Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಕತ್ವ ಬದಲಾವಣೆ ಇಲ್ಲ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ-ಡಿಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು
ಡಿಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು ಅವರ ವಿರುದ್ಧ ಈಗ ನೋಟಿಸ್ ಜಾರಿ ಆಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಹೇಳಿದ್ದಾರೆ.

ನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ರಾಜ್ಯದಲ್ಲಿ ಯಾವ ನಾಯಕತ್ವ ಬದಲಾವಣೆಯೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಬಲಪಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ನಾಯಕತ್ವ ಬದಲಾವಣೆ ಇಲ್ಲ ಮತ್ತು ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಸಹ ನಡೆದಿಲ್ಲ. ಪಕ್ಷವನ್ನು ಸಂಘಟಿಸುವ ಬಗ್ಗೆ ಮಾತ್ರ ಚರ್ಚೆ ನಡೆದಿದೆ. ಇದು ಸಂಘಟನೆಯ ವರ್ಷವಾಗಿದೆ ಎಂದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟವಾಗಿ ಸಂದೇಶ ನೀಡಿದ್ದಾರೆ ಎಂದರು.


ಈ ಮೂಲಕ ಎರಡುವರೆ ವರ್ಷದ ಬಳಿಕ ಸಿಎಂ ಬದಲಾವಣೆ ಗೊಂದಲಗಳಿಗೆ ಸ್ವತಃ ಡಿಕೆ ಶಿವಕುಮಾರ್ ತೆರೆ ಎಳೆದರು. ಇದೇ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವವರೆಗೆ ಖಡಕ್ ಎಚ್ಚರಿಕೆ ನೀಡಿದ ಡಿಕೆಶಿ, ಇನ್ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗಬಾರದು. ಶಾಸಕ ಇಕ್ಬಾಲ್‌ ಹುಸೇನ್​ ಗೆ ನೋಟಿಸ್ ಕೊಡುತ್ತೇನೆ ಎಂದರು.

ಶಾಸಕರಾದ ಬಿ.ಆರ್.ಪಾಟೀಲ್, ಬಾಲಕೃಷ್ಣ ಯಾರೇ ಆಗಿರಲಿ ಯಾರೂ ಸಹ ಮಾಧ್ಯಮಗಳ ಮುಂದೆ ಹೋಗಬಾರದು ಡಿಸಿಎಂ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ