Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಡಿಮೆ ಬಡ್ಡಿ ಮತ್ತು ಶೂನ್ಯ ಬಡ್ಡಿಯ ಸಾಲ ಸೌಲಭ್ಯ ರೈತರು ಪಡೆಯಲಿ

Advertisement
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಸಹಕಾರ ಕ್ಷೇತ್ರದ ಬಲವರ್ಧನೆಗೆ ಕೇಂದ್ರ ಸರ್ಕಾರದ ಸಹಕಾರ ಇಲಾಖೆ ಮುಂದಾಗಿದ್ದು, ಹಲವು ಸೇವೆಗಳನ್ನು ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಜನರಿಗೆ ತಲುಪಿಸಲು ಯೋಜನೆಗಳನ್ನು ರೂಪಿಸಿದೆ ಎಂದು ಡಿಸಿಸಿ ಬ್ಯಾಂಕ್‌ಪ್ರತಿನಿಧಿ ಟಿ.ವಿನಯ್‌ಯಾದವ್‌ತಿಳಿಸಿದರು.

ತಾಲೂಕಿನ ದೊಡ್ಡಕಿಟ್ಟದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಕೇಂದ್ರದಲ್ಲಿ ಸಹಕಾರ ಇಲಾಖೆ ಪ್ರಾರಂಭವಾದ ನಂತರ ಸಾಕಷ್ಟು ಅನುದಾನ ಹಾಗೂ ಹೊಸ ಯೋಜನೆಗಳು ಪ್ರಾರಂಭವಾಗಿವೆ ಎಂದರು.


ಈಗಾಗಲೇ ಸಹಕಾರ ಸಂಘಗಳ ಗಣಕೀಕರಣ ಮಾಡಲಾಗಿದೆ. ಇಲ್ಲಿಂದಲೇ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಣೆ ಮಾಡುವುದು, ಬೀಜೋತ್ಪಾಧನಾ ಕೇಂದ್ರ ತೆರೆದು, ಈ ಭಾಗದ ತಳಿಗಳನ್ನು ಸ್ಥಾಪನೆ ಮಾಡಲು ಅವಕಾಶಗಳಿವೆ ಎಂದರು.

ಬ್ಯಾಂಕ್ ಮಿತ್ರ ಯೋಜನೆ ಅಡಿ ಬಯೊಮೆಟ್ರಿಕ್ ಬಳಸಿ ಬ್ಯಾಂಕ್ ಕೆಲಸವನ್ನು ಸಹಕಾರ ಸಂಘಗಳ‌ಮೂಲಕ ಜನರಿಗೆ ತಲುಪಿಸುವ ಮೂಲಕ ಆರ್ಥಿಕವಾಗಿ ಮುನ್ನಡೆಯಬಹುದಾಗಿದೆ. ಆಹಾರ ಭದ್ರತಾ ಯೋಜನೆಯಡಿ ಬೃಹತ್ ಗೋದಾಮು ಕಟ್ಟಿಸಿ, ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ರೈತರ ಉತ್ಪನ್ನಗಳನ್ನು ಶೇಖರಣೆ ಮಾಡುವ ಮೂಲಕವೂ ಆದಾಯ ತರಬಹುದು. ಸರ್ಕಾರದ ಸೇವೆಗಳನ್ನು ಜನರಿಗೆ ನೇರವಾಗಿ ತಲುಪಿಸುವ ಸಿಎಸ್‌ಸಿ ಕೇಂದ್ರ, ಜನೌಷಧ ಕೇಂದ್ರ ತೆರೆಯಲು ಅವಕಾಶವಿದೆ ಎಂದು ವಿವರಿಸಿದರು.

ಸೊಸೈಟಿ ಅಡಿ FPO ಮಾಡಿಕೊಂಡರೆ ಕೇಂದ್ರದಿಂದ ಅನುದಾನ‌ಸಿಗಲಿದೆ. ಗ್ಯಾಸ್ ರೀಫಿಲ್ಲಿಂಗ್ ಕೇಂದ್ರ ಹಾಗು ಪೆಟ್ರೊಲ್ ಬಂಕ್ ತೆರೆಯಲು ಅವಕಾಶವಿದೆ. ಸಹಕಾರ ಸಂಘಗಳ ಆಡಳಿತ ಮಂಡಳಿ ಆಲೋಚನೆ ಮಾಡಿ ಇಂತಹ ಯೋಜನೆಗಳನ್ನು ಬಳಕೆ ಮಾಡಿಕೊಂಡು ಉತ್ತಮವಾಗಿ ಬೆಳೆಯಬಹುದು. ಜೊತೆ ಜೊತೆಗೆ ಜನರಿಗೆ ಸೇವೆಗಳನ್ನು ಒದಗಿಸಬಹುದು ಎಂದರು.ಡಿಸಿಸಿ ಬ್ಯಾಂಕ್‌ಮಾಡದಕೆರೆ ಶಾಖೆ ವ್ಯವಸ್ಥಾಪಕ ನರಸಿಂಹರಾಜು ಮಾತನಾಡಿ, ಸಹಕಾರಿ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳು ದೊರೆಯಲಿದ್ದು, ರೈತರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಲಹೆ ನೀಡಿದರು.

ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್‌.ರುದ್ರಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ಸಹಕಾರ ಸಂಘಗಳು ಜನರಿಗೆ ನೇರವಾಗಿ ಸಂಪರ್ಕ ಹೊಂದಿವೆ. ಈ ಮೂಲಕ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ರೈತರು ಹೆಚ್ಚು ಸಂಪರ್ಕದಲ್ಲಿದ್ದು, ಸಾಲ ಮರುಪಾವತಿ ಮಾಡುವ ಮೂಲಕ ಸದುಪಯೋಗ ಮಾಡಿಕೊಳ್ಳಬೇಕು. ಸರ್ಕಾರ ರೈತರಿಗೆ ನೀಡುವ ಸಾಲದ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.


ಡಿ.ಕೆ.ಹಳ್ಳಿ ಗ್ರಾಪಂ ಅಧ್ಯಕ್ಷ ತಿಪ್ಪಣ್ಣ, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಹರೀಶ್ ಕೆಂಕೆರೆ, ಗೌಡಪ್ಪ, ನಾಕೀಕೆರೆ ತಿಪ್ಪೇಸ್ವಾಮಿ, ಸಿಇಓ ರಂಗಸ್ವಾಮಿ, ಸಿಬ್ಬಂದಿ ಮಧು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ