Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ-ಜೆಡಿಎಸ್ ಮೈತ್ರಿ, ಗೊಂದಲಗಳಿಗೆ ಅವಕಾಶ ಕೊಡಬಾರದು-ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ವಿಚಾರದಲ್ಲಿ ಮುಕ್ತವಾಗಿದ್ದೇವೆ. ಜನರಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಕೊಡಬಾರದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿವಿ ಮಾತು ಹೇಳಿದರು.


ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಮಾತನಾಡಿದ ಅವರು, ಜಿಬಿಎ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲ ಪಕ್ಷಗಳು ಜಿಬಿಎ, ಜಿಪಂ, ತಾಪಂ ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗ ಚುನಾವಣೆ ನಡೆಯುವ ವಾತಾವರಣ ಇದೆ. ಬೆಂಗಳೂರು ಜಿಬಿಎ ಚುನಾವಣೆಗಾಗಿಯೇ ನಾವು ಕೂಡ ಸಭೆ ಕರೆದಿದ್ದೇವೆ. ಮುಂದಿನ ನಮ್ಮ ನಡೆ ಏನಾಗಿರಬೇಕು ಎಂಬ ಚರ್ಚೆ ಮಾಡ್ತೇವೆ. ಮೈತ್ರಿ ವಿಷಯದಲ್ಲಿ ಈ ಕ್ಷಣದವರೆಗೆ ನಾವೇ ಚರ್ಚೆ ಮಾಡಿಲ್ಲ. ಚರ್ಚೆ ಯಾವಾಗ ಮಾಡಬೇಕು ಆ ಸಮಯಕ್ಕೆ ಮಾಡುತ್ತೇವೆ. ವೈಯುಕ್ತಿಕ ಹೇಳಿಕೆಗಳ ಬಗ್ಗೆ ಚರ್ಚೆ ಮಾಡಲು ಹೋಗಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ವೈಯಕ್ತಿಕ ಹೇಳಿಕೆ ಅನಾವಶ್ಯಕ:
ಒಂದೊಂದು ಪಕ್ಷದಲ್ಲಿ ಒಂದೊಂದು ರೀತಿ ಚರ್ಚೆ ಮಾಡುತ್ತಾರೆ. ಕೆಲವರು ಮಾತಾಡ್ತಾರೆ
, ಅದೇ ಅಂತಿಮ ಅಲ್ಲ. ಅಸೆಂಬ್ಲಿ ಚುನಾವಣೆಗೆ ಎರಡು ವರ್ಷ ಇದೆ. ಜಿ.ಪಂ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳಿದೆ. ಆ ಸಮಯ ಬಂದಾಗ ಚರ್ಚೆ ಮಾಡೋಣ. ವೈಯುಕ್ತಿಕ ಹೇಳಿಕೆಗಳಿಗೆ ಉತ್ತರ ಕೊಡೋದು ಅನಾವಶ್ಯಕ ಎಂದು ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ಜೊತೆ ಮೈತ್ರಿಗೆ ಮಂಡ್ಯ, ಹಾಸನ ಬಿಜೆಪಿ ನಾಯಕರ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿ, ವ್ಯಕ್ತಿಗಳ ಹೇಳಿಕೆ ಬಗ್ಗೆ ನಾನು ಚರ್ಚೆ ಮಾಡೋಕೆ ಹೋಗುವುದಿಲ್ಲ. ಕೆಲವರು ಮಾತಾಡೋದೇ ಅಂತಿಮ ಅಲ್ಲ. ವಿಧಾನಸಭೆ ಚುನಾವಣೆ ಎರಡು ವರ್ಷ ಇದೆ. ಸ್ಥಳೀಯ ಸಂಸ್ಥೆ ಚುನಾವಣೆ 4-5 ತಿಂಗಳು ಇದೆ. ಅ ಸಮಯ ಬಂದಾಗ ಚರ್ಚೆ ಮಾಡೋಣ. ವೈಯಕ್ತಿಕವಾಗಿ ಮಾತಾಡೋರಿಗೆ ನಾನು ಉತ್ತರ ಕೊಡೋದು ಅನಾವಶ್ಯಕ ಎಂದು ಪ್ರೀತಂಗೌಡ, ನಾರಾಯಣಗೌಡ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದರು.

113 ಸ್ಥಾನ ಪಡೆದು ಕುಮಾರಸ್ವಾಮಿ ಬೇಕಾದ್ರೆ ಸಿಎಂ ಆಗಲಿ ಎಂಬ ಛಲವಾದಿ ನಾರಾಯಣಸ್ವಾಮಿ ‌ಹೇಳಿಕೆ ವಿಚಾರವಾಗಿ ಮಾತನಾಡಿ, ನಾನು ಇಲ್ಲಿವರೆಗೂ ನಿಮ್ಮ ಮುಂದೆ ನೂರು ಬಾರಿ ಹೇಳಿದ್ದೇನೆ. ರಾಜ್ಯದಲ್ಲಿ ಇರೋ ಇಂತಹ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯಬೇಕು ಅನ್ನೋದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಆಗೋದೆಲ್ಲ ಆಮೇಲೆ. ಈ ರಾಜ್ಯದಲ್ಲಿ ಉತ್ತಮ, ಜನಪರ ಸರ್ಕಾರ ಬರಬೇಕು ಅನ್ನೋದು ನನ್ನ ಅಭಿಪ್ರಾಯ. ಜನರ ಭಾವನೆಗೆ ಸ್ಪಂದಿಸೋ ಸರ್ಕಾರ ಬೇಕು. ಇಂತಹ ಭ್ರಷ್ಟ ಸರ್ಕಾರ ತೆಗೆಯಬೇಕು ಎಂಬುದು ನನ್ನ ಅಜೆಂಡಾ ಎಂದು ತಿಳಿಸಿದರು.

ಬೀದಿಯಲ್ಲಿ ಮಲಗಿದ್ದಿರಲ್ಲ?:
ವಂದೇ ಮಾತರಂಗೆ ಕೆಲವು ಮೌಲ್ವಿಗಳ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿ
, ದೇಶದಲ್ಲಿ ಈ ರೀತಿಯ ಘಟನೆಯಾದಾಗ ಗೊಂದಲ ಸೃಷ್ಟಿಸಲು ಶಕ್ತಿ ಇದೆ. ವಂದೇ ಮಾತರಂನಿಂದ ಯಾರಿಗೆ ತೊಂದರೆ ಇದೆ. ವಂದೇ ಮಾತರಂ ಮಾಡಿದ ತಕ್ಷಣ ಏನು ತೊಂದರೆ ನಿಮಗೆ.?. ಇದರಿಂದ ನಿಮಗೆ ಅವಮಾನನಾ.?. ಇಂತಹ ವಿಷಯಗಳನ್ನು ಹೊರತುಪಡಿಸಿ, ರಾಜ್ಯದಲ್ಲಿ ಲೂಟಿ ಆಗ್ತಿದೆ‌. ಆ ಲೂಟಿ ಸರಿ ಪಡಿಸೋದು ನೋಡಿಕೊಳ್ಳಬೇಕು. ಥಣಿಸಂದ್ರ, ಕೋಗಿಲುನಲ್ಲಿ ‌ಏನೋ ನಡೆಯುತ್ತಿತ್ತು. ಮನೆ ಕೊಡ್ತಿವಿ ಅಂದ್ರು, ಎಷ್ಟು ತಿಂಗಳಾಯಿತು ಯಾರಿಗೆ ಕೊಟ್ಟಿದ್ದಾರೆ ಮನೆ?. ಇದನ್ನು ನೋಡಿಕೊಳ್ಳಿ. ವಂದೇ ಮಾತರಂಗೆ ಗೌರವ ಕೊಡುವವರು ಕೊಡ್ತಾರೆ. ವಂದೇ ಮಾತರಂಗೆ ವಿರೋಧ ಮಾಡುವವರು ಬೀದಿಯಲ್ಲಿ ಮಲಗಿದ್ದಾರಲ್ಲ ಎಂದು ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.

ಮತ ಹಾಕಿದವರಿಗೆ ಗ್ಯಾರಂಟಿ ಇಲ್ಲ: ರಾಜ್ಯ ಸರ್ಕಾರದ ಸಾವಿರ ದಿನಗಳ ಸಂಭ್ರಮಾಚರಣೆ ವಿಚಾರ‌‌ವಾಗಿ ಮಾತನಾಡಿ, ಇವತ್ತಿನ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸೋದಕ್ಕೆ ಪ್ರಾರಂಭ ಮಾಡಿ ಸಾವಿರ ದಿನಗಳನ್ನ ಪೂರೈಸಿದೆ. ಕಳೆದ ಎರಡೂವರೆ ವರ್ಷದಲ್ಲಿ ಪೌತಿಖಾತೆ, ಪೋಡಿ ಎಷ್ಟರ ಮಟ್ಟಿಗೆ ಆಗಿದೆ ಅನ್ನೋದು ಗೊತ್ತಿದೆ. ಯಾವ ಹಕ್ಕು ಪತ್ರ ಯಾರಿಗೆ ಕೊಟ್ಟಿದ್ದಾರೆ. ಗುರುತಿಸಿರೋದು ಯಾರು?. ಜನರಿಗೆ ಭೂಮಿ ಕೊಡುವುದು ಆರನೇ ಗ್ಯಾರಂಟಿ. ಸರ್ಕಾರದಲ್ಲಿರುವ ಮಂತ್ರಿಗಳಿಗೆ ಭೂ ಗ್ಯಾರಂಟಿ. ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿರೋದಕ್ಕೆ ಗ್ಯಾರಂಟಿ ಇಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಶಾಸಕರು ವಿದೇಶಿ ಪ್ರವಾಸ, ರೆಸಾರ್ಟ್​ಗೆ ಶಿಫ್ಟ್ ಆಗುವ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಎಲ್ಲಾದರೂ ಹೋಗಲಿ, ನನಗೆ ಬೇಕಾಗಿರೋದು ನಾಡಿನ ಹಲವಾರು ಸಮಸ್ಯೆಗಳಿಗೆ ಪರಿಹಾರ. ಅದರ ಕಡೆ ಗಮನ ಕೊಡಲಿ ಎಂದು ತಾಕೀತು ಮಾಡಿದರು.

ಅಭಿವೃದ್ಧಿ ಪಥದಲ್ಲಿ ಸರ್ಕಾರ ಹೋಗ್ತಿದೆ. ವಿಪಕ್ಷಗಳಿಗೆ ಹೊಟ್ಟೆಕಿಚ್ಚಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿ, ನಾಡಿನ ಜನರ ಮೇಲೆ ಸಾಲ ಹೊರಿಸಿರೋದೆ ಇವರ ದೊಡ್ಡ ಅಭಿವೃದ್ಧಿ. 33 ಸಚಿವರು ಯಾರು ಸಾಲಗಾರರಾಗಿಲ್ಲ. ಸಂಪತ್ ಭರಿತವಾಗಿದ್ದಾರೆ. ಇದೇ ಇವರ ಸಾಧನೆ ಅನ್ನೋದು ನನ್ನ ಅಭಿಪ್ರಾಯ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ