Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರಳಯ್ಯ ಶ್ರೀಗಳ ಆರೋಗ್ಯ ವಿಚಾರಿಸಿದ ಮಾದಾರ ಚೆನ್ನಯ್ಯ ಸ್ವಾಮೀಜಿ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇತ್ತೀಚೆಗೆ ಹಲ್ಲೆಗೊಳಗಾಗಿ ಇಲ್ಲಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರಳಯ್ಯ ಸ್ವಾಮೀಜಿಯವರನ್ನು ಪರಮಪೂಜ್ಯ ಡಾ. ಮಾದಾರ ಚೆನ್ನಯ್ಯ ಶ್ರೀಗಳು ನಿನ್ನೆ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಗಳು, ಹರಳಯ್ಯ ಸ್ವಾಮೀಜಿಯವರನ್ನು ಉಪಚರಿಸುತ್ತಿರುವ ವೈದ್ಯರಿಂದ ಅವರ ಸದ್ಯದ ಆರೋಗ್ಯ ಸ್ಥಿತಿಯ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಅಲ್ಲದೆ, ಶ್ರೀಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಬೇಕು ಎಂದು ವೈದ್ಯಕೀಯ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಿಷ್ಪಕ್ಷಪಾತ ತನಿಖೆಗೆ ಒತ್ತಾಯ:
ಸ್ವಾಮೀಜಿಯವರ ಮೇಲಿನ ಹಲ್ಲೆ ಘಟನೆಯ ಕುರಿತು ತೀವ್ರ ಆತಂಕ ಹಾಗೂ ಕಳವಳ ವ್ಯಕ್ತಪಡಿಸಿದ ಡಾ. ಮಾದಾರ ಚೆನ್ನಯ್ಯ ಶ್ರೀಗಳು
, "ಪೂಜ್ಯರ ಮೇಲಿನ ಹಲ್ಲೆ ಖಂಡನೀಯ. ಪೊಲೀಸ್ ಇಲಾಖೆ ಹಾಗೂ ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಘಟನೆಯ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ, ಹಲ್ಲೆ ನಡೆಸಿದ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು" ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಹರಳಯ್ಯ ಸ್ವಾಮೀಜಿಯವರು ಯಾವುದೇ ಪ್ರಾಣಾಪಾಯವಿಲ್ಲದೆ, ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಮಾದಾರ ಚೆನ್ನಯ್ಯ ಶ್ರೀಗಳು ಭಗವಂತನಲ್ಲಿ ಹಾರೈಸಿದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.