Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಥಳೀಯರಿಗೇ ಸಿಗಲಿ ಟಿಕೆಟ್; ಹಿರಿಯೂರಿನಲ್ಲಿ 'ಸ್ವಾಭಿಮಾನ ವೇದಿಕೆ'ಯ ಜನಾಭಿಪ್ರಾಯ ಸಭೆ ಆಕ್ರೋಶ​

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
"ಸ್ವಾತಂತ್ರ್ಯ ಬಂದಾಗಿನಿಂದ ನಡೆದ ಬಹುತೇಕ ಚುನಾವಣೆಗಳಲ್ಲಿ ಹೊರಗಡೆಯಿಂದ ಬಂದವರೇ ಅಧಿಕಾರ ನಡೆಸಿ ತಾಲೂಕನ್ನು ಬರಡು ಮಾಡಿದ್ದಾರೆ. ಇನ್ನಾದರೂ ಕ್ಷೇತ್ರದ ಜನತೆ ಎಚ್ಚೆತ್ತುಕೊಂಡು ಮುಂಬರುವ ಉಪ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಗೇ ಟಿಕೆಟ್ ನೀಡಬೇಕು" ಎಂದು ಹಿರಿಯೂರು ತಾಲೂಕು ಸ್ಥಳೀಯರ ಸ್ವಾಭಿಮಾನ ವೇದಿಕೆಯ ಮುಖಂಡ ಬೇತುರು ಪಾಳ್ಯ ರಾಜು ಆಗ್ರಹಿಸಿದರು.

​ನಗರದಲ್ಲಿ ಆಯೋಜಿಸಲಾಗಿದ್ದ 'ಸ್ಥಳೀಯರ ಸ್ವಾಭಿಮಾನ ವೇದಿಕೆ: ಜನಾಭಿಪ್ರಾಯ ಉಪ ಚುನಾವಣೆ - 2026' ಸಭೆಯ ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು, ಹೊರಗಿನವರ ರಾಜಕಾರಣದಿಂದ ತಾಲೂಕಿಗೆ ಆಗಿರುವ ಅನ್ಯಾಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

​ವ್ಯಾಪಾರಿ ಮನೋಭಾವದ ರಾಜಕಾರಣ: ನಿವೃತ್ತ ನಿರ್ದೇಶಕ ರುದ್ರಪ್ಪ ಆತಂಕ
​ಸಭೆಯಲ್ಲಿ ಮಾತನಾಡಿದ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ರುದ್ರಪ್ಪ ಅವರು
, ಹೊರಗಿನಿಂದ ಬರುವ ರಾಜಕಾರಣಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

​"ಹೊರಗಿನವರು ಕೇವಲ ವ್ಯಾಪಾರಿ ಮನೋಭಾವದಿಂದ ಇಲ್ಲಿಗೆ ಬರುತ್ತಾರೆ. ಚುನಾವಣೆಯ ಸಂದರ್ಭದಲ್ಲಿ ಹಣ ಹಂಚಿ, ಮತಗಳನ್ನು ಕೊಂಡು ಗೆದ್ದು ಹೋಗುತ್ತಾರೆ. ಒಮ್ಮೆ ಗೆದ್ದ ನಂತರ ಅವರು ಕ್ಷೇತ್ರದ ಜನತೆಗೆ ಸಿಗುವುದೇ ಇಲ್ಲ," ಎಂದು ಅಸಮಾಧಾನ ಹೊರಹಾಕಿದರು.

​ಸ್ಥಳೀಯ ಸಮಸ್ಯೆಗಳು ಗೌಣ: ಕಾರ್ಮಿಕ ಪರಿಷತ್ ಅಧ್ಯಕ್ಷ ಪರಮೇಶ್
​ಕಾರ್ಮಿಕ ಪರಿಷತ್ ಅಧ್ಯಕ್ಷ ಪರಮೇಶ್ ಮಾತನಾಡಿ
, "ಹೊರಗಿನಿಂದ ಬರುವ ನಾಯಕರು ಚುನಾವಣೆ ಮುಗಿದ ತಕ್ಷಣ ಮಾಯವಾಗುತ್ತಾರೆ. ಇದರಿಂದಾಗಿ ಕ್ಷೇತ್ರದ ಸ್ಥಳೀಯ ಸಮಸ್ಯೆಗಳು ಸಂಪೂರ್ಣವಾಗಿ ಗೌಣವಾಗುತ್ತಿವೆ. ನಮ್ಮ ಕಷ್ಟ-ಸುಖಗಳಿಗೆ ಸ್ಪಂದಿಸುವ ಸ್ಥಳೀಯ ನಾಯಕತ್ವ ಇಂದಿನ ತುರ್ತು ಅಗತ್ಯವಾಗಿದೆ," ಎಂದರು.

​ಮತ ಮಾರಿಕೊಂಡರೆ ಪರಿತಾಪ ಫಿಕ್ಸ್: ಪಿ.ಆರ್. ದಾಸ್ ಎಚ್ಚರಿಕೆ:
​ಕಾಡುಗೊಲ್ಲ ಸಂಘದ ಅಧ್ಯಕ್ಷ ಪಿ.ಆರ್. ದಾಸ್ ಮಾತನಾಡಿ
, ಮತದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು. "ಚುನಾವಣೆಯ ಸಂದರ್ಭದಲ್ಲಿ ಹಣದ ಆಮಿಷಕ್ಕೆ ಒಳಗಾಗಿ ಮತ ಮಾರಿಕೊಂಡರೆ, ಮುಂದಿನ ಐದು ವರ್ಷಗಳ ಕಾಲ ಪಡಬಾರದ ಪಾಡು ಪಡಬೇಕಾಗುತ್ತದೆ, ಪರಿತಪಿಸಬೇಕಾಗುತ್ತದೆ," ಎಂದು ಎಚ್ಚರಿಸಿದರು.

​ಜಾತಿ-ಧರ್ಮ ಮರೆತು ಸ್ಥಳೀಯರನ್ನು ಗೆಲ್ಲಿಸಿ: ಪ್ರೊ. ಚಂದ್ರಶೇಖರ್ ಕರೆ
​"ಈ ಬಾರಿ ಚುನಾವಣೆಯಲ್ಲಿ ಜಾತಿ
, ವರ್ಗ ಹಾಗೂ ಧರ್ಮದ ಬೇಲಿಗಳನ್ನು ಬದಿಗಿಟ್ಟು, ಕೇವಲ ಸ್ಥಳೀಯ ಅಭ್ಯರ್ಥಿಯ ಗೆಲುವಿಗಾಗಿ ನಾವೆಲ್ಲರೂ ಒಂದಾಗಬೇಕು," ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಚಂದ್ರಶೇಖರ್ ಕರೆ ನೀಡಿದರು.

​ಹಿರಿಯೂರಿನಲ್ಲಿ ಕುಡಿಯುವ ನೀರಿಗೂ ತತ್ವಾರ: ಬಾಬುಲಾಲ್ ಬಲಾರ್ ಆಕ್ರೋಶ
​ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿರುವುದನ್ನು ಪ್ರಸ್ತಾಪಿಸಿದ ಬಾಬುಲಾಲ್ ಬಲಾರ್
, "ಇತರ ಊರುಗಳಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರು ಸಿಗುತ್ತದೆ. ಆದರೆ ಇಷ್ಟೊಂದು ಪ್ರಮುಖವಾಗಿರುವ ಹಿರಿಯೂರಿನಲ್ಲಿ ಜನರಿಗೆ ಕುಡಿಯುವ ನೀರೇ ಸಿಗುತ್ತಿಲ್ಲ. ಇದು ಅತ್ಯಂತ ದುರ್ದೈವದ ಸಂಗತಿ," ಎಂದು ವಿಪರ್ಯಾಸವನ್ನು ಬಿಚ್ಚಿಟ್ಟರು.

​ಇದೇ ವೇಳೆ ಮಾತನಾಡಿದ ದೇವರಕೊಟ್ಟ ಜಿ.ಒ ನಾಗರಾಜ್ ಅವರು, "ಪ್ರಸ್ತುತ ದಿನಗಳಲ್ಲಿ ಮತದಾರರು ಹಣವನ್ನು ನೋಡುತ್ತಿದ್ದಾರೆಯೇ ಹೊರತು, ಅಭ್ಯರ್ಥಿ ಸ್ಥಳೀಯನೇ ಅಥವಾ ಒಳ್ಳೆಯವನೇ ಎಂಬುದನ್ನು ಗಮನಿಸುತ್ತಿಲ್ಲ," ಎಂದು ಇಂದಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.

​ಸ್ಥಳೀಯ ಅಭ್ಯರ್ಥಿಗಾಗಿ ಒಕ್ಕೊರಲ ಒತ್ತಾಯ:
​ಸಭೆಯಲ್ಲಿ ಉಪಸ್ಥಿತರಿದ್ದ ನಿವೃತ್ತ ಪ್ರಾಂಶುಪಾಲ ಜಯಣ್ಣ
, ಜಾನ್ ಮೈಕಲ್, ಧರ್ಮಪುರ ಕೃಷ್ಣಮೂರ್ತಿ ಸೇರಿದಂತೆ ನೂರಾರು ಪ್ರಮುಖರು ಭಾಗವಹಿಸಿ, ಈ ಬಾರಿಯ ಉಪ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಹೊರಗಿನವರಿಗೆ ಮಣಿಯದೆ, ಕೇವಲ ಸ್ಥಳೀಯ ವ್ಯಕ್ತಿಗೇ ರಾಜಕೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಒಕ್ಕೊರಲಿನಿಂದ ಒತ್ತಾಯಿಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!