Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ಶ್ವಾಸಕೋಶಗಳಿಗೆ ಜೀವನ ಶೈಲಿ ಬದಲಾವಣೆ ಅಗತ್ಯ- ಡಾ.ಬಿ.ವಿ.ಗಿರೀಶ್

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರೋಗ್ಯಕರ ಶ್ವಾಸಕೋಶಗಳಿಗೆ ಉತ್ತಮ ಅಭ್ಯಾಸಗಳ ಮೂಲಕ ನಿಮ್ಮ ಜೀವನ ಶೈಲಿ ಬದಲಾವಣೆ ಮಾಡಿಕೊಳ್ಳಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.

 ಇಲ್ಲಿನ ಚೋಳಘಟ್ಟ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಕ್ಷಿಪ್ರ ನಿಘಾವಣಾ ತಂಡದ ಸದಸ್ಯರಿಗೆ, ಚುನಾಯಿತ ಪ್ರತಿನಿಧಿಗಳಿಗೆ, ಸಮನ್ವಯ ಇಲಾಖೆಗಳ ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಗ್ರಾಮ ಆರೋಗ್ಯ ಯೋಜನೆ ತರಬೇತಿ ಕಾರ್ಯಾಗಾರ ಹಾಗೂ ವಿಶ್ವ ಶ್ವಾಸಕೋಶ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶ್ವಾಸಕೋಶಗಳ ಆರೋಗ್ಯ ಕಾಪಾಡುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಶುದ್ಧವಾದ ಗಾಳಿಯನ್ನು ಸೇವಿಸಿ ಆರೋಗ್ಯಕರ ಶ್ವಾಸಕೋಶ ನಿಮ್ಮದಾಗಲಿ ಎಂದು ಹೇಳಿದರು.

 ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತಿ ಕ್ಷಿಪ್ರ ನಿಘಾವಣಾ ತಂಡ ಸಕ್ರಿಯವಾಗಿ ಭಾಗವಹಿಸಿ ಗ್ರಾಮ ಆರೋಗ್ಯ ಯೋಜನೆ ಅನುಷ್ಠಾನಗೊಳಿಸಬೇಕು. ಈ ತರಬೇತಿಯು ನಿಮ್ಮ ಜ್ಞಾನ ಕೌಶಲ್ಯ ಬಲ ಪಡಿಸಲಿದೆ ಎಂದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಗ್ರಾಮ ಪಂಚಾಯತಿ ಮಟ್ಟದ ನಿಘಾವಣ ತಂಡ ಸಾರ್ವಜನಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ತಮ್ಮ ತಮ್ಮ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ, ಗ್ರಾಮ ಪಂಚಾಯತಿ ವೆಬ್ ಪೋರ್ಟಲ್‌ನಲ್ಲಿ ದತ್ತಾಂಶವನ್ನು ಇಂದನೀಕರಿಸಿ ಒಂದು ಗ್ರಾಮ ಪಂಚಾಯತಿ ಸ್ವಾಸ್ಥ್ಯನಕ್ಷೆ ರಚಿಸಿ ಎಂದರು.

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ವಾಸವಿ ಅವರು ಬಾಲ್ಯ ವಿವಾಹ ತಡೆ ಕಾಯ್ದೆ ಗ್ರಾಮ ಪಂಚಾಯತಿ ಜವಾಬ್ದಾರಿ ಬಗ್ಗೆ ತಿಳಿಸಿದರು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರೂಪ ಅವರು ಮಕ್ಕಳ ಹಕ್ಕು ಅಪೌಷ್ಟಿಕತೆ ಬಗ್ಗೆ ತಿಳಿಸಿದರು.

ಮಾನಸಿಕ ಆರೋಗ್ಯ ಸಮಾಲೋಚಕ ಡಾ.ಶ್ರೀಧರ್ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋಚೈತನ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕ್ಷಯರೋಗ, ರಕ್ತಹೀನತೆ ನಿಯಂತ್ರಣ ಕೀಟಜನ್ಯ ರೋಗಗಳ ನಿಯಂತ್ರಣದ ಬಗ್ಗೆ ತಿಳಿಸಿದರು. ತಾಲ್ಲೂಕು ಆಶಾ ಬೋಧಕಿ ತಬಿತ ಕಿಶೋರಿ ಆರೋಗ್ಯದ ಬಗ್ಗೆ ಮಾತನಾಡಿ, ಕಿಶೋರಿಯರಿಗೆ ಸಂಬAಧಿಸಿದ ಮುಟ್ಟಿನ ದೋಷದ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತಿಳಿಸಿದರು.

 ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಿರ್ಮಲಾ, ಸದಸ್ಯರಾದ ಸುರೇಶ್ ಉಗ್ರಾಣ್, ಚಂದ್ರಶೇಖರ, ಮಂಜುಳಾ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರೂಪಕುಮಾರಿ, ಸಮುದಾಯ ಆರೋಗ್ಯಾಧಿಕಾರಿ ಪ್ರದೀಪ್, ಆಶಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮಂಜುಳ ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ