Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪಲಿ: ಟಿ.ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಜ್ಯ ಸರ್ಕಾರ ಪ್ರತಿಯೊಂದು ಯೋಜನೆ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳಲೇಬೇಕು ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಶನಿವಾರ ನಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬಗರ್‌ಹುಕ್ಕುಂ, ನಗರ ಆಶ್ರಯ ಮತ್ತು ಆರಾಧನಾ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಗರ ಆಶ್ರಯ ಸಮಿತಿಗೆ ಸಂಬಂಧಿಸಿಂತೆ ಪೌರಾಯುಕ್ತ ಜಗರೆಡ್ಡಿಗೆ ಸೂಚನೆ ನೀಡಿದ ಶಾಸಕರು ನಗರ ಆಶ್ರಯ ಸಮಿತಿ ಸಭೆಯಲ್ಲಿ ಕೈಗೊಳ್ಳುವ ಎಲ್ಲಾ ನಿರ್ಣಯಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ನಿಮ್ಮದ್ದು. ಇದರಲ್ಲಿ ಲೋಪವಾದರೆ ಸಹಿಸುವುದಿಲ್ಲವೆಂದರು. ಪೌರಾಯುಕ್ತ ಜಗರೆಡ್ಡಿ ಮಾಹಿತಿ ನೀಡಿ ವಾಜಿಪೇಯಿ ವಸತಿ ಯೋಜನೆ ೭೧, ಅಂಬೇಡ್ಕರ್ ವಸತಿ ಯೋಜನೆಯಲ್ಲಿ ೨೪ ಅರ್ಜಿಗಳು ಈಗಾಗಲೇ ಎಲ್ಲಾ ದಾಖಲಾತಿಗಳೊಂದಿಗೆ ತಯಾರಿವೆ ಎಂದರು.

ಬಗರ್‌ಹುಕ್ಕುಂ ಸಮಿತಿ ಉದ್ದೇಶಿಸಿ ಮಾತನಾಡಿದ ಶಾಸಕ ಈಗಾಗಲೇ ತುರುವನೂರು ಹೋಬಳಿ ಮಟ್ಟದಲ್ಲಿ ೧೬, ನಗರ ಕಸಬಾದಲ್ಲಿ ೧೫ ಫಲಾನುಭವಿಗಳು ಈಗಾಗಲೇ ಸಮಿತಿಯಿಂದ ಶಿಫಾರಸ್ಸುಗೊಂಡಿದ್ದು ಕೂಡಲೇ ಅವರಿಗೆ ಸಾಗುವಳಿಚೀಟಿ ನೀಡುವಂತೆ ಸೂಚಿಸಿದರು. ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿದ್ದರೂ ಕೆಲವೊಂದು ಸಣ್ಣಪುಟ್ಟ ಲೋಪಗಳಿದ್ದರೆ ತಿರಸ್ಕರಿಸುವುದು ಬೇಡ. ಮತ್ತೊಮ್ಮೆ ಪರಿಶೀಲನೆ ನಡೆಸಿ ಸೂಕ್ತ ಫಲಾನುಭವಿ ಗುರುತಿಸಿ ಸೌಲಭ್ಯಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಆರಾಧನ ಸಮಿತಿ ಸದಸ್ಯರೊಂದಿಗೆ ಮಾತನಾಡಿದ ಅವರು, ೨೦೨೩-೨೪ನೇ ಸಾಲಿನಲ್ಲಿ ಈಗಾಗಲೇ ಫಲಾನುಘವಿಗಳನ್ನು ಗುರುತಿಸುವ ಕಾರ್ಯ ಮುಕ್ತಾಯಗೊಂಡಿದೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಪರಿಹಾರ ಕಲ್ಪಿಸಲಾಗುವುದು ಎಂದರು.

ಸಭೆಯಲ್ಲಿ ತಹಶೀಲ್ಧಾರ್ ರೇಹಾನ್‌ಪಾಷ, ಚಿತ್ರದುರ್ಗ ತಹಶೀಲ್ಧಾರ್ ನಾಗವೇಣಿ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸಮುದಾಯ ಅಧಿಕಾರಿ ಭೂತಣ್ಣ, ಲೋಕೋಪಯೋಗಿ ಇಂಜಿನಿಯರ್ ವಿಜಯಭಾಸ್ಕರ್, ಸಮಾಜ ಕಲ್ಯಾಣಾಧಿಕಾರಿ ದೇವ್ಲಾನಾಯ್ಕ, ಪರಿಶಿಷ್ಟ ಪಂಗಡಗಳ ಅಧಿಕಾರಿ ಶಿವರಾಜ್, ಸರ್ವೆ ಅಧಿಕಾರಿ ಬಾಬುರೆಡ್ಡಿ, ಬಿಸಿಎಂ ಅಧಿಕಾರಿ ರಮೇಶ್, ಶಿರಸ್ತೇದಾರ್ ಸದಾಶಿವಪ್ಪ, ಆರ್.ತಿಪ್ಪೇಸ್ವಾಮಿ, ಡಿ.ಪ್ರಕಾಶ್, ಸುಮಲತಾ, ಸಮಿತಿ ಸದಸ್ಯರಾದ ಯರ್ರಬಾಲಪ್ಪ, ಲಕ್ಷ್ಮಿದೇವಿ, ರಾಜಶೇಖರ್, ಜಿ.ಮಾರಪ್ಪ  ಮುಂತಾದವರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ