ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಎಚ್. ಮುನಿಯಪ್ಪ ಅವರಿಗೆ
ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೀಡಿ ಮಾದಿಗ ಸಮುದಾಯಕ್ಕೆ ಬೇಸವನ್ನುಂಟು ಮಾಡಿದ್ದಾರೆ, ಅವರ ಹಿರಿತನಕ್ಕೆ ಸಮಾಜ ಕಲ್ಯಾಣ ಅಥವಾ ಗೃಹ ಖಾತೆಯನ್ನು ನೀಡುವಂತೆ ದೊಡ್ಡಬಳ್ಳಾಪುರ ನಗರ ಕಾಂಗ್ರೆಸ್ ಪ್ರಚಾರ ಸಮಿತಿ.ಅಧ್ಯಕ್ಷ ಮನು.ಆರ್.ವಿ. ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿ ಸಚಿವರಾದ ಕೆ.ಎಚ್.ಮುನಿಯಪ್ಪರವರು ರಾಜ್ಯದ ನೂತನ ಸರ್ಕಾರದಲ್ಲಿ ಹಿರಿಯ ಅನುಭವಿಗಳಾಗಿದ್ದಾರೆ.ಇವರಿಗೆ ಉನ್ನತ ಮಂತ್ರಿ ಸ್ಥಾನ ನೀಡುವ ಮೂಲಕ ಮಾದಿಗ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಿದರು.
ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪರಿಶಿಷ್ಟ ಜಾತಿ ಎಸ್ಸಿ (ಎಡ) ಸಮುದಾಯದ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಿರಿಯ ಮುಖಂಡರಾದ ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರಿಗೆ ಮನವಿ ಸಲ್ಲಿಸಿಲಾಗಿತ್ತು. ಅದರೆ ಕೆ ಹೆಚ್.ಮುನಿಯಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಎಂಬುದು ಸಮುದಾಯ ಆಶಯವಿತ್ತು. ಆಹಾರ ಖಾತೆಯನ್ನು ಮುಂದುವರೆಸುವ ಬದಲು, ಸಮಾಜ ಕಲ್ಯಾಣ ಇಲಾಖೆ ಅಥವಾ ಗೃಹ ಖಾತೆಯನ್ನು ಕೆ.ಹೆಚ್.ಮುನಿಯಪ್ಪನವರಿಗೆ. ನೀಡಬೇಕಿತ್ತು.
ಮಾದಿಗ ಸಮಾಜದ ಸರ್ವೋಚ್ಚ ನಾಯಕರಾಗಿರುವ ಕೆ.ಹೆಚ್.ಮುನಿಯಪ್ಪ ರವರು ಕಾಂಗ್ರೆಸ್ ಪಕ್ಷಕ್ಕಾಗಿ ಅಹರ್ನಿಷಿ ದುಡಿದಿದ್ದಾರೆ. ಕೇಂದ್ರ ಸರ್ಕಾರದಲ್ಲಿ 7 ಬಾರಿ ಸಂಸದರಾಗಿ, ರೈಲ್ವೆ ಖಾತೆ ಸಚಿವರಾಗಿದ್ದವರು. ಕೆ.ಹೆಚ್.ಎಂ.ರವರಿಗೆ ಉತ್ತಮ ಸ್ಥಾನ ನೀಡದೆ ಇರುವುದು ಸಮುದಾಯಕ್ಕೆ ಅನ್ಯಾಯವಾಗಿದೆ. ಅದರಿಂದ ಮುಂದಿನ ದಿನಗಳಲ್ಲಿ ಅವರ ಹಿರಿತನಕೆ ತಕ್ಕ ಖಾತೆ ನೀಡಲೆ ಬೇಕು ಇದು ನಮ್ಮ ಸಮಾಜದ ಹಾಕ್ಕೊತ್ತಾಯವಾಗಿದೆ. ಈ ಬಗ್ಗೆ
ರಾಜ್ಯ ರಾಷ್ಟ್ರ ನಾಯಕರಾದ ಸಿಎಂ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಲಾ ರವರು ತುರ್ತು ಗಮನ ಹರಿಸಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮನು ಆರ್.ವಿ. ಮನವಿ ಮಾಡಿದ್ದಾರೆ.



