Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಯಕತ್ವ ಬದಲಾವಣೆ ಇಲ್ಲ-ಸುರ್ಜೇವಾಲಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಯಕತ್ವ ಬದಲಾವಣೆ ಕುರಿತು ಶಾಸಕರಿಂದ ಯಾವುದೇ ಅಭಿಪ್ರಾಯ ಸಂಗ್ರಹಿಸಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಶಾಸಕರ ನೋವುಗಳೇನು, ಅನುದಾನ ಸೇರಿದಂತೆ ಅವರುಗಳ ಕ್ಷೇತ್ರಗಳಲ್ಲಿ ಆಗಿರುವ ಕೆಲಸಗಳ ಕಾರ್ಯಕ್ಷಮತೆ ಪರಿಶೀಲಿಸಲು ಭೇಟಿಯಾಗುತ್ತಿದ್ದೇನೆ ಎಂದು ಸುರ್ಜೇವಾಲಾ ತಿಳಿಸಿದರು.


ಕೆಲವರು ನಾಯಕತ್ವ ಬದಲಾವಣೆ ಇಲ್ಲ. ಪಕ್ಷದ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಮತ್ತು ಲೋಕಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸುವುದಾಗಿ ಸುರ್ಜೇವಾಲಾ ಹೇಳಿದರು.

ಮುಂದಿನ ಏಳೆಂಟು ದಿನಗಳಲ್ಲಿ ಎಲ್ಲ ಶಾಸಕರನ್ನು ಭೇಟಿ ಮಾಡುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಅವರು ತಮ್ಮ ಕ್ಷೇತ್ರಗಳಲ್ಲಿ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ. ಅವರ ಕಾರ್ಯಕ್ಷಮತೆ ಪರಿಶೀಲಿಸುವುದು ಮುಖ್ಯ ಎಂದು ಸುರ್ಜೇವಾಲಾ ಹೇಳಿದರು.

ಶಾಸಕರು ಜನರಿಗೆ ಹೊಣೆಗಾರಿಕೆ ಮತ್ತು ಕಾಂಗ್ರೆಸ್ ಪಕ್ಷದ ಚುನಾವಣಾ ಭರವಸೆಗಳನ್ನು ಕ್ಷೇತ್ರದಲ್ಲಿ ಈಡೇರಿಸಲು ಬದ್ಧನಾಗಿರಬೇಕು. ಆದ್ದರಿಂದ, ಶಾಸಕರಿಗೆ ರಿಪೋರ್ಟ್ ಕಾರ್ಡ್‌ಗಳನ್ನು ನೀಡುವಂತೆ ಕೇಳುತ್ತಿದ್ದೇನೆ. ಐದು ಖಾತರಿಗಳ ಅನುಷ್ಠಾನದ ಸ್ಥಿತಿಯನ್ನು ನೋಡುವುದು ಅಗತ್ಯವಾಗಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿ, ವಿಧಾನಸಭೆ ಕಾಂಗ್ರೆಸ್ ಸಮಿತಿಯ ಸ್ಥಿತಿಗತಿ ಮತ್ತು ಅವರು ಕಾಲಕಾಲಕ್ಕೆ ನಡೆಸಿದ ಪಕ್ಷದ ಸಭೆಗಳ ಸಂಖ್ಯೆಯ ಬಗ್ಗೆಯೂ ಶಾಸಕರನ್ನು ಕೇಳಲಾಗುವುದು ಎಂದು ಅವರು ತಿಳಿಸಿದರು.

ಶಾಸಕರನ್ನು ವೈಯಕ್ತಿವಾಗಿ ಕೇಳುತ್ತಿದ್ದೇವೆ, ಅವರಿಗೆ ಏನಾದರೂ ತೊಂದರೆ ಅಥವಾ ಆಕಾಂಕ್ಷೆ ಇದ್ದರೆ ಹೇಳಬಹುದು. ಪ್ರತಿಯೊಬ್ಬ ಶಾಸಕರಿಗೂ ಕೆಲವು ಆಕಾಂಕ್ಷೆಗಳು ಅಥವಾ ಕ್ಷೇತ್ರದಲ್ಲಿ ಇನ್ನೂ ಕೆಲವು ಕೆಲಸಗಳು ಇರುತ್ತವೆ. ಅವರ ಆಕಾಂಕ್ಷೆಗಳನ್ನು ಸರ್ಕಾರಕ್ಕೆ ತಿಳಿಸಲಾಗುವುದು ಮತ್ತು ಆದ್ಯತೆಯ ಆಧಾರದ ಮೇಲೆ ಉತ್ತಮವಾಗಿ ಮಾಡಬಹುದಾದದ್ದನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.


ಸಚಿವರು ತಮ್ಮ ಕ್ಷೇತ್ರ ಸೇರಿದಂತೆ ಆಯಾಯ ಜಿಲ್ಲೆಗಳಲ್ಲಿ ಏನು ಮಾಡಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಅವರನ್ನು ಭೇಟಿ ಮಾಡಲಾಗುವುದು. ಎನ್‌ಎಸ್‌ಯುಐ, ಮಹಿಳಾ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ, ಅಲ್ಪಸಂಖ್ಯಾತ, ಕಿಸಾನ್ ಇಲಾಖೆಗಳು ಮತ್ತು ಯುವ ಕಾಂಗ್ರೆಸ್‌ನಂತಹ ಸಂಘಟನೆಗಳ ಪಾತ್ರವನ್ನು ಪರಿಶೀಲಿಸಲಾಗುವುದು ಎಂದು ಸುರ್ಜೇವಾಲಾ ತಿಳಿಸಿದರು.

ಕರ್ನಾಟಕ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎನ್ನುವುದು ಬಿಜೆಪಿ ಹರಡಿದ ಸುಳ್ಳು. ಬಿಜೆಪಿಯವರು ಗ್ಯಾರಂಟಿಗಳನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಆರ್. ಅಶೋಕ ಅವರಿಂದ ವಿಜಯೇಂದ್ರವರೆಗಿನ ಬಿಜೆಪಿ ನಾಯಕರು ಐದು ಖಾತರಿಗಳನ್ನು ನಿಲ್ಲಿಸಬೇಕೆಂದು ಬಯಸುತ್ತಿದ್ದಾರೆ. ಕನ್ನಡಿಗರ ಖಾತೆಗಳಿಗೆ ಪಾರದರ್ಶಕ ರೀತಿಯಲ್ಲಿ 58,000 ಕೋಟಿ ರೂ. ಹೋಗಬಾರದು ಎಂದು ಅವರು ಬಯಸುತ್ತಾರೆ ಎಂದು ಸುರ್ಜೇವಾಲಾ ಅವರು ಆರೋಪಿಸಿದರು.

ಕರ್ನಾಟಕ ಸರ್ಕಾರದ ಬಳಿ ಸಾಕಷ್ಟು ಹಣವಿದೆ. ರಾಜ್ಯದ ಜರಿಗೆ ನೀಡಿರುವ ಪ್ರಮುಖ ಐದು ಗ್ಯಾರಂಟಿಗಳನ್ನು ಎಂದಿಗೂ ನಿಲ್ಲಿಸಲಾಗುವುದಿಲ್ಲ ಎಂದು ತಿಳಿಸಿದರು.

ಸರ್ಕಾರದ ವಿರುದ್ಧ ಶಾಸಕರು ಬಹಿರಂಗ ಹೇಳಿಕೆ ನೀಡುವ ಬಗ್ಗೆ ಮಾತನಾಡಿದ ಅವರು, ಶಾಸಕರಿಗೆ ಸಲಹೆ ನೀಡಿದ್ದು ಪಕ್ಷದಲ್ಲಿ ಏನೇ ಆದರೂ ಅದು ಪಕ್ಷದೊಳಗೆ ಉಳಿಯಬೇಕು. ಏನಾದರೂ ಸಮಸ್ಯೆ ಇದ್ದರೆ, ಆ ಸಮಸ್ಯೆಯನ್ನು ಬಹಿರಂಗವಾಗಿ ಹೇಳುವ ಬದಲು ಸಂಬಂಧಪಟ್ಟವರೊಂದಿಗೆ ಚರ್ಚಿಸಲು ಸೂಚಿಸಿದ್ದೇನೆ. ಕೆಪಿಸಿಸಿಯಲ್ಲಿ ಶಿವಕುಮಾರ್ ಇದ್ದಾರೆ ಮತ್ತು ಸರ್ಕಾರದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದ್ದರು.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ