Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಲಿ: ನಿವೃತ್ತ ಡಿಹೆಚ್ಒ ಡಾ. ಎಸ್.ಆರ್ ಮಹಾಲಿಂಗಪ್ಪ ಕರೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಆರೋಗ್ಯವೇ ನಿಜವಾದ ಭಾಗ್ಯ. ವಿದ್ಯಾರ್ಥಿಗಳು ಬಾಲ್ಯದಿಂದಲೇ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ನಿವೃತ್ತ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಖ್ಯಾತ ಮಕ್ಕಳ ತಜ್ಞ ಡಾ. ಎಸ್.ಆರ್ ಮಹಾಲಿಂಗಪ್ಪ ಅವರು ಕರೆ ನೀಡಿದರು.

ನಗರದ ವಾಗ್ದೇವಿ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ "ವೈದ್ಯರ ದಿನಾಚರಣೆ" ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಪೋಷಕರು-ಶಿಕ್ಷಕರ ಮಾರ್ಗದರ್ಶನ ಮುಖ್ಯ:
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಮಹಾಲಿಂಗಪ್ಪ, "ಮಕ್ಕಳು ತಂದೆ-ತಾಯಿ ಮತ್ತು ಪೋಷಕರು ತೋರಿಸುವ ಸನ್ಮಾರ್ಗದಲ್ಲಿ ನಡೆಯಬೇಕು. ಜೊತೆಗೆ ಶಾಲೆಗಳಲ್ಲಿ ಶಿಕ್ಷಕರು ಹೇಳಿಕೊಡುವ ಪಠ್ಯಕ್ರಮ ಹಾಗೂ ಶಿಸ್ತಿನ ಜೀವನದ ಮಾರ್ಗಸೂಚಿಗಳನ್ನು ಚಾಚೂ ತಪ್ಪದೆ ಅನುಸರಿಸಿದಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ" ಎಂದು ಕಿವಿಮಾತು ಹೇಳಿದರು.

ಡಾ. ಮಹಾಲಿಂಗಪ್ಪ ಅವರಿಗೆ ಗೌರವ ಸನ್ಮಾನ:
ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ನಿವೃತ್ತ ಡಿಹೆಚ್ಒ ಡಾ. ಎಸ್.ಆರ್. ಮಹಾಲಿಂಗಪ್ಪ ಅವರ ಸೇವೆಯನ್ನು ಸ್ಮರಿಸಿ, ವಾಗ್ದೇವಿ ವಿದ್ಯಾಸಂಸ್ಥೆಯ ವತಿಯಿಂದ ಅವರನ್ನು ಅತ್ಯಂತ ಭಕ್ತಿಪೂರ್ವಕವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾಗ್ದೇವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಜಿ. ಶ್ರೀಧರ್, ವಾಸವಿ ಯುವಜನ ಸಂಘದ ಅಧ್ಯಕ್ಷ ವಿ. ಜಗದೀಶ್ ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.