Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಅರಿವು ಮಹಿಳೆಯರಿಗೆ ಅತ್ಯವಶ್ಯ... ರಾಧಾ ಮುರುಳೀಧರ್

Advertisement
Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಾನೂನಿನ ಅರಿವು ಮಹಿಳೆಯರಿಗೆ ಇದ್ದರೆ ತಮಗಾದ ಅನ್ಯಾಯವನ್ನು ಎದುರಿಸಿ
, ನ್ಯಾಯ ಪಡೆಯುವ ಅವಕಾಶ ಮಹಿಳೆಯರಿಗೆ ಇರುತ್ತದೆ ಎಂದು ವಕೀಲರಾದ ರಾಧಾ ಮುರುಳೀಧರ್ ಹೇಳಿದರು.

 ನಗರದ  ಶ್ರೀ ಕಾಶಿ ವಿಶ್ವನಾಥ ದೇವಾಲಯದ  ಸಭಾ ಭವನದಲ್ಲಿ  ಶ್ರೀ ಕಾಶಿ ವಿಶಾಲಾಕ್ಷಿ ವಿಪ್ರ ವನಿತಾ ವೇದಿಕೆಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು ಕಾನೂನು ವೃತ್ತಿಯಲ್ಲಿ  ಮಹಿಳೆಯರು ಅಷ್ಟೊಂದು ತೊಡಿಸಿಕೊಳ್ಳದಿದ್ದರೂ ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಕಾನೂನು ತಿಳಿದ ಮಹಿಳೆಯರ ಸಂಖ್ಯೆ ಹೆಚ್ಚಾಗಿರುವುದು ಸಂತಸದ ಸಂಗತಿ.  ಏಕೆಂದರೆ ಕಾನೂನು ತಿಳಿದುಕೊಂಡಾಗ ಸಮಾಜದಲ್ಲಿ ಪ್ರಬಲವಾಗಿ ಹೋರಾಟ ಮಾಡಲು ಸಾಧ್ಯವಾಗುತ್ತದೆ.

  ಆ ನಿಟ್ಟಿನಲ್ಲಿ ನಾವು ಮಹಿಳೆಯರಿ ಗಾಗುತ್ತಿರುವ   ಅನ್ಯಾಯದ ವಿರುದ್ಧ ಹೋರಾಟಕ್ಕೆ  ಸಹಕಾರ ನೀಡಬೇಕಾಗಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಬೇಕಿದೆ ಎಂದರು.

   ಮಹಿಳಾ ಪೊಲೀಸ್  ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮೀ ಮಾತನಾಡಿ, ಸಮಾಜದಲ್ಲಿ ಕೌಟುಂಬಿಕ ಕಲಹದಲ್ಲಿ ಹೆಚ್ಚು ದೌರ್ಜನ್ಯಕ್ಕೊಳಗಾಗುತ್ತಿರುವುದು ಮಹಿಳೆಯರೇ ಹೆಚ್ಚಾಗುತ್ತಿರುವುದು ವಿಷಾದಕರ. ಆದ್ದರಿಂದ ನಾವು ಅವರಿಗೆ ಉತ್ತಮ ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲಾ ರಂಗದಲ್ಲೂ  ಮುನ್ನೆಲೆಗೆ ಬರುವಂತ ಯೋಜನೆ ರೂಪಿಸಬೇಕಾಗಿದೆ.

  ನಮ್ಮ ಭಾರತ ಸಂವಿಧಾನದಲ್ಲಿ ಪ್ರತಿಯೊಬ್ಬ ಮಹಿಳೆ ಪುರುಷರಿಗೂ ಸಮಾನವಾದ ಕಾನೂನಿದ್ದರೂ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವುದು ಮಹಿಳೆಯರೇ ಎಂದು ಹೇಳಬಹುದು. ಆ ನಿಟ್ಟಿನಲ್ಲಿ  ನಾವೆಲ್ಲರೂ ಸಮಾಜಮುಖಿ ಕೆಲಸದಲ್ಲಿ ಅವರಿಗೆ ಅವಕಾಶ ನೀಡಿ ಬೆಳೆಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ವೇದಿಕೆಯ  ಅದ್ಯಕ್ಷೆ  ರೂಪ ರಘುನಾಥ , ಮಹಿಳಾ ಸಮಾಜದ ಅದ್ಯಕ್ಷೆ  ವತ್ಸಲ ಜಗನಾಥ್, ನಗರಸಭಾ ಸದಸ್ಯೆ ಇಂದ್ರಾಣಿ,    ಶ್ರೀ ಕಾಶಿ ವಿಶಾಲಾಕ್ಷಿ ವಿಪ್ರ ವನಿತಾ ವೇದಿಕೆಯ ಉಪಾಧ್ಯಕ್ಷೆ ಲಕ್ಷ್ಮಿ ವೇಣುಗೋಪಾಲ್ಕಾರ್ಯದರ್ಶಿ  ಗಾಯತ್ರಿ ಪ್ರಸಾದ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಫೂರ್ತಿ ಕನ್ನಡ ಕಲಾ ಟ್ರಸ್ಟ್ ವತಿಯಿಂದ 'ಕಣ್ಣು ತರೆಸಿದ ಹಣ್ಣು'ಕಾರ್ಯಕ್ರಮಹುಟ್ಟು ಹಬ್ಬಗಳನ್ನು ಸಮಾಜ ಮುಖಿ ಕಾರ್ಯಗಳೊಂದಿಗೆ ಆಚರಿಸಿ- ಮುನಿಕೃಷ್ಣಪ್ಪಸರ್ಕಾರಿ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮಮುಂಗಾರು ಹಾನಿ ತಡೆಗೆ ಜಿಲ್ಲಾಡಳಿತ ಹೈ ಅಲರ್ಟ್; ಸಾರ್ವಜನಿಕರ ನೆರವಿಗಾಗಿ 5 ತುರ್ತು ಸ್ಪಂದನಾ ತಂಡಗಳ ರಚನೆಐಪಿಎಲ್ ಫೈನಲ್ ಸ್ಥಳಾಂತರ ವಿವಾದ: ಬೆಂಗಳೂರಿನ ಯುವಕರಿಗೆ ಅನ್ಯಾಯ ಎಂದ ಡಿ.ಕೆ ಶಿವಕುಮಾರ್ಭಾರಿ ಸಂಚಲನ ಸೃಷ್ಟಿಸಿದ ಜಮೀರ್ ಅವರ ಆಡಿಯೋಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ-ಜೈರಾಮ್ ರಮೇಶ್ನೂತನ ಸಿಎಂ ಶಿವಕುಮಾರ್-ನಿರ್ಗಮಿತ ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಕೇಸರಿ ಶಾಲು ಬೇಕೋ, ರಾಷ್ಟ್ರಧ್ವಜ ಬೇಕೋ ಆಮೇಲೆ ಚರ್ಚಿಸೋಣಹಿರಿಯೂರು ನಗರಸಭೆಯಲ್ಲಿ 'ಪಿಎಂ ಸ್ವನಿಧಿ' ಲೋಕ ಕಲ್ಯಾಣ ಮೇಳ: ಬೀದಿ ಬದಿ ವ್ಯಾಪಾರಿಗಳಿಗೆ ಸಾಲದ ಅರ್ಜಿ ವಿತರಣೆ