LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಕೆಯುಡಬ್ಲೂಜೆ ನಿಯೋಗ ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೈಜ ಪತ್ರಕರ್ತರ ಮೇಲೆ ವಿನಾ ಕಾರಣ ತೇಜೋವಧೆ ಮಾಡುವ ನಕಲಿ ಮತ್ತು ಆರ್‌ಟಿಐ ಪತ್ರಕರ್ತರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಪೊಲೀಸ್ ಮಹಾ ನಿರ್ದೇಶಕರನ್ನು ಒತ್ತಾಯಿಸಿದೆ.

 

ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗ ಈ ಬಗ್ಗೆ ಮನವಿ ಸಲ್ಲಿಸಿತು.

 

ಪತ್ರಿಕೆಗಳನ್ನೆ ತರದವರು, ಸುದ್ದಿಯನ್ನು ಬರೆಯಲು ಬಾರದವರು ಮತ್ತು ಸುದ್ದಿ ಮನೆಗೆ ಯಾವ ರೀತಿಯ ಸಂಬಂಧವೂ ಇಲ್ಲದವರು ತಾವೇ ಪತ್ರಕರ್ತರು ಎಂದು ಬಿಂಬಿಸಿಕೊಳ್ಳುವ ವಿಸಿಟಿಂಗ್ ಕಾರ್ಡ್ ಪತ್ರಕರ್ತರು, ನೆಪ ಮಾತ್ರಕ್ಕೆ ಸಂಘಟನೆ ಮಾಡಿಕೊಂಡು, ಬ್ಲಾಕ್ ಮೇಲ್ ಮಾಡುವ ಆರ್‌ಟಿಐ ಪತ್ರಕರ್ತರ ವಸೂಲಿ ದಂಧೆಯೂ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಈ ಬೆಳವಣಿಗೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ವಿನಂತಿಸಿದರು.

 

ಪತ್ರಿಕಾ ಸಂಘಟನೆಯ ಹೆಸರು ಹೇಳಿಕೊಳ್ಳುವ ಕೆಲ ನಕಲಿ ಪತ್ರಕರ್ತರು ಆಗಿಂದಾಗ್ಗೆ ಪೊಲೀಸ್ ಠಾಣೆಗೆ ದೂರು ಕೊಡುವುದು, ಆರ್‌ಟಿಐ ಹಾಕುವುದನ್ನೆ ತಮ್ಮ ಕಾಯಕವಾಗಿಸಿಕೊಂಡಿದ್ದಾರೆ. ಇಂಥವರನ್ನು ಪೊಲೀಸ್ ಠಾಣೆಯಲ್ಲೂ ಬ್ಲಾಕ್ ಲಿಸ್ಟ್‌ನಲ್ಲಿ ಸೇರಿಸಿ ಕ್ರಮ ಜರುಗಿಸಬೇಕು ಎಂದು ಪೊಲೀಸ್ ಮಾಹಾನಿರ್ದೇಶಕರಿಗೆ ಮನದಟ್ಟು ಮಾಡಿಕೊಡಲಾಯಿತು.

 

ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸುವುದಾಗಿ ಪೊಲೀಸ್ ಮಾಹಾನಿರ್ದೇಶಕರು, ಕೆಯುಡಬ್ಲೂೃಜೆ ನಿಯೋಗಕ್ಕೆ ಭರವಸೆ ನೀಡಿದರು.

 

ನಿಯೋಗದಲ್ಲಿ ಕೆಯುಡಬ್ಲೂಜೆ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿಗಳಾದ ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇ ಹೊಳ್ಳ ಅವರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು