Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಗಿಲು ಶೆಡ್ ತೆರವುಗೊಳಿಸಿದ್ದು 167, ಮನೆಗಳಿಗೆ ಅರ್ಜಿ ಬಂದಿದ್ದು 257

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್, ಮನೆಗಳ ತೆರವುಗೊಳಿಸಿರುವ ವಿಚಾರ ರಾಜಕೀಯ ವಿವಾದಕ್ಕೀಡಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೋಗಿಲು ನಿರಾಶ್ರಿತರಿಗೆ ಮನೆ ನೀಡುವುದಾಗಿ ಘೋಷಣೆ ಮಾಡಿದ್ದೂ ಸಹ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ಷೇಪವೂ ವ್ಯಕ್ತವಾಗಿದೆ. ಏತನ್ಮಧ್ಯೆ ಇದೀಗ ಹೊಸ ಸಮಸ್ಯೆ ಎದುರಾಗಿದೆ.


ಸರ್ಕಾರ ರಾಜೀವ್ ಗಾಂಧಿ ವಸತಿ ಯೋಜನೆ ಅಡಿ 167 ಫ್ಲಾಟ್​​ಗಳನ್ನು ಕೋಗಿಲು ನಿರಾಶ್ರಿತರಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದರು.


ಆದರೆ, ಕೋಗಿಲು ಸಂತ್ರಸ್ತರೆಂದು ಹೇಳಿಕೊಂಡು ಮನೆಗಳಿಗಾಗಿ 257ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ಕೋಗಿಲು ಲೇಔಟ್ ನಿವಾಸಿಗಳಿಗೆ ಮನೆ ಹಂಚಿಕೆ ಪ್ರಕ್ರಿಯೆ ಇದೀಗ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.


ಅಕ್ರಮ ಶೆಡ್, ಮನೆಗಳನ್ನ ಒಡೆದು ಹಾಕಿರುವ ಒಂದೇ ಮನೆಯ ವಿಳಾಸದಲ್ಲಿ ಇಬ್ಬರು, ಮೂವರು ಮನೆಗಾಗಿ ಅರ್ಜಿ ಸಲ್ಲಿಸಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲದೆ, ಕೋಗಿಲು ನಿವಾಸಿಗಳು ಅಲ್ಲದವರೂ ಮನೆಗಾಗಿ ಅರ್ಜಿ ಹಾಕಿರುವುದಾಗಿ ತಿಳಿದುಬಂದಿದೆ.

ಮುಖ್ಯಮಂತ್ರಿ ಸೂಚನೆಯಂತೆ ಕೋಗಿಲು ಸಂತ್ರಸ್ತ ಕುಟುಂಬಗಳಿಗೆ ಮನೆಗಳನ್ನು ವಿತರಿಸಲು ಇಲಾಖಾ ಅಧಿಕಾರಿಗಳ ತಂಡ ಅಲ್ಲಿನ ನಿವಾಸಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.


ವಸತಿ ಇಲಾಖೆ ಹಾಗೂ ಇತರ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಯುತ್ತಿದೆ. ನಿರಾಶ್ರಿತರಿಂದ ಬಂದಿರುವ ಎಲ್ಲ ಅರ್ಜಿಗಳ ನೈಜತೆ ಪರಿಶೀಲನೆ ಕಾರ್ಯ ನಡೆಸಲಾಗುತ್ತಿದೆ. ಪರಿಶೀಲನೆ ಬಳಿಕ ಅಂತಿಮ ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಕನ್ನಡಿಗರು, ಪರಭಾಷಿಕರ ಪಟ್ಟಿ ಸಿದ್ಧ:
ಕೋಗಿಲು ಸಂತ್ರಸ್ತರಿಗೆ ಮನೆ ಹಂಚಿಕೆ ಸಂಬಂಧವಾಗಿ ಅಧಿಕಾರಿಗಳು ಈಗಾಗಲೇ ಕನ್ನಡಿಗರು ಹಾಗೂ ಪರಭಾಷಿಕರು ಎಂಬ ಎರಡು ಪ್ರತ್ಯೇಕ ಪಟ್ಟಿ ಸಿದ್ಧಪಡಿಸಿದ್ದಾರೆ ಎನ್ನಲಾಗಿದೆ.
ಮನೆಗಳಿಗಾಗಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ಪರಿಶೀಲನೆ ಮುಗಿದ ನಂತರ ವಸತಿ ಇಲಾಖೆ ಮನೆ ಹಂಚಿಕೆ ಕುರಿತ ಅಂತಿಮ ಪಟ್ಟಿ ಪ್ರಕಟಿಸಲಿದೆ.


ಕೋಗಿಲು ಬಡಾವಣೆಯಲ್ಲಿ ಅಕ್ರಮ ಶೆಡ್, ಮನೆಗಳನ್ನು ನಿರ್ಮಿಸಿದ್ದವರಿಗೆ ವಸತಿ ಒದಗಿಸಿಕೊಡುವ ಸರ್ಕಾರದ ತೀರ್ಮಾನಕ್ಕೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿವೆ.


ಕರ್ನಾಟಕದಲ್ಲಿ ವಿವಿಧ ಕಾರಣಗಳಿಂದ ಸಂತ್ರಸ್ತರಾಗಿರುವ ಕರ್ನಾಟಕ ರಾಜ್ಯದ ದಲಿತ, ಹಿಂದುಳಿದ ಅರ್ಹ ಫಲಾನುಭವಿಗಳಿಗೇ ದಶಕಗಳಿಂದ ಪರಿಹಾರ ನೀಡಿಲ್ಲ. ಅಂಥದ್ದರಲ್ಲಿ ಇದೀಗ ಏಕಾಏಕಿ ಎಲ್ಲಿಂದಲೋ ಬಂದ ವಲಸಿಗರಿಗೆ, ಅದೂ ಸಹ ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿದವರಿಗೆ ಪರಿಹಾರ ಏಕೆ ಎಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿವೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ