ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜಗಳೂರು ಸರ್ಕಾರಿ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕರಾಗಿರುವ ಮಧು ಹೆಚ್. ಇವರು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಿಂದ ಪಿ.ಎಚ್.ಡಿ. ಪದವಿ ಪಡೆದಿರುತ್ತಾರೆ.
ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಜೇಂದ್ರ ಪ್ರಸಾದ್ ಎಸ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿರುವ ಸಿಂಥೆಸಿಸ್ ಕ್ಯಾರೆಕ್ಟರೈಸೇಷನ್ ಆಫ್ ಕ್ಲೇ ಡೋಪ್ಡ್ ಫೆರೈಟಿಸ್ ಅಂಡ್ ದೇರ್ ಅಪ್ಲಿಕೇಷನ್ಸ್ ಎಂಬ ವಿಷಯದ ಕುರಿತು ಮಂಡಿಸಿರುವ ಪ್ರಬಂಧಕ್ಕೆ ಮಧು ಹೆಚ್. ಇವರಿಗೆ ಪಿ.ಎಚ್.ಡಿ. ಪದವಿ ಲಭಿಸಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ.


