Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೀಟನಾಶಕ ಬಳಕೆಯು ರೈತರಿಗೆ ಕೊನೆಯ ಅಸ್ತ್ರವಾಗಿರಲಿ: ಜೆಡಿ ಮಂಜುನಾಥ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರೈತರು ಕೃಷಿಯಲ್ಲಿ ಸುಸ್ಥಿರ ಇಳುವರಿ ಪಡೆಯಲು ಮತ್ತು ಸಾಗುವಳಿ ವೆಚ್ಚವನ್ನು ಕಡಿಮೆ ಮಾಡಲು ಸಮಗ್ರ ಪೀಡೆ ನಿರ್ವಹಣಾ ಪದ್ಧತಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಚಿತ್ರದುರ್ಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಬಿ. ಮಂಜುನಾಥ ಅವರು ಕರೆ ನೀಡಿದರು.


 ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಾಗೂ ಬೆಂಗಳೂರಿನ ಪ್ರಾದೇಶಿಕ ಕೇಂದ್ರೀಯ ಸಮಗ್ರ ಕೀಟ ನಿರ್ವಹಣಾ ಕೇಂದ್ರದ ವತಿಯಿಂದ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನಲ್ಲಿ ಕೃಷಿ ಪರಿಕರ ಮಾರಾಟಗಾರರಿಗಾಗಿ ಆಯೋಜಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಅವಶ್ಯಕತೆಗೆ ಅನುಗುಣವಾಗಿ ಮಾತ್ರ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಬಳಸಬೇಕು. ಆಗ ಮಾತ್ರ ಕೃಷಿ ಲಾಭದಾಯಕವಾಗಲು ಸಾಧ್ಯ ಎಂದು ತಿಳಿಸಿದ ಅವರು, ಶೇಂಗಾ ಬೆಳೆಯ ಸಮಗ್ರ ಪೀಡೆ ನಿರ್ವಹಣೆಯ ಮಾಹಿತಿ ಕರಪತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.

ಉಪ ಕೃಷಿ ನಿರ್ದೇಶಕ ಉಮೇಶ್ ಡಿ. ಮಾತನಾಡಿ, ಅಂಗಡಿಗೆ ಬರುವ ರೈತರಿಗೆ ಕೃಷಿ ಪರಿಕರ ಮಾರಾಟಗಾರರು ಕೇವಲ ಕೀಟನಾಶಕಗಳನ್ನು ಮಾರುವುದಕ್ಕೆ ಸೀಮಿತವಾಗಬಾರದು. ರೋಗ ಮತ್ತು ಕೀಟಗಳ ನಿರ್ವಹಣೆಗೆ ರಾಸಾಯನಿಕ ಕೀಟನಾಶಕಗಳನ್ನು ಕೊನೆಯ ಅಸ್ತ್ರವಾಗಿ ಶಿಫಾರಸ್ಸು ಮಾಡಬೇಕು.ರೈತರಿಗೆ ಮಾಗಿ ಉಳುಮೆ, ಸರಿಯಾದ ತಳಿ ಆಯ್ಕೆ, ಬೀಜೋಪಚಾರ, ಜೈವಿಕ ಗೊಬ್ಬರ ಹಾಗೂ ಮಿಶ್ರ ಮತ್ತು ಅಂತರ ಬೆಳೆಗಳ ಅಳವಡಿಕೆಯ ಬಗ್ಗೆ ಮನವರಿಕೆ ಮಾಡಿಕೊಡುವಂತೆ ಅವರು ಮಾರಾಟಗಾರರಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಕೃಷಿ ನಿರ್ದೇಶಕ ಶಿವಕುಮಾರ್ ಕೆ.ಎಸ್., ದೇಶದ ಆಹಾರ ಭದ್ರತೆ ಮತ್ತು ರೈತರ ಆದಾಯ ವೃದ್ಧಿಗೆ ಸಮಗ್ರ ಕೃಷಿ ಪದ್ಧತಿಯೇ ಸೂಕ್ತ ಮಾರ್ಗ ಎಂದರು.

ಬೆಂಗಳೂರು ಕೇಂದ್ರದ ಸಸ್ಯ ಸಂರಕ್ಷಣಾಧಿಕಾರಿ ಡಾ. ಜಯಸಿಂಹ ಅವರು, ವಿವೇಚನೆಯಿಲ್ಲದೆ ರಾಸಾಯನಿಕ ಬಳಸುವುದರಿಂದ ಆಹಾರ ಪದಾರ್ಥಗಳ ರಫ್ತಿನ ಮೇಲೆ ಉಂಟಾಗುತ್ತಿರುವ ಕಠಿಣ ಪರಿಣಾಮಗಳ ಬಗ್ಗೆ ಎಚ್ಚರಿಸಿದರು. ನಂತರ ರೈತರು ಕೀಟನಾಶಕಗಳನ್ನು ಬಳಸುವಾಗ, ಬಳಸುವ ಮುನ್ನ ಮತ್ತು ಬಳಕೆಯ ನಂತರ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು.



ಸಹಾಯ ಸಸ್ಯ ಸಂರಕ್ಷಣಾಧಿಕಾರಿಗಳಾದ ವಿ.ಭವ್ಯ ರಾಷ್ಟ್ರೀಯ ಕೀಟ ಸರ್ವೇಕ್ಷಣಾ ವ್ಯವಸ್ಥೆ ಮೊಬೈಲ್ ಅಪ್ಲಿಕೇಶನ್ ಬಳಕೆ ಕುರಿತು ಹಾಗೂ ನವೀನ್ ಜೈವಿಕ ಕೀಟನಾಶಕಗಳು ಹಾಗೂ ಪರಭಕ್ಷಕ ಜೀವಿಗಳ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು.

ತರಬೇತಿಯಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ಆರ್ ಸೇರಿದಂತೆ ಜಿಲ್ಲೆಯ ನೂರಾರು ಕೃಷಿ ಪರಿಕರ ಮಾರಾಟಗಾರರು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ