Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಂಥಪಾಲಕಿ ಭಾಗ್ಯವತಿ ಆತ್ಮಹತ್ಯೆ, ಕಾಂಗ್ರೆಸ್ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಸಾವು ಕರ್ನಾಟಕ ಕಾಂಗ್ರೆಸ್ ಸರ್ಕಾರದ ದಿವಾಳಿತನ ಹಾಗೂ ಹೃದಯ ಹೀನ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ.

ಭಾಗ್ಯವತಿ ಅಗ್ಗಿಮಠ ಅವರ ದುರಂತ ಅಂತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಾಪ್ರಹಾರ ಮಾಡಿದ್ದಾರೆ. 

ರಾಜ್ಯದ ನಿರ್ದಯಿ ಸರ್ಕಾರ ತನ್ನ ನೌಕರರಿಗೆ ಸಂಬಳ ಕೊಡದ ಸ್ಥಿತಿಗೆ ತಲುಪಿ ಸಂಬಳವನ್ನೇ ನೆಚ್ಚಿಕೊಂಡು ಬದುಕು ನಡೆಸುವ ನೌಕರರ ಪಾಲಿಗೆ ಕಂಟಕಪ್ರಾಯವಾಗಿದೆ. ಸರ್ಕಾರದ ಈ ನಡೆ ಅತ್ಯಂತ ಖಂಡನೀಯ. ಮೃತ ಭಾಗ್ಯವತಿ ಅಗ್ಗಿಮಠ ಅವರ ಕುಟುಂಬ ಅತ್ಯಂತ ಸಂಕಷ್ಟದಲ್ಲಿದ್ದು ಈ ಕೂಡಲೇ ಸೂಕ್ತ ಪರಿಹಾರ ಹಾಗೂ ಒಬ್ಬರಿಗೆ ನೌಕರಿ ನೀಡುವ ಮೂಲಕ ಮೃತರ ಅವಲಂಬಿತ ಮಕ್ಕಳ ನೆರವಿಗೆ ಬಂದು ಸರ್ಕಾರ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. 

ಮುಖ್ಯಮಂತ್ರಿಗಳಿಂದ ಹಿಡಿದು ಇತರ ಮಂತ್ರಿಗಳು ಹಾಗೂ ಅಧಿಕಾರಿಗಳು ಜನರ, ರೈತರ, ಸಮಸ್ಯೆಗಳಿಗೆ ಸ್ಪಂದಿಸದೆ, ವಿಮುಖರಾಗಿ ಅಧಿಕಾರ ರಾಜಕಾರಣದತ್ತ ತಮ್ಮ ಸಂಪೂರ್ಣ ಸಮಯವನ್ನು ಕೇಂದ್ರೀಕರಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಜಿಲ್ಲೆಯ ಸ್ಥಿತಿ ಏನಾಗಿದೆ ಎಂದು ತಿಳಿದುಕೊಳ್ಳುವ ವ್ಯವಧಾನ ತೋರುತ್ತಿಲ್ಲ , ಬಡವರ ಗೋಳು ಆಲಿಸುತ್ತಿಲ್ಲ.

ನಿರ್ಲಕ್ಷ್ಯ, ಉಡಾಫೆ ಧೋರಣೆ ಕೈಸರ್ಕಾರದ ಆಡಳಿತ ವೈಖರಿ ಎನ್ನುವುದಕ್ಕೆ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಾಕ್ಷಿ ಒದಗಿಸಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ