Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ವಿಶೇಷ ಸಮಗ್ರ ಪರಿಶೀಲನೆ ಕಾರ್ಯಕ್ರಮಕ್ಕೆ ಚಾಲನೆ; ಪೌರಾಯುಕ್ತ ಎ. ವಾಸೀಂ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು: 
ನಗರದಲ್ಲಿ ರಾಷ್ಟ್ರೀಯ ಕಾರ್ಯಕ್ರಮವಾದ ಮತದಾರರ ವಿಶೇಷ ಸಮಗ್ರ ಪರಿಶೀಲನೆಗೆ ಚಾಲನೆ ನೀಡಲಾಗಿದ್ದು
, 18 ವರ್ಷ ಮೇಲ್ಪಟ್ಟ ಎಲ್ಲಾ ಅರ್ಹ ಮತದಾರರು ಕಡ್ಡಾಯವಾಗಿ 2026ರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರಾದ ಎ. ವಾಸೀಂ ಮನವಿ ಮಾಡಿದ್ದಾರೆ.

ನಗರದ ಮತಗಟ್ಟೆ ಸಂಖ್ಯೆ 170 ರಲ್ಲಿ ನಿವೃತ್ತ ಪ್ರಾಂಶುಪಾಲರು ಹಾಗೂ ಹಿರಿಯೂರು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಜಿ. ರಂಗಸ್ವಾಮಿ ಅವರ ಹೆಸರು ನೋಂದಾಯಿಸುವ ಮೂಲಕ ಈ ಮಹತ್ವದ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಬಿಎಲ್‌ಒಗಳಿಗೆ ಮಾಹಿತಿ ನೀಡಿ: ಮನೆ ಮನೆಗೆ ಭೇಟಿ ನೀಡುವ ಬಿಎಲ್‌ಒ (BLO) ಗಳಿಗೆ ಸಾರ್ವಜನಿಕರು ತಪ್ಪದೇ ನಿಗದಿತ ಮಾಹಿತಿ ನೀಡಬೇಕು.

ಅರ್ಜಿ ನಮೂನೆಗಳ ಸಲ್ಲಿಕೆ: ಬಿಎಲ್‌ಒಗಳು ನೀಡುವ ಎರಡು ನಿಗದಿತ ಅರ್ಜಿ ನಮೂನೆಗಳನ್ನು ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ಇದರಲ್ಲಿ ಒಂದು ಅರ್ಜಿಯನ್ನು ತಮ್ಮ ಬಳಿ ಇಟ್ಟುಕೊಂಡು, ಮತ್ತೊಂದನ್ನು ಬಿಎಲ್‌ಒಗೆ ಹಸ್ತಾಂತರಿಸಬೇಕು.

ಯಾರೂ ಹೊರಗುಳಿಯಬಾರದು: ಯಾವುದೇ ಅರ್ಹ ಮತದಾರರು ಅಥವಾ ಕುಟುಂಬದ ಸದಸ್ಯರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಈ ರಾಷ್ಟ್ರೀಯ ಕಾರ್ಯಕ್ಕೆ ನೆರವಾಗಬೇಕು ಎಂದು ಪೌರಾಯುಕ್ತರು ಕೋರಿದ್ದಾರೆ.

"ಅರ್ಜಿ ನಮೂನೆಗಳಲ್ಲಿ ಅತ್ಯಂತ ಸರಳ ಮಾಹಿತಿಯನ್ನು ಕೇಳಲಾಗಿರುತ್ತದೆ. ಈಗಾಗಲೇ ಮತದಾರರ ಬಳಿ ಇರುವ ವೋಟರ್ ಐಡಿ ಸಂಖ್ಯೆ, ಆಧಾರ್ ಸಂಖ್ಯೆ, ಪ್ರಸ್ತುತ ವಾಸವಿರುವ ಸರಿಯಾದ ವಿಳಾಸ, ಪೋಷಕರ ಹೆಸರು, ಮತಗಟ್ಟೆ ಸಂಖ್ಯೆ ಹಾಗೂ ಭಾಗದ ಸಂಖ್ಯೆಯನ್ನು ನೀಡುವ ಮೂಲಕ ಮತದಾರ ಬಾಂಧವರು ಈ ರಾಷ್ಟ್ರೀಯ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕು." ಎಂ.ಜಿ ರಂಗಸ್ವಾಮಿ, ನಿವೃತ್ತ ಪ್ರಾಂಶುಪಾಲರು ಹಾಗೂ ಸಾಹಿತಿಗಳು. 

ಈ ಸಂದರ್ಭದಲ್ಲಿ ನಗರಸಭೆ ಸಿಬ್ಬಂದಿ ಹಾಗೂ ಕಂದಾಯ ನಿರೀಕ್ಷಕರಾದ ಜುನೇದ್ ಸಿರಾಜ್, ಮೊಹಮ್ಮದ್ ಹಸ್ರತುಲ್ಲ, ತಾಲ್ಲೂಕು ಕಚೇರಿ ಚುನಾವಣಾ ಶಾಖೆಯ ಸಿಬ್ಬಂದಿ ಮಧು ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಿಧಿ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್‌ಅಶೋಕ್ ತೀವ್ರ ವಾಗ್ದಾಳಿ!ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!ಬಿಡದಿ ಬೃಹತ್ ಉಪನಗರ ಯೋಜನೆಗೆ ಹೈಕೋರ್ಟ್ ಬ್ರೇಕ್? ಸರ್ಕಾರದ ವಿರುದ್ಧ ಸಲ್ಲಿಕೆಯಾಯ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ!ಶತಮಾನದ ಸಾಮಾಜಿಕ ಅಂತರಕ್ಕೆ ಬ್ರೇಕ್: ಸೌಹಾರ್ದಯುತವಾಗಿ ದೇವಸ್ಥಾನ ಪ್ರವೇಶಿಸಿದ ದಲಿತರು!ಹದಿಹರೆಯ ವಯಸ್ಸಿನ ಆವೇಗಕ್ಕೆ ವಿವೇಕದ ಅಂಕುಶ ಅಗತ್ಯಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ