿಕೆಯಲ್ಲಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ